ಬಿ.ಕಾಂ ವಿದ್ಯಾರ್ಥಿಗಳಿಗೆ ಸ್ಟಾಕ್ ಮಾರ್ಕೆಟ್ ಆಪರೇಶನ್ ಪುಸ್ತಕ ಬಿಡುಗಡೆ

ಹುಬ್ಬಳ್ಳಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ವಾಣಿಜ್ಯ ಕಾಲೇಜಿನ ಉಪನ್ಯಾಸಕರಾದ ಕಿರಣಕುಮಾರ ಬಾಲಾಜಿ ಅವರು ಹೊಸ ಶಿಕ್ಷಣ ನೀತಿ ಅನ್ವಯ ಬಿ.ಕಾಂ ವಿದ್ಯಾರ್ಥಿಗಳಿಗಾಗಿ ರಚಿಸಿದ “ಸ್ಟಾಕ್ ಮಾರ್ಕೆಟ್ ಆಪರೇಶನ್” ಎಂಬ ಪುಸ್ತಕವನ್ನು ಜೆ.ಎಸ್.ಎಸ್ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಹಾವೀರ ಉಪಾದ್ಯೆ, ಜಿನೇಂದ್ರ ಕುಂದಗೋಳ, ಶಾಂತಿನಾಥ ರೋಖಡೆ ಉಪಸ್ಥಿತರಿದ್ದರು.