ಶಿವಮೊಗ್ಗ: ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗ: ಶಿವಮೊಗ್ಗದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಬರ್ಬರವಾಗಿ ಹೊಡೆದು ಕೊಂದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸೋಮವಾರ ರಾತ್ರಿ ವಿಶೇಷ ತರಗತಿ ಮುಗಿಸಿ ವಿದ್ಯಾರ್ಥಿಗಳು ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ವಿದ್ಯಾರ್ಥಿಯನ್ನು ಸಂಕೇತ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC … Continued

ಕಾರವಾರ : ಸಮುದ್ರ ಸ್ನಾನ ಮಾಡುವಾಗ ಮುಳುಗಿ ಬಾಲಕ ಸಾವು

ಕಾರವಾರ: ಶಿವರಾತ್ರಿ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆ ಇಳಿದ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಗಾಂವಗೇರಿಯ ಯಶ್ (17) ಎಂಬಾತ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬಾಲಕನಾಗಿದ್ದಾನೆ. ಶಿವರಾತ್ರಿ ಹಿನ್ನೆಲೆಯನ್ನು ಮಾಜಾಳಿ ಸಮುದ್ರಕ್ಕೆ ರಾಮನಾಥ ಪರಿವಾರ ದೇವರು ಸೇರುದಂತೆ ಸುತ್ತಮುತ್ತಲಿನ ದೇವರನ್ನು ಪಲ್ಲಕ್ಕಿಯಲ್ಲಿ ತಂದು … Continued

ಅಪ್ರಾಪ್ತ ಗೆಳತಿ ಜೊತೆ ಮದುವೆ ಮಾಡಿಸಿ ಎಂದು ಹಠ ; 11 ಕೆ.ವಿ. ವಿದ್ಯುತ್‌ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ…!

 ಪ್ರತಾಪಗಢ (ಉತ್ತರ ಪ್ರದೇಶ): ಅಪ್ರಾಪ್ತ ವಯಸ್ಸಿನ ಗೆಳತಿಯೊಂದಿಗೆ ತನ್ನ ವಿವಾಹ ಮಾಡಿಸಬೇಕೆಂದು ಪಟ್ಟು ಹಿಡಿದ 15 ವರ್ಷದ ಬಾಲಕನೊಬ್ಬ ಹೈ-ಟೆನ್ಷನ್ ವಿದ್ಯುತ್ ಲೈನ್ ಏರಿ ಹೈಡ್ರಾಮಾ ಸೃಷ್ಟಿಸಿದ ಘಟನೆ ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಸುಮಾರು 35 ಅಡಿ ಎತ್ತರದ ವಿದ್ಯುತ್ ತಂತಿಯನ್ನು ಹಿಡಿದು ನೇತಾಡುತ್ತಿದ್ದ ಬಾಲಕನನ್ನು ಸುಮಾರು 40 ನಿಮಿಷಗಳ ಸತತ … Continued

ಬೀದಿ ಬದಿ ತಿಂಡಿ ಚಪಲಕ್ಕೆ ಬಿದ್ದು ಮನೆಯಲ್ಲಿದ್ದ ₹85 ಲಕ್ಷ ಮೌಲ್ಯದ ಒಡವೆಗಳನ್ನೇ ಕದ್ದು ಅಂಗಡಿಯವನಿಗೆ ನೀಡಿದ ಬಾಲಕ..!

ದೇವರಿಯಾ (ಉತ್ತರ ಪ್ರದೇಶ):  ಅಚ್ಚುಮೆಚ್ಚಿನ ತಿನಿಸು ತಿನ್ನಬೇಕೆಂಬ ಹಂಬಲ ಯಾರಿಗೆ ಇರುವುದಿಲ್ಲ ಹೇಳಿ? ಆದರೆ ಅದೇ ಹಂಬಲ ವ್ಯಸನವಾಗಿ ಬದಲಾದಾಗ ಎಂತಹ ಅನಾಹುತ ಸಂಭವಿಸುತ್ತದೆ ಎಂಬುದಕ್ಕೆ ಈ ಘಟನೆಯೇ ಒಂದು ನಿದರ್ಶನವಾಗಿದೆ. ಅತ್ಯಂತ ಪ್ರಸಿದ್ಧ ಬೀದಿ ಬದಿಯ ಆಹಾರವಾದ ಕೇವಲ ಒಂದು ಪ್ಲೇಟ್ ‘ಮೊಮೊಸ್’ ತಿನ್ನುವ ಚಪಲಕ್ಕೆ ಬಿದ್ದ 14 ವರ್ಷದ ಬಾಲಕನೊಬ್ಬ, ಮನೆಯಲ್ಲಿದ್ದ ಸುಮಾರು … Continued

ತಾಯಿ ಕುರ್‌ ಕುರೆ ಕೊಡಿಸಿಲ್ಲವೆಂದು ಪೊಲೀಸರಿಗೆ ದೂರು ನೀಡಿದ ಬಾಲಕ….!

ಭೋಪಾಲ : ಕುರ್‌ ಕುರೆ ಕೊಡಿಸಿ ಎಂದು ಕೇಳಿದ್ದಕ್ಕೆ ತನ್ನ ತಾಯಿ ಮತ್ತು ಅಕ್ಕ ತನಗೆ ಹೊಡೆದಿದ್ದಾರೆ ಎಂದು 8 ವರ್ಷದ ಬಾಲಕನೊಬ್ಬ ಪೊಲೀಸರಿಗೆ ದೂರು ನೀಡಿದ ಅಪರೂಪದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿಯ ಚಿತರ್‌ವೈ ಕಲಾ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಲಕ ಕುರ್‌ಕುರೆ ಪ್ಯಾಕೆಟ್ ಖರೀದಿ ಮಾಡಲು ತಾಯಿಯ ಬಳಿ 20 ರೂ. ಕೊಡುವಂತೆ … Continued

ವಿಮಾನದ ಚಕ್ರದ ಬಳಿ ಅಡಗಿಕೊಂಡು 1000 ಕಿಮೀ ಪ್ರಯಾಣಿಸಿ ದೆಹಲಿಗೆ ಬಂದ 13 ವರ್ಷದ ಅಫ್ಘಾನ್ ಬಾಲಕ; ಬದುಕುಳಿದದ್ದೇ ಪವಾಡ…!

ನವದೆಹಲಿ: ಅಪಘಾನಿಸ್ತಾನದ ಕಾಬೂಲಿನಿಂದ ದೆಹಲಿಗೆ ವಿಮಾನದಲ್ಲಿ ಅದರ ಚಕ್ರದ ಬಳಿ ಲ್ಯಾಂಡಿಂಗ್ ಗೇರಿನಲ್ಲಿ ಅಡಗಿಕೊಂಡು 13 ವರ್ಷದ ಅಫ್ಘಾನ್ ಬಾಲಕ ಪ್ರಯಾಣ ಮಾಡಿದ್ದಾನೆ…! ಈಗ ಈತನನ್ನು ಪುನಃ ಅಫ್ಘಾನಿಸ್ತಾನಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ವಿಮಾನವು ಇರಾನ್‌ಗೆ ಹೋಗುತ್ತಿದೆ ಎಂದು ತಪ್ಪಾಗಿ ಭಾವಿಸಿದ ಬಾಲಕ, ಕಾಬೂಲಿನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಬರುವ KAM … Continued

ಶಿರಸಿ : ಏರ್‌ ಗನ್‌ ನಿಂದ ಗುಂಡು ಹಾರಿ ಬಾಲಕ ಸಾವು

ಶಿರಸಿ: ಎರಡು ಮಕ್ಕಳು ಆಟವಾಡುತ್ತಿದ್ದಾಗ ಆಕಸ್ಮಾತ್‌ ಆಗಿ ಏರ್ ಗನ್ ಗುಂಡು ಹಾರಿ ಒಂಬತ್ತು ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಟ್ಟ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚಿಪಗಿ ಸಮೀಪದ ಸೋಮನಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಸೋಮನಳ್ಳಿಯ ರಾಘವೇಂದ್ರ ಹೆಗಡೆ ಎಂಬವರ ಮನೆಯಲ್ಲಿ ಕೆಲಸ ಮಾಡಲು ಬಸಪ್ಪ ಉಂಡಿಯರ್ ಕುಟುಂಬ … Continued

ತರಗತಿಯಲ್ಲಿ ವಿದ್ಯಾರ್ಥಿ ಕಪಾಳಕ್ಕೆ ಹೊಡೆದ ಶಿಕ್ಷಕ ; ಊಟದ ಡಬ್ಬಿಯಲ್ಲಿ ಪಿಸ್ತೂಲ್‌ ತಂದು ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ…!!

ಡೆಹ್ರಾಡೂನ್: ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಗಂಗನ್‌ದೀಪ್ ಸಿಂಗ್ ಕೊಹ್ಲಿ ಎಂಬ ಶಿಕ್ಷಕರು ಭೌತಶಾಸ್ತ್ರ ಬೋಧಿಸುತ್ತಿದ್ದಾಗ ತಮ್ಮ ವಿದ್ಯಾರ್ಥಿಯೊಬ್ಬನಿಗೆ ಕಪಾಳಮೋಕ್ಷ ಮಾಡಿದ್ದರು. ಬುಧವಾರ, ಅದೇ ವಿದ್ಯಾರ್ಥಿ ತನ್ನ ಟಿಫಿನ್ ಬಾಕ್ಸ್‌ನಲ್ಲಿ ಬಂದೂಕನ್ನು ತಂದು ಕೊಹ್ಲಿಯ ಬೆನ್ನಿಗೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುನಾನಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕನ … Continued

ಕ್ರಿಕೆಟ್ ಚೆಂಡು ಹುಡುಕುತ್ತಿದ್ದ ಬಾಲಕನಿಗೆ ಶಿಥಿಲಗೊಂಡ ಮನೆಯೊಳಗೆ ಕಂಡಿದ್ದು ಅಸ್ಥಿಪಂಜರ…!

ಕಳೆದುಹೋದ ಕ್ರಿಕೆಟ್ ಚೆಂಡನ್ನು ಹುಡುಕುತ್ತಿದ್ದ ಬಾಲಕನೊಬ್ಬ ಮಾರುಕಟ್ಟೆ ಪ್ರದೇಶದಲ್ಲಿ ಬೀಗ ಹಾಕಿದ, ಶಿಥಿಲಗೊಂಡ ಮನೆಯೊಳಗೆ ಅಸ್ಥಿಪಂಜರದ ಅವಶೇಷಗಳನ್ನು ಕಂಡು ಬೆಚ್ಚಿಬಿದ್ದ ಘಟನೆ ಹೈದರಾಬಾದ್‌ನ ನಾಂಪಲ್ಲಿ ಪ್ರದೇಶದಲ್ಲಿ ಸೋಮವಾರ ನಡೆದಿದೆ. ಈ ಅಸ್ತಿ ಪಂಜರದ ಅವಶೇಷಗಳು ಮಧ್ಯವಯಸ್ಕ ವ್ಯಕ್ತಿಯದ್ದಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ, ಈತ 2015 ರಿಂದ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಬಾಲಕ ಕ್ರಿಕೆಟ್‌ ಚೆಂಡನ್ನು ಎತ್ತಿಕೊಂಡು … Continued

ಒಬ್ಬನೇ ಹುಡುಗನಿಗಾಗಿ ನಡುರಸ್ತೆಯಲ್ಲೇ ಬಡಿದಾಡಿಕೊಂಡ ಇಬ್ಬರು ಹುಡುಗಿಯರು…!

ಲಕ್ನೋ: ತಮ್ಮ ಶಾಲೆಯಲ್ಲಿ ಓದುತ್ತಿರುವ ಒಂದೇ ಹುಡುಗನನ್ನು ತಾವಿಬ್ಬರೂ ಇಷ್ಟಪಡುತ್ತಿದ್ದೇವೆ ಎಂದು ತಿಳಿದ ನಂತರ ಇಬ್ಬರು ಹದಿಹರೆಯದ ಹುಡುಗಿಯರು ಜನನಿಬಿಡ ರಸ್ತೆಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ಸಿಂಘ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅಮೀನಗರ್ ಸರಾಯ್ ಟೌನ್‌ನಲ್ಲಿ ನಡೆದ ಈ ಘಟನೆಯ ವೀಡಿಯೊ ವೈರಲ್ ಆಗಿದೆ. ಈ … Continued