ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಶನ್ ಪ್ರಕರಣ : ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ :  ಡಿನೋಟಿಫಿಕೇಷನ್  ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಲು ಪೂರ್ವಾನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆಕ್ಷನ್ 17Aಗೆ ಸಂಬಂಧಿಸಿದ ಸ್ಪಷ್ಟನೆಗಾಗಿ ಸುಪ್ರೀಂ ಕೋರ್ಟ್ ವಿಸ್ತೃತ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಿದೆ. ನ್ಯಾ. ಜೆ.ಬಿ ಪರ್ದಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠ ವಿಸ್ತೃತ ವಿಚಾರಣೆ ನಡೆಸಿತ್ತು. ಸೋಮವಾರ ಈ ಬಗ್ಗೆ ತೀರ್ಪು ನೀಡಿದ … Continued

ಪೋಕ್ಸೊ ಪ್ರಕರಣ ; ಮಾಜಿ ಸಿಎಂ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಅವರಿಗೆ ಸದ್ಯಕ್ಕೆ ಬಂಧನದ ಭೀತಿ ಇಲ್ಲವಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ … Continued

ಪೋಕ್ಸೋ ಪ್ರಕರಣ ರದ್ದತಿಗೆ ಯಡಿಯೂರಪ್ಪ ಕೋರಿಕೆ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಮ್ಮ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಹೈಕೋರ್ಟ್ ನಡೆಸಿದ್ದು ತೀರ್ಪನ್ನು ಕಾಯ್ದಿರಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಡಿಯೂರಪ್ಪ ಅವರ ಖುದ್ದು ಹಾಜರಿಗೆ ನೀಡಿದ್ದ ವಿನಾಯಿತಿಯನ್ನು ವಿಸ್ತರಿಸಿದೆ.ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಬಿಎಸ್‌ವೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿತು. ಬಿಎಸ್‌ವೈ ಪರವಾಗಿ … Continued

ಪೋಕ್ಸೋ ಪ್ರಕರಣ: ಸಿಐಡಿ ಮುಂದೆ ವಿಚಾರಣೆಗೆ ಹಾಜರಾದ ಯಡಿಯೂರಪ್ಪ

ಬೆಂಗಳೂರು :ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೋಮವಾರ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣ ದಾಖಲಾಗಿ ಮೂರು ತಿಂಗಳಾಗಿದ್ದು, ಅವರು ಎರಡನೇ ಬಾರಿಗೆ ವಿಚಾರಣೆ ಎದುರಿಸುತ್ತಿದ್ದಾರೆ. ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್, ಡಿವೈಎಸ್‌ಪಿ ತನಿಖಾಧಿಕಾರಿಯಿಂದ ಯಡಿಯೂರಪ್ಪ ವಿಚಾರಣೆ ನಡೆದಿದೆ. ಸಿಐಡಿ ಅಧಿಕಾರಿಗಳು ಈ ಮೊದಲೇ ಯಡಿಯೂರಪ್ಪ ಅವರ … Continued

ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ದೊಡ್ಡ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಯಡಿಯೂರಪ್ಪ ಅವರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ, 2012 (ಪೋಕ್ಸೊ ಕಾಯ್ದೆ) ಅಡಿಯಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಅವರ ಬಂಧನಕ್ಕೆ ತಡೆ ನೀಡಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ … Continued

ಪೋಕ್ಸೋ ಪ್ರಕರಣ ; ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಜಾಮೀನು ರಹಿತ ವಾರಂಟ್ ಹೊರಡಿಸಲು ಆದೇಶ; ಬಂಧನ ಸಾಧ್ಯತೆ

 ಬೆಂಗಳೂರು: ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಲು ಆದೇಶಿಸಿದೆ. ನ್ಯಾಯಾಲಯದ ಆದೇಶದಿಂದ ಮಾಜಿ ಮುಖ್ಯಮಂತ್ರಿಗೆ ಬಂಧನ ಭೀತಿ ಎದುರಾಗಿದೆ. ಪ್ರಕರಣದ ವಿಚಾರಣೆಗೆ ಯಡಿಯೂರಪ್ಪ ಹಾಜರಾಗದ ಕಾರಣ ಬಂಧನ ವಾರೆಂಟ್ ಹೊರಡಿಸುವಂತೆ ಕೋರಿ ಸಿಐಡಿ ಸಲ್ಲಿಸಿದ್ದ ಮನವಿ ಆಲಿಸಿದ ಬೆಂಗಳೂರು ನಗರದ 1ನೇ ತ್ವರಿತಗತಿಯ ನ್ಯಾಯಾಲಯ … Continued

ತಮ್ಮ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಮಾಡಲು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಯಡಿಯೂರಪ್ಪ

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ತನಿಖೆ ನಡೆಸಲು ಸಿಐಡಿ ಪೊಲೀಸರು ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಿರುವ ಬೆನ್ನಿಗೇ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಗೊಳಿಸುವಂತೆ ಅವರು ಕೋರಿದ್ದು, . ತಾನು ಯಾವುದೇ … Continued

ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಜನಾರ್ದನ ರೆಡ್ಡಿ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು, ಸೋಮವಾರ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​​.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಮ್ಮುಖದಲ್ಲಿ ತಮ್ಮ ಪಕ್ಷ ಕೆಆರ್‌ಪಿಪಿಯನ್ನು ಬಿಜೆಪಿ ಜೊತೆ ವಿಲೀನ … Continued

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ: ಈವರೆಗೆ ಜೈಲಿಗೆ ಹೋಗಿದ್ದ ಮಾಜಿ ಸಿಎಂಗಳ ಪಟ್ಟಿ ಇಲ್ಲಿದೆ…

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ವು ಗುರುವಾರ ರಾತ್ರಿ ಬಂಧಿಸಿದೆ. 2024 ರ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಅವರ ಬಂಧನವನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬ್ಲಾಕ್ ಸೇರಿದಂತೆ ವಿರೋಧ ಪಕ್ಷಗಳು ಖಂಡಿಸಿವೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕಾನೂನು ಜಾರಿ ಸಂಸ್ಥೆಯಿಂದ … Continued

ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸ್ತೇನೆ ಎಂದು ಈಶ್ವರಪ್ಪ ಘೋಷಣೆ : ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದ ಬಿಜೆಪಿ ನಾಯಕ

ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ( ಮಾರ್ಚ್‌ 15) ಘೋಷಿಸಿದ್ದಾರೆ. ತಮ್ಮ ಪುತ್ರನಿಗೆ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಪುತ್ರ ಕಾಂತೇಶ ಅವರಿಗೆ ಟಿಕೆಟ್ ಸಿಗದ … Continued