ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಜುಲೈ 26ರ ಶಾಸಕಾಂಗ ಸಭೆ ದಿಢೀರ್‌ ರದ್ದು..!

ಬೆಂಗಳೂರು:ಮಹತ್ವದ ಬೆಳವಣಿಗೆಯಲ್ಲಿ ಜುಲೈ 26ರಂದು ಮುಖ್ಯಮಂತ್ರಿ ಯಡಿಯೂರಪ್ಪ ಕರೆದಿದ್ದ ಶಾಸಕಾಂಗ ಸಭೆಯನ್ನು ದಿಢೀರ್‌ ರದ್ದು ಪಡಿಸಲಾಗಿದೆ ಎಂದುತಿಳಿದುಬಂದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಬಿಜೆಪಿ ಶಾಸಕಾಂಗ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಶಾಸಕಾಂಗ ಪಕ್ಷದ ಸಭೆಯನ್ನು ರದ್ದುಗೊಳಿಸಿ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟವನ್ನು ಆಯೋಜನೆ ಮಾಡಲಾಗಿದ್ದು,  ಜುಲೈ 25ರ ರಾತ್ರಿ ಭೋಜನಕೂಟ ನಡೆಯಲಿದೆ. … Continued