ಬಜೆಟ್ 2024 ರಲ್ಲಿ ‘ಏಂಜೆಲ್ ತೆರಿಗೆ’ ರದ್ದು: ʼಏಂಜೆಲ್ ತೆರಿಗೆ’ ಎಂದರೇನು..?

ನವದೆಹಲಿ : ಸ್ಟಾರ್ಟಪ್ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ದೇಶದಲ್ಲಿ ನಾವೀನ್ಯತೆಯನ್ನು ಬೆಂಬಲಿಸುವ ಪ್ರಯತ್ನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ಅವರು ಮಂಗಳವಾರ ʼಏಂಜೆಲ್ ತೆರಿಗೆʼಯನ್ನು ರದ್ದುಗೊಳಿಸಿದ್ದಾರೆ. “ಸ್ಟಾರ್ಟ್‌ಅಪ್‌ಗಳಲ್ಲಿನ ಎಲ್ಲಾ ವರ್ಗದ ಹೂಡಿಕೆದಾರರಿಗೆ ಸರ್ಕಾರವು ʼಏಂಜೆಲ್ ತೆರಿಗೆʼಯನ್ನು ರದ್ದುಗೊಳಿಸುತ್ತದೆ” ಎಂದು ಹಣಕಾಸು ಸಚಿವರು ಪ್ರಕಟಿಸುವ ಮೂಲಕ ಹೊಸ ವ್ಯವಹಾರಗಳನ್ನು ಬೆಂಬಲಿಸುವ ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸಿದರು. … Continued

ಯಾವುದೇ ವಿಶೇಷ ಪ್ರೋತ್ಸಾಹದಾಯಕ ಯೋಜನೆಗಳಿಲ್ಲದ ಅತ್ಯಂತ ನಿರಾಶದಾಯಕ ಬಜೆಟ್ : ವಸಂತ ಲದವಾ

ಹುಬ್ಬಳ್ಳಿ : ಕೇಂದ್ರ ಸರ್ಕಾರ ಇಂದು, ಗುರುವಾರ ಮಂಡಿಸಿದ ಕೇಂದ್ರ ಮುಂಗಡಪತ್ರ ಯಾವುದೇ ವಿಶೇಷ ಅಭಿವೃದ್ಧಿ ಉದ್ಯೋಗ ಸೃಷ್ಟಿ, ಉತ್ಪಾದನಾ ಕ್ಷೇತ್ರ, ರ‍ಆರ್ಥಿಕ ಹಾಗೂ ಕೃಷಿ ವಲಯಗಳಿಗೆ ಉತ್ತೇಜನ ಮತ್ತು ಪ್ರೋತ್ಸಾಹವಿಲ್ಲದೆ ನಿರಾಶದಾಯ ಬಜೆಟ್ ಆಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ವಸಂತ ಲದವಾ ಪ್ರತಿಕ್ರಯಿಸಿದ್ದಾರೆ. ೨೦೧೪ ರಲ್ಲಿದ್ದ ೫೬ ಲಕ್ಷ ಕೋಟಿ … Continued

ಕೇಂದ್ರ ಬಜೆಟ್ 2024 : ಗರ್ಭಕಂಠ ಕ್ಯಾನ್ಸರ್​ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ (HPV) ಲಸಿಕೆ ಘೋಷಣೆ

ನವದೆಹಲಿ : ಭವಿಷ್ಯದಲ್ಲಿ ಕಾಣಿಸಿಕೊಳ್ಳಬಹುದಾದ ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟುವ ನಿಟ್ಟಿನಲ್ಲಿ 9ರಿಂದ 14 ವರ್ಷ ವಯಸ್ಸಿನ ಹದಿಹರೆಯದ ಹುಡುಗಿಯರಿಗೆ ಕೇಂದ್ರ ಸರ್ಕಾರವು ಉಚಿವಾಗಿ HPV ಲಸಿಕೆ ನೀಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಿದೆ. ಗುರುವಾರ ಬಜೆಟ್‌ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಪಂಚದಮೂರನೇ ಅತಿ ಸಾಮಾನ್ಯ ಎನಿಸಿರುವ … Continued

ಕೇಂದ್ರ ಮಧ್ಯಂತರ ಬಜೆಟ್‌ 2024 : ಜನಸಂಖ್ಯೆ ನಿಯಂತ್ರಣಕ್ಕೆ ಸಮಿತಿ ರಚನೆಯ ಪ್ರಸ್ತಾಪ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ (ಫೆಬ್ರವರಿ 1) ಮಧ್ಯಂತರ ಬಜೆಟ್ ಮಂಡಿಸಿದ್ದು, ಜನಸಂಖ್ಯೆ ನಿಯಂತ್ರಣದ ಕುರಿತು ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಜನಸಂಖ್ಯೆಯ ವೇಗದ ಬೆಳವಣಿಗೆ ಮತ್ತು ಅದರಿಂದ ಉದ್ಭವಿಸಿರುವ ಸವಾಲುಗಳನ್ನು ಸಮಗ್ರವಾಗಿ ಪರಿಶೀಲಿಸಲು ಸರ್ಕಾರವು ಉನ್ನತ ಅಧಿಕಾರದ ಸಮಿತಿಯನ್ನು ರಚಿಸಲಿದೆ ಎಂದು ಬಜೆಟ್​ ಭಾಷಣದ ವೇಳೆ ನಿರ್ಮಲಾ … Continued