ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಘೋಷಣೆ, ೫೦೦ ಕೋಟಿ ರೂ. ಅನುದಾನ ಪ್ರಕಟ

ಬೆಂಗಳೂರು:ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮೂಲಕ, ಸಮುದಾಯದ ಅಭಿವೃದ್ಧಿ ಕಾರ್ಯಕ್ಕೆ ಅನುಕೂಲವಾಗುವಂತೆ ಒಕ್ಕಲಿಗ ಸಮುದಾಯದ ಅನೇಕ ಮುಖಂಡರು ಪ್ರತಿಭಟನೆ ಹಾಗೂ ಮನವಿ ಮೂಲಕ, ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದು ಬಜೆಟ್‌ ಮೂಲಕ ಫಲಿಸಿದೆ. ಇದಕ್ಕೆ ಬ ಒಪ್ಪಿಗೆ ನೀಡಿರುವ ಹಣಕಾಸು ಸಚಿವರೂ ಆಗಿರುವ ಯಡಿಯೂರಪ್ಪ, ರಾಜ್ಯ ಬಜೆಟ್ ನಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒಪ್ಪಿಗೆ ನೀಡಿದ್ದಲ್ಲದೆ … Continued

ರಾಜ್ಯ ಬಜೆಟ್‌: ಮಹಿಳಾ ಉದ್ಯೋಗಿಗಳಿಗೆ ಪ್ರಸೂತಿ ರಜೆ ಜೊತೆ ಮಕ್ಕಳ ಆರೈಕೆ ರಜೆ ಗಿಫ್ಟ್‌

ಬೆಂಗಳೂರು : ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳು ಹಾಲಿ ಜಾರಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳ ವರೆಗೆ ಮಕ್ಕಳ ಆರೈಕೆ ರಜೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಈ ಮೂಲಕ ವಿಶ್ವ ಮಹಿಳಾ ದಿನಾಚರಣೆಯಂದೇ ಯಡಿಯೂರಪ್ಪ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. 2021-22ನೇ ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದ ಅವರು, ನಿರ್ಭಯಾ … Continued

ಬಜೆಟ್‌ ಮಂಡನೆಗೆ ಕ್ಷಣಗಣನೆ:ಆರ್ಥಿಕ ಮುಗ್ಗಟ್ಟಿನಲ್ಲಿ ಬಿಎಸ್‌ವೈ ಲೆಕ್ಕದ ಬಗ್ಗೆ ಕುತೂಹಲ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ೮ನೇ ಬಾರಿಗೆ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಕೊರೊನಾ ಸಂಕಷ್ಟ ಗಮನದಲ್ಲಿಟ್ಟುಕೊಂಡು ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಬಜೆಟ್‌ ಮಂಡಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ (ಮಾ.೮) ವಿಧಾನಸಭೆಯಲ್ಲಿ ೧೨.೦೫ ನಿಮಿಷಕ್ಕೆ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಲಿದ್ದಾರೆ. ಕೊರೊನಾ ಸಮಯದಲ್ಲಿ ನಿರೀಕ್ಷೆಗಳು … Continued

ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗೆ ಆದ್ಯತೆ

ಶಿವಮೊಗ್ಗ : ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದ್ದು, ಮುಂದಿನ ತಿಂಗಳ ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಈಕುರಿತು ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಬಜೆಟ್ ಸಂಬಂಧಿಸಿದಂತೆ ಹಲವು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಹಲವು ಮೂಲಗಳಿಂದ ಹಣಕಾಸಿನ ಸಂಗ್ರಹದ ಬಗ್ಗೆ ಮಾಹಿತಿ ಸಂಗರಹಿಸಿದ್ದೇನೆ. ಬಜೆಟ್ ನಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಮತ್ತು ರಾಜ್ಯದ ನೀರಾವರಿ … Continued

ಬಜೆಟ್‌ ಸುಧಾರಣೆಗಳು ಭಾರತ ವಿಶ್ವದ ಮುಂದಿನ ಆರ್ಥಿಕ ಶಕ್ತಿಯಾಗಲು ದಾರಿ: ನಿರ್ಮಲಾ

ನವ ದೆಹಲಿ: ಬಜೆಟ್ಟಿನಲ್ಲಿ ರೂಪಿಸಲಾದ ಸುಧಾರಣೆಗಳು ಭಾರತವು ವಿಶ್ವದ ಮುಂದಿನ ಉನ್ನತ ಆರ್ಥಿಕತೆಯಾಗಲು ದಾರಿ ಮಾಡಿಕೊಡುತ್ತದೆ ಎಂದು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಶನಿವಾರ ಲೋಕಸಭೆಯಲ್ಲಿ ಹೇಳಿದರು. ಸರ್ಕಾರದ ವಿಧಾನವನ್ನು “ಧೈರ್ಯಶಾಲಿ” ಎಂದು ಶ್ಲಾಘಿಸಿದ ಸೀತಾರಾಮನ್, ಈ ಸುಧಾರಣೆಗಳ ನೇತೃತ್ವ ವಹಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದಿಸಿದರು. ಸಾಂಕ್ರಾಮಿಕದಂತಹ ಸವಾಲಿನ ಪರಿಸ್ಥಿತಿಯು ಈ ದೇಶಕ್ಕೆ ದೀರ್ಘಕಾಲೀನ … Continued

ಸಿರಿವಂತರಿಂದ ಸಿರಿವಂತರಿಗಾಗಿ ಸಿರಿವಂತರು ಮಂಡಿಸಿದ ಬಜೆಟ್‌

ನವದೆಹಲಿ: ಇತ್ತೀಚಿಗೆ ಮಂಡಿಸಲಾದ ಆಯವ್ಯಯ ಕುರಿತು ನಿರಾಸೆ ವ್ಯಕ್ತಪಡಿಸಿದ ಮಾಜಿ ವಿತ್ತ ಸಚಿವ ಪಿ.ಚಿದಂಬರಂ, ಪ್ರಸ್ತುತ ಬಜೆಟ್‌ ಸಿರಿವಂತರಿಂದ ಸಿರಿವಂತರಿಗಾಗಿ ಸಿರಿವಂತರು ಮಂಡಿಸಿದ್ದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅವರು ರಾಜ್ಯಸಭೆಯಲ್ಲಿ ಬಜೆಟ್‌ ಕುರಿತ ಚರ್ಚೆಯಲ್ಲಿ ಮಾತನಾಡಿ, ಪ್ರಸ್ತುತ ಬಜೆಟ್‌ ಆರ್ಥಿಕತೆಯನ್ನು ಸ್ಪರ್ಧಾತ್ಮಕವಾಗಿ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ದೂಷಿಸಿದರು. ಬಜೆಟ್‌ನಲ್ಲಿ ಬಡವರಿಗಾಗಿ ಏನೂ ಇಲ್ಲ. ಬಡವರು ಬಡತನದಲ್ಲಿಯೇ … Continued

ಹಿಂದಿನ ಸರ್ಕಾರಗಳ ಬಜೆಟ್‌ ಪ್ರಚಾರಕ್ಕೆ ಮಾತ್ರ ಸೀಮಿತ : ಪ್ರಧಾನಿ ಮೋದಿ

ನವದೆಹಲಿ:  ಮತಬ್ಯಾಂಕ್‌ ಕೇಂದ್ರಿಕರಿಸಿ ಬಜೆಟ್‌ ಮಾಡುತ್ತಿದ್ದ ಹಿಂದಿನ ಸರಕಾರಗಳು ಆಯವ್ಯಯವನ್ನು ಈಡೇರಿಸದೇ ಘೋಷಣೆಯ ಮಾಧ್ಯಮವಾಗಿಸಿಕೊಂಡಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ಹಿಂದಿನ ಸರಕಾರಗಳನ್ನು ಟೀಕಿಸಿದ್ದಾರೆ, ದಶಕಗಳಿಂದ ಬಜೆಟ್‌ನಲ್ಲಿ ಯಾರ ಹೆಸರಿನಲ್ಲಿ ಯಾವ ಘೋಷಣೆಯಾಗಿದೆ ಎಂಬುದಕ್ಕೆ ಆಯವ್ಯಯ ಸೀಮಿತವಾಗುತ್ತಿತ್ತು. ಇದು ಮತಬ್ಯಾಂಕ್‌ಗೆ ಪೂರಕ ಘೋಷಣೆಯಂತಿತ್ತು, ಹಿಂದೆ ಬಜೆಟ್ ಪೂರ್ಣವಾಗಿ ಜಾರಿಗೆ ಬರುವಂತಿರಲಿಲ್ಲ.  ನಾವೆಲ್ಲ ಪ್ರಸಕ್ತ ಅವಶ್ಯಕತೆಗಳು ಹಾಗೂ … Continued

 ಸ್ಟಾರ್ಟ್‌ ಅಪ್‌ ಕಂಪನಿಗಳ ಬೆಳವಣಿಗೆಗೆ ಉಪಯುಕ್ತ:ಶೆಟ್ಟರ

ಹುಬ್ಬಳ್ಳಿ:‌ಹೊಸ ದಶಕದಲ್ಲಿ ಹೊಸ ಯುಗ ಸೃಷ್ಟಿಸುವ ಬಜೆಟ್‌ ಇದಾಗಿದ್ದು, ಕೇಂದ್ರ ಸರಕಾರ ಕೋವಿಡ್‌ ನಂತರದ ಆರ್ಥಿಕತೆ ಉತ್ತೇಜನ ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿರುವುದು  ಕೇಂದ್ರ ಬಜೆಟ್ ನಲ್ಲಿ ಕಾಣಬಹುದಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ  ಸಚಿವ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಆಯವ್ಯಯದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಆರೋಗ್ಯ, ಎಂಎಸ್‌ಎಂಇ, ಸ್ಟಾರ್ಟ್‌ ಅಪ್‌ … Continued

ಬಜೆಟ್: ಆ‌ರೋಗ್ಯ ಕ್ಷೇತ್ರಕ್ಕೆ ದುಪ್ಪಟ್ಟು ಅನುದಾನ

ನವ ದೆಹಲಿ:ಆರೋಗ್ಯ ಕ್ಷೇತ್ರಕ್ಕೆ  ಕಳೆದ ಆರ್ಥಿಕ ವರ್ಷಕ್ಕಿಂತ ದುಪ್ಪಟ್ಟು ಅನುದಾನ   ನಿಗದಿ ಮಾಡಿರುವುದಾಗಿ ಕೇಂದ್ರ ಸಚಿವೆ ನಿರ್ಮಲಾಸೀತಾರಾಮನ್ ಹೇಳಿದ್ದಾರೆ. 2021-22ನೇ ಸಾಲಿಗೆ ಕೇಂದ್ರ ಸರ್ಕಾರ  ಆರೋಗ್ಯ ಮತ್ತು ಯೋಗಕ್ಷೇಮ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ ರೂ.ಗಳನ್ನು ನೀಡಿದೆ. ಆತ್ಮನಿರ್ಭರ್ ಆರೋಗ್ಯ ಯೋಜನೆಯ ಹೊಸ ಕಾರ್ಯಕ್ರಮಗಳಿಗೆ 64180 ಕೋಟಿ ರೂ.ಗಳನ್ನು ಮುಂದಿನ ಆರು ವರ್ಷಗಳಿಗೆ ನಿಗದಿಪಡಿಸಲಾಗಿದೆ. ರಾಷ್ಟ್ರೀಯ … Continued

ಬಜೆಟ್‌ ಅಭಿವೃದ್ಧಿಗೆ ಪೂರಕ

ಹುಬ್ಬಳ್ಳಿ: ಕೇಂದ್ರ ವಿತ್ತೆ ಸಚಿವರಾದ ನಿರ್ಮಲಾ ಸೀತಾರಾಮನ್  ಮಂಡಿಸಿದ  ಬಜೆಟ್ ನ್ನು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ  ಶ್ಲಾಘಿಸಿದೆ.‌ ಆರೋಗ್ಯ, ಕೃಷಿ ಹಾಗೂ ಮೂಲ ಸೌಕರ್ಯಗಳಿಗೆ ಬಜೆಟ್ ನಲ್ಲಿ ವಿಶೇಷ ಆದ್ಯತೆ ನೀಡಿರುವುದು  ಬೆಳವಣಿಗೆಗೆ ಪೂರಕವಾಗಿದೆ. ಹಳೆಯ ವಾಹನಗಳಿಗೆ ಗಜರಿ ನೀತಿ ರೂಪಿಸಲು ಉದ್ದೇಶಿಸಿರುವುದು ಆಟೊಮೊಬೈಲ್ ಕ್ಷೇತ್ರದ ಬೆಳವಣಿಗೆಗೆ ಚಾಲನೆ  ಸಿಕ್ಕಂತಾಗಿದೆ ಎಂದು ವಾಣಿಜ್ಯೋದ್ಯಮ ಸಂಸ್ಥೆ ‌‌ಅಧ್ಯಕ್ಷ ಮಹೇಂದ್ರ … Continued