ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸೋಲು ; ನಿಖಿಲಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

ಚಿಕ್ಕಮಗಳೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಎನ್.ಡಿ.ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಸೋಲು ಅವರ ಅಭಿಮಾನಿಗಳಿಗೆ ಆಘಾತ ತಂದಿದೆ. ನಿಖಿಲಕುಮಾರಸ್ವಾಮಿ ಅವರ ಕಟ್ಟಾ ಅಭಿಮಾನಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ಈಗ ಕಡೂರು ಮೂಲದ ಹರ್ಷಿತ್ ರಕ್ತದಲ್ಲಿ ಪತ್ರ ಬರೆದು ನಿಖಿಲ ಸೋಲಿಗೆ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಭಾನುವಾರ ಅವರು … Continued

ವಯನಾಡು ಉಪಚುನಾವಣೆ: ರಾಹುಲ್‌ ಗಾಂಧಿಗಿಂತ ಹೆಚ್ಚಿನ ಅಂತರದಲ್ಲಿ ಜಯಗಳಿಸಿದ ಸಹೋದರಿ ಪ್ರಿಯಾಂಕಾ ಗಾಂಧಿ…!

ತಿರುವನಂತಪುರಂ: ಇಡೀ ದೇಶದ ಗಮನ ಸೆಳೆದಿದ್ದ ವಯನಾಡು (Wayanad) ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ (Priyanka Gandhi) 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ದಾಖಲಿಸಿದ್ದಾರೆ. ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಸಹೋದರ ರಾಹುಲ್‌ ಗಾಂಧಿ … Continued

ಚನ್ನಪಟ್ಟಣ ಉಪಚುನಾವಣೆ: ಕೊನೆಗೂ ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಘೋಷಣೆ

ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ಆಯ್ಕೆ ಕುರಿತು ಇದ್ದ ಗೊಂದಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ಅಭ್ಯರ್ಥಿ ಘೋಷಣೆಯಾಗಿದೆ. ಇಂದು, ಗುರುವಾರ ಬೆಳಗ್ಗೆ ಜೆಡಿಎಸ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಗಿದೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ (ಅಕ್ಟೋಬರ್‌ ೨೫) ಕೊನೆಯ ದಿನವಾಗಿದ್ದು, ಬಿಜೆಪಿ-ಜೆಡಿಎಸ್​ … Continued

ವಿಧಾನ ಪರಿಷತ್​ ಉಪಚುನಾವಣೆ ; ಬಿಜೆಪಿಗೆ ಭರ್ಜರಿ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಸೋಮವಾರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಸ್ಪರ್ಧಿಸಿ ಆಯ್ಕೆಯಾದ ಹಿನ್ನೆಲೆಯಲ್ಲಿ ಈ ಕ್ಷೇತ್ರ ತೆರವಾಗಿದ್ದರಿಂದ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು. ಇಂದು (ಅ.24) ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಚುನಾವಣೆಯಲ್ಲಿ … Continued

ವಯನಾಡು ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡು : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಅವರು ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, … Continued

ವಿಧಾನಸಭಾ ಉಪಚುನಾವಣೆ: ಬಿಜೆಪಿಯಿಂದ ಸಂಡೂರು, ಶಿಗ್ಗಾವಿ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 13ರಂದು ಉಪಚುನಾವಣೆ ನಡೆಯುತ್ತಿದ್ದು, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ ಬೊಮ್ಮಾಯಿ ಅವರಿಗೆ ಟಿಕೆಟ್‌ ನೀಡಿದೆ. ಅದೇರೀತಿ ಬಳ್ಳಾರಿ ಜಿಲ್ಲೆಯ ಸಂಡೂರು ಬಂಗಾರು ಹನುಮಂತು … Continued

ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಘೋಷಣೆ

ಬೆಂಗಳೂರು: /ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರಕುಮಾರ ಬೊಟ್ಯಾಡಿ ಅವರಿಗೆ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದ ಕಿಶೋರಕುಮಾರ ಬೊಟ್ಯಾಡಿ ಅವರಿಗೆ ಬಿಜೆಪಿ ಕೇಂದ್ರೀಯ ಚುನಾವಣಾ … Continued