ಸಿಎಎ ವಿರೋಧಿ ಪ್ರತಿಭಟನಾಕಾರರಿಂದ ವಸೂಲಿ ಮಾಡಿದ ಆಸ್ತಿ ಹಾನಿಯ ದಂಡ ಹಿಂತಿರುಗಿಸಲು ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ಸಿಎಎ ವಿರೋಧಿ ಪ್ರತಿಭಟನೆಗಳ ವೇಳೆ ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡಿದ ಆರೋಪ ಎದುರಿಸುತ್ತಿರುವವರಿಂದ ವಸೂಲಿ ಮಾಡಲಾದ ದಂಡದ ಹಣವನ್ನು ಅವರಿಗೇ ಮರಳಿಸುವಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ. ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿರುವುದಕ್ಕೆ ಪರಿಹಾರವನ್ನು ಕಟ್ಟಿಕೊಡುವ ಸಲುವಾಗಿ ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ನೀಡಿದ್ದ ಶೋಕಾಸ್‌ … Continued

ಪಶ್ಚಿಮ ಬಂಗಾಳದಲ್ಲಿ ಎನ್‌ ‌ಆರ್‌ಸಿ, ಎನ್‌ಪಿಆರ್‌ ಅನುಷ್ಠಾನಕ್ಕೆ ಅವಕಾಶ ನೀಡಲ್ಲ: ಮಮತಾ

ಬಂಕುರಾ: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಹಾಗೂ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಅಬ್ಬರಿಸಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ದೀದಿ, ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನಲ್ಲಿ 14 ಲಕ್ಷ ಬಂಗಾಳಿಗಳ ಹೆಸರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟಿದ್ದಾರೆ. ಆದರೆ … Continued

ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ  ಸಿಎಎ ಪ್ರಮುಖ ವಿಷಯ

ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರ ಮೂರು ಹಂತಗಳಲ್ಲಿ ಅಸ್ಸಾಂ ವಿಧಾನಸಭೆ ಚುನಾವಣೆ ನಡೆಯಲಿದೆ. ಮೇ ೨ರಂದು  ಫಲಿತಾಂಶಗಳನ್ನು ಮೇ 2 ರಂದು ಪ್ರಕಟಿಸಲಾಗುತ್ತದೆ. ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್‌ ಹಾಗೂ ಅದರ ಹೊಸ ಮೈತ್ರಿಕೂಟದ ನಡುವೆ ನೇರಸ್ಪರ್ಧೆ ನಡೆಯಲಿದೆ. ಪ್ರಾದೇಶಿಕ ಪಕ್ಷಗಳು ಕೆಲವು ಕಡೆಗಳಲ್ಲಿ ಪ್ರಬಲವಾಗಿದ್ದು ಅಲ್ಲಿ ತ್ರಿಕೋನ … Continued

ಎಲ್ಲರೂ ಲಸಿಕೆ ಪಡೆದ ನಂತರ ಬಂಗಾಳದಲ್ಲಿ ಸಿಎಎ ಜಾರಿ: ಅಮಿತ್‌ ಶಾ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ಅನುಷ್ಠಾನಕ್ಕೆ ಸಂಬಂಧಿಸಿದ ಊಹಾಪೋಹಗಳಿಗೆ ಅಂತ್ಯ ಹಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಠಾಕೂರ್‌ನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ, ದೇಶದ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ಹಾಕಿದ ನಂತರ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತರಲಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಟುವಾಸ್ ಮತ್ತು … Continued