ಜಾತಿ ಗಣತಿ ವರದಿ: ತೀರ್ಮಾನಕ್ಕೆ ಬರಲಾಗದೆ ಮುಗಿದ ಸಚಿವ ಸಂಪುಟ ಸಭೆ

ಬೆಂಗಳೂರು : ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ ಜಾತಿ ಗಣತಿ (Caste Census) ವರದಿ ಬಗ್ಗೆ ನಿರ್ಧರಿಸಲು ಕರೆಯಲಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಮುಕ್ತಾಯವಾಗಿದೆ. ಹಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಯಾವುದೇ ಸ್ಪಷ್ಪ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲʼʼ … Continued

ನಾಳೆ ಸರ್ಕಾರಿ ಗೌರವದೊಂದಿಗೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅಂತ್ಯಕ್ರಿಯೆ ; ಕಾಂಗ್ರೆಸ್‌

ನವದೆಹಲಿ: ಆಧುನಿಕ ಭಾರತದ ಆರ್ಥಿಕ ಸುಧಾರಣೆಯ ಹರಿಕಾರ ಹಾಗೂ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ರಾತ್ರಿ 9:51ಕ್ಕೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ (ಡಿಸೆಂಬರ್‌ ೨೮) ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ ಅವರು ಮಾತನಾಡಿ, ಮಾಜಿ ಪ್ರಧಾನಿ ಡಾ. ಮನಮೋಹನ್ … Continued

70 ವರ್ಷ ಮೇಲ್ಪಟ್ಟ ಎಲ್ಲರಿಗೂ ₹5 ಲಕ್ಷದ ವರೆಗೆ ಉಚಿತ ಚಿಕಿತ್ಸೆ ; ಮೋದಿ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ: ರಾಷ್ಟ್ರೀಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಪ್ರತಿಯೊಬ್ಬರಿಗೂ ಆರೋಗ್ಯ ವಿಮಾ ಸೌಲಭ್ಯವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ. ಈ ತೀರ್ಮಾನದಿಂದ ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಎಬಿ ಪಿಎಂ-ಜೆಎವೈ) ಆರು ಕೋಟಿ ಹಿರಿಯ ನಾಗರಿಕರನ್ನು ಹೊಂದಿರುವ 4.5 ಕೋಟಿ … Continued

ಕರ್ನಾಟಕದ ‌ಸಾಂಸ್ಕೃತಿಕ ನಾಯಕರಾಗಿ ಬಸವಣ್ಣ ಹೆಸರು ಘೋಷಣೆ : ರಾಜ್ಯ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ  ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಬಸವಣ್ಣನವರ ಹೆಸರು ಘೋಷಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಜಾತಿ ರಹಿತ ಸಮಾಜ ನಿರ್ಮಾಣದ ಕನಸು‌ ಕಂಡವರು ಬಸವಣ್ಣ. ಸಮಾಜದಲ್ಲಿ ಸಾಮರಸ್ಯ ತರಲು ಅವರ ತತ್ವಗಳು … Continued

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲು : ಭಕ್ತವತ್ಸಲ ಸಮಿತಿ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು: ಹಿಂದುಳಿದ ವರ್ಗಳಿಗೆ ಪಂಚಾಯತ್‌ ರಾಜ್‌ ಸಂಸ್ಥೆಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ರಚಿಸಲಾಗಿದ್ದು ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿಯು ನೀಡಿದ್ದ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್‌.ಕೆ.ಪಾಟೀಲ ಗುರುವಾರ ಹೇಳಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ನಂದಿನ ಹಾಲಿನ ದರ ಏರಿಕೆ, 67 ಕೈದಿಗಳ ಬಿಡುಗಡೆ ಸೇರಿದಂತೆ 13 ಪ್ರಮುಖ ಪ್ರಸ್ತಾವಗಳಿಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆ ಸಹಿತ 13 ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ. ಪಾಟೀಲ ಮಾಹಿತಿ ನೀಡಿದ್ದಾರೆ. ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, “ಒಟ್ಟು ಹದಿನೈದು ವಿಚಾರಗಳ … Continued

ಕೆಪಿಎಸ್‌ಸಿ 2011ರ ಅಭ್ಯರ್ಥಿಗಳ ಸಕ್ರಮಕ್ಕೆ ಕಾನೂನು ತರಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು: 2011 ರ ಕೆಪಿಎಸ್‌ಸಿ 362 ಪ್ರೊಬೆಷನರಿ ಅಭ್ಯರ್ಥಿಗಳ ಆಯ್ಕೆಯನ್ನು ಸಕ್ರಮಗೊಳಿಸಲು ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ ಅಸಿಂಧುಗೊಂಡಿರುವ ಅಭ್ಯರ್ಥಿಗಳ ನೇಮಕ ಮಾಡಿಕೊಳ್ಳಲು ಕರ್ನಾಟಕ ನಾಗರೀಕ ಸೇವೆಗಳು (2011ರ ಗೆಜೆಟ್‌ ಪ್ರೊಬೆಷನರಿ ನೇಮಕಾತಿ … Continued

ಕೊರೊನಾ ಹೆಚ್ಚಳ: ಕರ್ನಾಟಕದಲ್ಲಿ ಲಾಕ್‌ಡೌನ್‌ ಸದ್ಯಕ್ಕಿಲ್ಲ , ಆದರೆ ಕಠಿಣ ನಿಯಮ..

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿಗೆ ತರಲು ಸೋಮವಾರ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಕೊರೊನಾ ಹೆಚ್ಚಳದ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಲಾಕ್​ಡೌನ್​, ಸೆಮಿಲಾಕ್​ಡೌನ್​, … Continued