ಕೆನಡಾದ ಪ್ರಧಾನಿ ಹುದ್ದೆಯ ರೇಸ್‌ ನಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ

ನವದೆಹಲಿ: ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಕೆನಡಾದ ಮುಂದಿನ ಪ್ರಧಾನಿಯಾಗುವ ನಿಟ್ಟಿನಲ್ಲಿ ಅಧಿಕೃತವಾಗಿ ರೇಸ್ ಪ್ರವೇಶಿಸಿದ್ದಾರೆ. ನೇಪಿಯನ್ ಪ್ರತಿನಿಧಿಸುವ ಲಿಬರಲ್ ಸಂಸದ, ಚಂದ್ರ ಆರ್ಯ ಅವರು ಕೆನಡಾವನ್ನು “ಸಾರ್ವಭೌಮ ಗಣರಾಜ್ಯ” ಮಾಡಲು, ನಿವೃತ್ತಿ ವಯಸ್ಸನ್ನು ಹೆಚ್ಚಿಸುವ, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರುವ ಮತ್ತು ಪ್ಯಾಲೆಸ್ಟೈನ್ ರಾಜ್ಯವನ್ನು ಅಧಿಕೃತವಾಗಿ ಗುರುತಿಸುವ … Continued

ಜಸ್ಟಿನ್ ಟ್ರುಡೊ ಬದಲಿಗೆ ಕೆನಡಾದ ಪ್ರಧಾನಿ ಹುದ್ದೆಗೆ ಅನಿತಾ ಆನಂದ ಮುಂಚೂಣಿಯಲ್ಲಿ ; ಭಾರತೀಯ ಮೂಲದ ಇವರು ಯಾರು ಗೊತ್ತೆ..?

ಒಟ್ಟಾವಾ (ಕೆನಡಾ): ಕೆನಡಾದ ರಾಜಕಾರಣಿ ಭಾರತೀಯ ಮೂಲದ ಅನಿತಾ ಆನಂದ ಅವರು ಪ್ರಸ್ತುತ ಜಸ್ಟಿನ್ ಟ್ರುಡೊ ಅವರ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದು, ಪ್ರಧಾನಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿರುವ ಟ್ರುಡೊ ಅವರ ಬದಲಿಗೆ ಪ್ರಧಾನಿ ಹುದ್ದೆಗೆ ಪ್ರಬಲ ಅಭ್ಯರ್ಥಿಯಾಗಿ ಪರಿಗಣಿಸಲಾಗಿದೆ. ಸೋಮವಾರ, ಜಸ್ಟಿನ್ ಟ್ರುಡೊ ಮಾರ್ಚ್ 24 ರೊಳಗೆ ಹೊಸ ನಾಯಕನನ್ನು ಆಯ್ಕೆ ಮಾಡಲು ನಿಗದಿಪಡಿಸಿ … Continued

ಪಕ್ಷದೊಳಗೆ ಭಿನ್ನಮತ ; ಕೆನಡಾ ಪ್ರಧಾನಿ ಹುದ್ದೆಗೆ ರಾಜೀನಾಮೆ ಘೋಷಿಸಿದ ಜಸ್ಟಿನ್ ಟ್ರುಡೊ

ಒಟ್ಟಾವಾ (ಕೆನಡಾ): ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸೋಮವಾರ (ಜನವರಿ 6) ಕೆನಡಾದ ಲಿಬರಲ್ ಪಾರ್ಟಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಮೂಲಕ ಕೆನಡಾದ ಪ್ರಧಾನಿಯಾಗಿ ಒಂಬತ್ತು ವರ್ಷಗಳ ಅಧಿಕಾರಾವಧಿಗೆ ಅಂತ್ಯ ಹಾಡಿದ್ದಾರೆ. ಅವರ ವಿರುದ್ಧ ಪಕ್ಷದೊಳಗೆ ಭಿನ್ನಾಭಿಪ್ರಾಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ. ಅವರು ಒಟ್ಟಾವಾದ ರೈಡೋ ಕಾಟೇಜ್‌ನಲ್ಲಿರುವ ತಮ್ಮ ನಿವಾಸದ ಹೊರಗೆ … Continued

ಕೆನಡಾ ಉಪಪ್ರಧಾನಿ ಕ್ರಿಸ್ಟಿಯಾ ಫ್ರೀಲ್ಯಾಂಡ್ ರಾಜೀನಾಮೆ ; ಪ್ರಧಾನಿ ಜಸ್ಟಿನ್ ಟ್ರುಡೊಗೆ ಹಿನ್ನಡೆ

ಒಟ್ಟಾವಾ: ಕೆನಡಾದಲ್ಲಿ ಸೋಮವಾರ (ಡಿ. 16) ನಡೆದ ಅನಿರೀಕ್ಷಿತ ರಾಜಕೀಯ ಬೆಳವಣಿಗೆಯಲ್ಲಿ ಉಪ ಪ್ರಧಾನಿ ಕ್ರಿಸ್ಟಿಯಾ ಫ್ರೀಲ್ಯಾಂಡ್ (Chrystia Freeland) ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಅವರೊಂದಿಗಿನ ಭಿನ್ನಾಭಿಪ್ರಾಯವನ್ನು ಉಲ್ಲೇಖಿಸಿ ಅವರು ರಾಜೀನಾಮೆ ಸಲ್ಲಿಸಿದ್ದು, ಕೆನಡಾ ಚುನಾವಣೆ ಹೊಸ್ತಿಲಲ್ಲಿರುವಾಗ ಇದನ್ನು ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ಹಿನ್ನಡೆ ಎಂದೇ ವಿಶ್ಲೇಷಿಸಲಾಗಿದೆ. ಕ್ರಿಸ್ಟಿಯಾ … Continued

ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯಲ್ಲಿ ಮೋದಿ-ದೋವಲ್‌ ಕೈವಾಡದ ಆರೋಪ : ತಮ್ಮದೇ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದ ಪ್ರಧಾನಿ ಟ್ರೂಡೊ…!

ಟೊರೊಂಟೊ: ಭಾರತ ಮತ್ತು ಕೆನಡಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊಗೆ ಸಂಕಷ್ಟ ಕಡಿಮೆಯಾಗುತ್ತಿಲ್ಲ. ಈಗ ಮತ್ತೊಂದು ಪ್ರಸಂಗದಲ್ಲಿ ಟ್ರೂಡೊ ಮತ್ತೆ ಮುಜುಗರಕ್ಕೆ ಒಳಗಾಗಿದ್ದು, ಮುಜುಗರ ತಪ್ಪಿಸಿಕೊಳ್ಳಲು ತಮ್ಮದೇ ದೇಶದ ಗುಪ್ತಚರ ಸಂಸ್ಥೆ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದಿದ್ದಾರೆ. ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರು ತಮ್ಮದೇ ದೇಶದ ರಾಷ್ಟ್ರೀಯ … Continued

ಭಾರತದ ಘೋಷಿತ ಭಯೋತ್ಪಾದಕ, ಉಗ್ರಗಾಮಿ ನಿಜ್ಜರನ ನಂಬಿಗಸ್ಥ ಬಂಟ ಅರ್ಶ್‌ ‘ದಲ್ಲಾ’ ಕೆನಡಾದಲ್ಲಿ ಬಂಧನ..?

ನವದೆಹಲಿ : ಭಾರತವು ಭಯೋತ್ಪಾದಕ ಎಂದು ಘೋಷಿಸಿರುವ ಖಲಿಸ್ತಾನಿ ಉಗ್ರ ಅರ್ಶದೀಪ್ ಸಿಂಗ್ ಗಿಲ್ ಅಲಿಯಾಸ್ ಅರ್ಶ್ ದಲ್ಲಾನನ್ನು ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಗುಂಡಿನ ದಾಳಿಯ ನಂತರ ಬಂಧಿಸಿರುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಅಕ್ಟೋಬರ್ 28 ರಂದು ಮಿಲ್ಟನ್‌ನಲ್ಲಿ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ದಲ್ಲಾ, ನಿಷೇಧಿತ ಖಾಲಿಸ್ತಾನ ಟೈಗರ್‌ ಫೋರ್ಸ್‌ನೊಂದಿಗೆ (ಕೆಟಿಎಫ್‌) … Continued

ಬ್ರಾಂಪ್ಟನ್ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳ ದಾಳಿ ಪ್ರಕರಣ ; ಕೆನಡಾ ಪೊಲೀಸರಿಂದ ಮತ್ತೊಬ್ಬನ ಬಂಧನ

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಲ್ ಪ್ರಾದೇಶಿಕ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬ್ರಾಂಪ್ಟನ್‌ನ ಇಂದರ್‌ಜೀತ್ ಗೋಸಲ್ (35) ಎಂದು ಗುರುತಿಸಲಾಗಿದ್ದು, ಆತನ ಮೇಲೆ ಆಯುಧದಿಂದ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ. ಕಳೆದ ವಾರ, ಬ್ರಾಂಪ್ಟನ್‌ನ ಹಿಂದೂ ಮಂದಿರದಲ್ಲಿ ಭಾರತೀಯ ಅಧಿಕಾರಿಗಳು ಭಾಗವಹಿಸಿದ್ದ ದೂತಾವಾಸ ಕಾರ್ಯಕ್ರಮಕ್ಕೆ ಖಲಿಸ್ತಾನವನ್ನು … Continued

ಕೊನೆಗೂ ಕೆನಡಾದಲ್ಲಿ ʼಖಲಿಸ್ತಾನಿ ಪ್ರತ್ಯೇಕತಾವಾದಿಗಳುʼ ಇರುವುದನ್ನು ಒಪ್ಪಿಕೊಂಡ ಪ್ರಧಾನಿ ಜಸ್ಟಿನ್‌ ಟ್ರುಡೊ…!

ಒಟ್ಟಾವಾ : ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಇದ್ದಾರೆ ಎಂಬುದನ್ನು ಪ್ರಧಾನಿ ಜಸ್ಟಿನ್ ಟ್ರುಡೊ ಒಪ್ಪಿಕೊಂಡಿದ್ದಾರೆ. ಆದರೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕೆನಡಾದಲ್ಲಿನ ಸಿಖ್ ಸಮುದಾಯವನ್ನು ಒಟ್ಟಾರೆಯಾಗಿ ಪ್ರತಿನಿಧಿಸುವುದಿಲ್ಲ ಎಂದು ಹೇಳಿದ್ದಾರೆ. ಒಟ್ಟಾವಾದಲ್ಲಿರುವ ಪಾರ್ಲಿಮೆಂಟ್ ಹಿಲ್‌ನಲ್ಲಿ ಇತ್ತೀಚೆಗೆ ನಡೆದ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುವಾಗ ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಇದ್ದಾರೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಕೆನಡಾದಲ್ಲಿ ಹಿಂದೂಗಳಲ್ಲಿ ಪ್ರಧಾನಿ … Continued

ಭಾರತದ ವಿದೇಶಾಂಗ ಸಚಿವ ಜೈಶಂಕರ ಪತ್ರಿಕಾಗೋಷ್ಠಿ-ಸಂದರ್ಶನ ಪ್ರಸಾರ ಮಾಡಿದ್ದಕ್ಕೆ ಆಸ್ಟ್ರೇಲಿಯಾದ ಮಾಧ್ಯಮ ನಿರ್ಬಂಧಿಸಿದ ಕೆನಡಾ…!

ನವದೆಹಲಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ ಹಾಗೂ ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರ ಜಂಟಿ ಪತ್ರಿಕಾಗೋಷ್ಠಿ ಹಾಗೂ ಎಸ್.ಜೈಶಂಕರ ಅವರ ಸಂದರ್ಶನ ಪ್ರಸಾರ ಮಾಡಿದ ಕೆಲವೇ ಗಂಟೆಗಳ ನಂತರ ಕೆನಡಾದಲ್ಲಿ ಆಸ್ಟ್ರೇಲಿಯಾದ ಸುದ್ದಿ ಸಂಸ್ಥೆ ಆಸ್ಟ್ರೇಲಿಯಾ ಟುಡೇಯನ್ನು ಕೆನಡಾದಲ್ಲಿ ನಿಷೇಧಿಸಲಾಗಿದೆ ಎಂದು ಭಾರತ ಗುರುವಾರ ಹೇಳಿದೆ. .ವಿದೇಶಾಂಗ ಸಚಿವಾಲಯ (MEA)ದ … Continued

ಹಿಂದೂ ದೇವಾಲಯದ ಹೊರಗೆ ಖಲಿಸ್ತಾನಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕೆನಡಾ ಪೋಲೀಸ್‌ ಅಮಾನತು

ಬ್ರಾಂಪ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ಭಕ್ತರ ಮೇಲೆ ದಾಳಿ ನಡೆಸಿದ ಖಲಿಸ್ತಾನಿ ಪರ ಗುಂಪುಗಳ ಜೊತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆನಡಾದ ಪೋಲೀಸರನ್ನು ಸೋಮವಾರ ಅಮಾನತುಗೊಳಿಸಲಾಗಿದೆ. ಹರಿಂದರ್ ಸೋಹಿ ಎಂದು ಗುರುತಿಸಲಾದ ಅಮಾನತುಗೊಂಡ ಪೋಲೀಸ್ ಆಗಿದ್ದಾನೆ. ಪ್ರತಿಭಟನೆಯಲ್ಲಿ ಇತರರು ಭಾರತ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾಗ ಈತ ಖಲಿಸ್ತಾನ್ ಧ್ವಜವನ್ನು ಹಿಡಿದಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಅವರು ಪೀಲ್ ಪ್ರಾದೇಶಿಕ … Continued