ಭಾರತದ ಘೋಷಿತ ಭಯೋತ್ಪಾದಕ, ಉಗ್ರಗಾಮಿ ನಿಜ್ಜರನ ನಂಬಿಗಸ್ಥ ಬಂಟ ಅರ್ಶ್‌ ‘ದಲ್ಲಾ’ ಕೆನಡಾದಲ್ಲಿ ಬಂಧನ..?

ನವದೆಹಲಿ : ಭಾರತವು ಭಯೋತ್ಪಾದಕ ಎಂದು ಘೋಷಿಸಿರುವ ಖಲಿಸ್ತಾನಿ ಉಗ್ರ ಅರ್ಶದೀಪ್ ಸಿಂಗ್ ಗಿಲ್ ಅಲಿಯಾಸ್ ಅರ್ಶ್ ದಲ್ಲಾನನ್ನು ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಗುಂಡಿನ ದಾಳಿಯ ನಂತರ ಬಂಧಿಸಿರುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಅಕ್ಟೋಬರ್ 28 ರಂದು ಮಿಲ್ಟನ್‌ನಲ್ಲಿ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ದಲ್ಲಾ, ನಿಷೇಧಿತ ಖಾಲಿಸ್ತಾನ ಟೈಗರ್‌ ಫೋರ್ಸ್‌ನೊಂದಿಗೆ (ಕೆಟಿಎಫ್‌) … Continued

ಬ್ರಾಂಪ್ಟನ್ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳ ದಾಳಿ ಪ್ರಕರಣ ; ಕೆನಡಾ ಪೊಲೀಸರಿಂದ ಮತ್ತೊಬ್ಬನ ಬಂಧನ

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಲ್ ಪ್ರಾದೇಶಿಕ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬ್ರಾಂಪ್ಟನ್‌ನ ಇಂದರ್‌ಜೀತ್ ಗೋಸಲ್ (35) ಎಂದು ಗುರುತಿಸಲಾಗಿದ್ದು, ಆತನ ಮೇಲೆ ಆಯುಧದಿಂದ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ. ಕಳೆದ ವಾರ, ಬ್ರಾಂಪ್ಟನ್‌ನ ಹಿಂದೂ ಮಂದಿರದಲ್ಲಿ ಭಾರತೀಯ ಅಧಿಕಾರಿಗಳು ಭಾಗವಹಿಸಿದ್ದ ದೂತಾವಾಸ ಕಾರ್ಯಕ್ರಮಕ್ಕೆ ಖಲಿಸ್ತಾನವನ್ನು … Continued

ಕೊನೆಗೂ ಕೆನಡಾದಲ್ಲಿ ʼಖಲಿಸ್ತಾನಿ ಪ್ರತ್ಯೇಕತಾವಾದಿಗಳುʼ ಇರುವುದನ್ನು ಒಪ್ಪಿಕೊಂಡ ಪ್ರಧಾನಿ ಜಸ್ಟಿನ್‌ ಟ್ರುಡೊ…!

ಒಟ್ಟಾವಾ : ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಇದ್ದಾರೆ ಎಂಬುದನ್ನು ಪ್ರಧಾನಿ ಜಸ್ಟಿನ್ ಟ್ರುಡೊ ಒಪ್ಪಿಕೊಂಡಿದ್ದಾರೆ. ಆದರೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕೆನಡಾದಲ್ಲಿನ ಸಿಖ್ ಸಮುದಾಯವನ್ನು ಒಟ್ಟಾರೆಯಾಗಿ ಪ್ರತಿನಿಧಿಸುವುದಿಲ್ಲ ಎಂದು ಹೇಳಿದ್ದಾರೆ. ಒಟ್ಟಾವಾದಲ್ಲಿರುವ ಪಾರ್ಲಿಮೆಂಟ್ ಹಿಲ್‌ನಲ್ಲಿ ಇತ್ತೀಚೆಗೆ ನಡೆದ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುವಾಗ ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಇದ್ದಾರೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಕೆನಡಾದಲ್ಲಿ ಹಿಂದೂಗಳಲ್ಲಿ ಪ್ರಧಾನಿ … Continued

ಭಾರತದ ವಿದೇಶಾಂಗ ಸಚಿವ ಜೈಶಂಕರ ಪತ್ರಿಕಾಗೋಷ್ಠಿ-ಸಂದರ್ಶನ ಪ್ರಸಾರ ಮಾಡಿದ್ದಕ್ಕೆ ಆಸ್ಟ್ರೇಲಿಯಾದ ಮಾಧ್ಯಮ ನಿರ್ಬಂಧಿಸಿದ ಕೆನಡಾ…!

ನವದೆಹಲಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ ಹಾಗೂ ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರ ಜಂಟಿ ಪತ್ರಿಕಾಗೋಷ್ಠಿ ಹಾಗೂ ಎಸ್.ಜೈಶಂಕರ ಅವರ ಸಂದರ್ಶನ ಪ್ರಸಾರ ಮಾಡಿದ ಕೆಲವೇ ಗಂಟೆಗಳ ನಂತರ ಕೆನಡಾದಲ್ಲಿ ಆಸ್ಟ್ರೇಲಿಯಾದ ಸುದ್ದಿ ಸಂಸ್ಥೆ ಆಸ್ಟ್ರೇಲಿಯಾ ಟುಡೇಯನ್ನು ಕೆನಡಾದಲ್ಲಿ ನಿಷೇಧಿಸಲಾಗಿದೆ ಎಂದು ಭಾರತ ಗುರುವಾರ ಹೇಳಿದೆ. .ವಿದೇಶಾಂಗ ಸಚಿವಾಲಯ (MEA)ದ … Continued

ಹಿಂದೂ ದೇವಾಲಯದ ಹೊರಗೆ ಖಲಿಸ್ತಾನಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕೆನಡಾ ಪೋಲೀಸ್‌ ಅಮಾನತು

ಬ್ರಾಂಪ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ಭಕ್ತರ ಮೇಲೆ ದಾಳಿ ನಡೆಸಿದ ಖಲಿಸ್ತಾನಿ ಪರ ಗುಂಪುಗಳ ಜೊತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆನಡಾದ ಪೋಲೀಸರನ್ನು ಸೋಮವಾರ ಅಮಾನತುಗೊಳಿಸಲಾಗಿದೆ. ಹರಿಂದರ್ ಸೋಹಿ ಎಂದು ಗುರುತಿಸಲಾದ ಅಮಾನತುಗೊಂಡ ಪೋಲೀಸ್ ಆಗಿದ್ದಾನೆ. ಪ್ರತಿಭಟನೆಯಲ್ಲಿ ಇತರರು ಭಾರತ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾಗ ಈತ ಖಲಿಸ್ತಾನ್ ಧ್ವಜವನ್ನು ಹಿಡಿದಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಅವರು ಪೀಲ್ ಪ್ರಾದೇಶಿಕ … Continued

ಖಲಿಸ್ತಾನಿಗಳು-ಟ್ರುಡೊ ವಿರುದ್ಧ ನಿರ್ಣಯ ಅಂಗೀಕರಿಸಿದ ಕೆನಡಾದ 36 ಹಿಂದೂ-ಸಿಖ್ ಗುಂಪುಗಳು…

ಕೆನಡಾದ ಹಿಂದೂ ಮತ್ತು ಸಿಖ್ ಗುಂಪುಗಳು ಖಲಿಸ್ತಾನಿ ಗುಂಪುಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಲು ಸೋಮವಾರ ಒಗ್ಗೂಡಿ ಸಭೆ ನಡೆಸಿವೆ. ಮೂಲಗಳ ಪ್ರಕಾರ, ಖಾಲ್ಸಾ ದಿವಾನ್ ಸೊಸೈಟಿ ರಾಸ್ ಸ್ಟ್ರೀಟ್ ವ್ಯಾಂಕೋವರ್ ಗುರುದ್ವಾರದಿಂದ ಸಭೆಯನ್ನು ಆಯೋಜಿಸಲಾಗಿತ್ತು, ಅಲ್ಲಿ 36 ಹಿಂದೂ ಸೊಸೈಟಿಗಳು ಮತ್ತು ಸಿಖ್ ಗುಂಪುಗಳ ಸುಮಾರು 1,000 ಜನರು ಭಾಗವಹಿಸಿದ್ದರು. ಈ ಗುಂಪುಗಳು ಖಲಿಸ್ತಾನಿ ಉಗ್ರಗಾಮಿಗಳು … Continued

ವೀಡಿಯೊ | ದಾಳಿಕೋರರನ್ನು ಬಂಧಿಸುವ ಬದಲು ದೇವಸ್ಥಾನದ ದಾಳಿ ವಿರುದ್ಧ ಪ್ರತಿಭಟಿಸಿದ ಭಕ್ತರ ಮೇಲೆ ಹಲ್ಲೆ ನಡೆಸಿದ ಕೆನಡಾ ಪೊಲೀಸರು..!

ಭಾನುವಾರ ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನ್ ಪರ ಗುಂಪು ದಾಳಿ ಮಾಡಿದ ನಂತರ, ಪೊಲೀಸರು ದೇವಸ್ಥಾನಕ್ಕೆ ಹೋಗುವವರ ಜೊತೆ ಘರ್ಷಣೆ ನಡೆಸುತ್ತಿರುವ ವೀಡಿಯೊಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡವು. ಟೊರೊಂಟೊ ಬಳಿಯ ದೇವಸ್ಥಾನದ ಮೇಲೆ “ಭಾರತ ವಿರೋಧಿ” ಖಲಿಸ್ತಾನ ಪ್ರತ್ಯೇಕತಾವಾದಿಗಳು ದಾಳಿಯನ್ನು ಪ್ರತಿಭಟಿಸಿದ ಹಿಂದೂ ಭಕ್ತರ ಜೊತೆಯೇ ಕೆನಡಾದ ಪೊಲೀಸರು ಘರ್ಷಣೆ ನಡೆಸಿದರು. ಪೊಲೀಸರು ದೇವಾಲಯಕ್ಕೆ … Continued

ವೀಡಿಯೊ..| ಕೆನಡಾದ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ದೊಣ್ಣೆಗಳಿಂದ ದಾಳಿ ನಡೆಸಿದ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯವೊಂದರಲ್ಲಿ ಖಾಲಿಸ್ತಾನಿ ಪ್ರತ್ಯೇಕವಾದಿಗಳ ಗುಂಪೊಂದು ಭಾನುವಾರ ಭಕ್ತರ ಮೇಲೆ ಹಲ್ಲೆ ನಡೆಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋಗಳಲ್ಲಿ, ಹಿಂದೂ ಸಭಾ ಮಂದಿರದ ಹೊರಗೆ ಖಲಿಸ್ತಾನಿ ಧ್ವಜಗಳನ್ನು ಹಿಡಿದಿರುವ ವ್ಯಕ್ತಿಗಳ ಗುಂಪೊಂದು ದೊಣ್ಣೆಗಳಿಂದ ಜನರನ್ನು ಥಳಿಸುತ್ತಿರುವುದನ್ನು ಕಾಣಬಹುದು. ಹಿಂಸಾಚಾರವನ್ನು ಖಂಡಿಸಿದ ಕೆನಡಾದ ಸಂಸತ್ ಸದಸ್ಯ ಚಂದ್ರ ಆರ್ಯ ಅವರು ಖಲಿಸ್ತಾನಿಗಳು “ಕೆಂಪು ಗೆರೆಯನ್ನು … Continued

ಸ್ವಪಕ್ಷದ ಸಂಸದರಿಂದಲೇ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆಗೆ ಒತ್ತಾಯ ; ಅಕ್ಟೋಬರ್ 28ರ ವರೆಗೆ ಗಡುವು

ಒಟ್ಟಾವಾ: ಸಿಬಿಸಿ ನ್ಯೂಸ್‌ನ ವರದಿಯ ಪ್ರಕಾರ, ಸಂಸತ್ತಿನ ಹಿಲ್‌ನಲ್ಲಿ ಸಭೆ ನಡೆಸಿದ್ದ ಲಿಬರಲ್ ಪಕ್ಷದ ಸಂಸದರು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಸಭೆಯ ಸಮಯದಲ್ಲಿ, ಭಿನ್ನಮತೀಯ ಸಂಸದರು ಟ್ರುಡೊಗೆ ತಮ್ಮ ಆಕ್ಷೇಪಗಳನ್ನು ತಿಳಿಸಿದ್ದಾರೆ. ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಇದು ಟ್ರುಡೊ ಪಕ್ಷದೊಳಗೆ ಅವರ ಬಗ್ಗೆ ಹೆಚ್ಚುತ್ತಿರುವ ಅಸಮಾಧಾನವನ್ನು … Continued

ವೀಡಿಯೊ…| ನಿಜ್ಜರ್‌ ಕೊಲೆಯಲ್ಲಿ ಭಾರತ ಭಾಗಿಯಾಗಿದೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ ; ಒಪ್ಪಿಕೊಂಡ ಕೆನಡಾ ಪ್ರಧಾನಿ ಟ್ರುಡೊ…!

ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ಉಗ್ರಗಾಮಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟರು ಭಾಗಿಯಾಗಿದೆ ಎಂದು ಆರೋಪಿಸಿರುವುದಕ್ಕೆ ತಮ್ಮ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಒಪ್ಪಿಕೊಂಡಿದ್ದಾರೆ. ಕೆನಡಾದ ವಿದೇಶಿ ಹಸ್ತಕ್ಷೇಪ ವಿಚಾರಣೆಯ ಮೊದಲು ಸಾಕ್ಷ್ಯ ನೀಡಿದ ಟ್ರೂಡೊ, ನಿಜ್ಜರ್ ಹತ್ಯೆಯ ಆರೋಪಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವ ಮೊದಲು ಕೆನಡಾದ ಏಜೆನ್ಸಿಗಳು … Continued