ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರ ನೀಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಆದೇಶ

ನವದೆಹಲಿ: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ಮೇ 3 ರಂದು ನಡೆದಿದ್ದ ‘ನೀಟ್-ಯುಜಿ 2026’ (NEET-UG) ಪರೀಕ್ಷೆಯನ್ನು ಪೇಪರ್ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಂಗಳವಾರ ಅಧಿಕೃತವಾಗಿ ರದ್ದುಗೊಳಿಸಿದೆ. ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಹೊಸ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸುವುದಾಗಿ … Continued

ಸಂತರ ತೀವ್ರ ವಿರೋಧಕ್ಕೆ ಮಣಿದ ಆಯೋಜಕರು ; ಮಥುರಾದಲ್ಲಿ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು

ಲಕ್ನೋ: ಹೊಸ ವರ್ಷದ ಅಂಗವಾಗಿ ಮಥುರಾದಲ್ಲಿ ಆಯೋಜಿಸಲಾಗಿದ್ದ ನಟಿ ಸನ್ನಿ ಲಿಯೋನ್ ಕಾರ್ಯಕ್ರಮವನ್ನು ಸ್ಥಳೀಯ ಸಂತರು ಮತ್ತು ಧಾರ್ಮಿಕ ಮುಖಂಡರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇಂತಹ ಕಾರ್ಯಕ್ರಮಗಳು ಬ್ರಜ್ ಭೂಮಿಯ ಧಾರ್ಮಿಕ ಸಂಪ್ರದಾಯಗಳಿಗೆ ವಿರುದ್ಧವಾಗಿವೆ ಮತ್ತು ಭಕ್ತರ ಭಾವನೆಗಳಿಗೆ ಧಕ್ಕೆ ತರುತ್ತವೆ ಎಂದು ಅವರು ಅಸಮಾಧಾನವ್ಯಕ್ತಪಡಿಸಿದ್ದಾರೆ. ಕೋಟಿಗಟ್ಟಲೆ ಭಕ್ತರಿಗೆ ಆಧ್ಯಾತ್ಮಿಕ ಕೇಂದ್ರವಾಗಿರುವ ಪವಿತ್ರ ಮಥುರಾದಲ್ಲಿ … Continued

ಮದುವೆ ಕೆಲವೇ ಕ್ಷಣಗಳ ಮೊದಲು ವರನನ್ನು ಧಿಕ್ಕರಿಸಿ ಮದುವೆ ಸ್ಥಗಿತಗೊಳಿಸಿದ ವಧು…!

ಬರೇಲಿ: ದಂಪತಿಯ ಜೀವನದ ಅತ್ಯಂತ ಸಂತೋಷದ ದಿನವು ದುಃಸ್ವಪ್ನವಾಗಿ ಮಾರ್ಪಟ್ಟಿದೆ. ಮದುವೆಯ ವಿಧಿವಿಧಾನಗಳು ಆರಂಭಗೊಳ್ಳುವ ಕೆಲವೇ ಕ್ಷಣಗಳ ಮೊದಲು ವರನನ್ನು ಮದುವೆಯಾಗಲು ವಧಿ ನಿರಾಕರಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ (Bareilly) ನಡೆದಿದೆ ಎಂದು ವರದಿಯಾಗಿದೆ. ವರನು ಭಾರೀ ವರದಕ್ಷಿಣೆಯಾಗಿ ಕಾರು ಮತ್ತು ₹20 ಲಕ್ಷ ನಗದು ಹಣಕ್ಕೆ ಬೇಡಿಕೆ ಇಟ್ಟಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. … Continued

ಮೊಂತಾ ಚಂಡಮಾರುತ : 72 ರೈಲುಗಳ ಸಂಚಾರ ರದ್ದು, ಹಲವು ವಿಮಾನಗಳ ಸಂಚಾರ ಸ್ಥಗಿತ

ವಿಶಾಖಪಟ್ಟಣಂ: ‘ಮೊಂತಾ’ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯನ್ನು ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ, ರೈಲ್ವೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ72ಕ್ಕೂ ಹೆಚ್ಚು ಪ್ಯಾಸೆಂಜರ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಿದ್ದಾರೆ. ಈ ರದ್ದತಿಯು ಅಕ್ಟೋಬರ್ 28 ಮತ್ತು 29ರ ಮಧ್ಯೆ ಜಾರಿಯಲ್ಲಿರಲಿದ್ದು, ವಿಜಯವಾಡ, ರಾಜಮಂಡ್ರಿ, ಕಾಕಿನಾಡ, ವಿಶಾಖಪಟ್ಟಣಂ ಮತ್ತು ಭೀಮಾವರಂ ಮಾರ್ಗಗಳ ಪ್ರಮುಖ ರೈಲು ಸೇವೆಗಳ ಮೇಲೆ ಪರಿಣಾಮ ಬೀರಿದೆ. ಹವಾಮಾನ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ ; ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ (stampede) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿಅಮಾನತು ಮಾಡಲಾಗಿದ್ದ ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಆಗಿದ್ದ ವಿಕಾಸ್‌ ಕುಮಾರ್ ಒಬ್ಬರನ್ನು ಬಿಟ್ಟು ಬೆಂಗಳೂರು  ಪೊಲೀಸ್ ಕಮಿಷನರ್ … Continued

ಅನರ್ಹರ ಬಿಪಿಎಲ್​ ಕಾರ್ಡ್​ ರದ್ದು ಮಾಡಿ ; ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಅನರ್ಹ ಬಿಪಿಎಲ್ ಪಡಿತರ ಚೀಟಿದಾರರನ್ನು ಗುರುತಿಸಿ ಅಂತಹ ಕಾರ್ಡ್‌ಗಳನ್ನು ಹಂತ ಹಂತವಾಗಿ ರದ್ದು ಮಾಡಿ. ಆದರೆ, ಈ ವೇಳೆ ಯಾವುದೇ ಅರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ … Continued