ಯಲ್ಲಾಪುರ : ಅರೆಬೈಲ್‌ ಘಟ್ಟದಲ್ಲಿ ಕಾರಿನಲ್ಲಿ ಸಜೀವ ದಹನವಾದ ಚಾಲಕ

ಕಾರವಾರ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರಿನೊಳಗಿದ್ದ ಚಾಲಕ ಸುಟ್ಟು ಕರಕಲಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾಕ್ಕೆ ಬರುತ್ತಿದ್ದ ವೋಕ್ಸ್‌ ವ್ಯಾಗನ್‌ (Volkswagen) ಕಾರಿನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ತೀವ್ರವಾಗಿದ್ದರಿಂದ ಕಾರಿನಲ್ಲಿದ್ದ ಚಾಲಕನಿಗೆ … Continued

ಕೇವಲ 400 ಮೀಟರ್‌ ದೂರ ಕರೆದೊಯ್ದಿಕ್ಕೆ ವಿದೇಶಿ ಮಹಿಳೆಯಿಂದ 18,000 ರೂ.ಬಾಡಿಗೆ ವಸೂಲಿ ಮಾಡಿದ ಟ್ಯಾಕ್ಸಿ ಚಾಲಕ…!

ಮುಂಬೈ: ವಿಮಾನ ನಿಲ್ದಾಣದಿಂದ ಕೇವಲ 400 ಮೀಟರ್ ದೂರದಲ್ಲಿರುವ ಹೋಟೆಲ್‌ಗೆ ಕರೆದೊಯ್ಯಲು ಅಮೆರಿಕದ ಪ್ರಜೆಯೊಬ್ಬರಿಂದ ಬರೋಬ್ಬರಿ 18,000 ರೂಪಾಯಿ ($200) ವಸೂಲಿ ಮಾಡಿದ್ದ ಟ್ಯಾಕ್ಸಿ ಚಾಲಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಜನವರಿ 12 ರಂದು ಈ ಘಟನೆ ನಡೆದಿದ್ದು, ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್-2ಕ್ಕೆ ಬಂದಿಳಿದ ಅಮೆರಿಕದ ಮಹಿಳೆಯೊಬ್ಬರು ಹತ್ತಿರದ ‘ಹಿಲ್ಟನ್ ಹೋಟೆಲ್’ಗೆ ಹೋಗಲು ಟ್ಯಾಕ್ಸಿ … Continued

ಇಂದೋರದ ಈ ಕೋಟ್ಯಧಿಪತಿ ‘ಭಿಕ್ಷುಕನ ಆಸ್ತಿ ಕೇಳಿದ್ರೆ ದಂಗಾಗೋದು ಗ್ಯಾರಂಟಿ : 3 ಮನೆಗಳು, 3 ಆಟೋಗಳು, ಕಾರು….

ಇಂದೋರ್: ಕೈಯಲ್ಲಿ ಹರಿದ ಚೀಲ, ಕಾಲಿಗೆ ಚಪ್ಪಲಿ ಹಾಕುವ ಬದಲು ಕೈಗೆ ಹಾಕಿಕೊಂಡು, ಕಬ್ಬಿಣದ ಸಣ್ಣ ಗಾಡಿಯ ಮೇಲೆ ಕುಳಿತು ಜನರಲ್ಲಿ ಅನುಕಂಪ ಮೂಡಿಸುವ ಈ ವ್ಯಕ್ತಿಯನ್ನು ನೋಡಿದರೆ ಯಾರಿಗಾದರೂ ಅಯ್ಯೋ ಅನ್ನಿಸದೇ ಇರದು. ಆದರೆ, ಈತನ ನಿಜವಾದ ಮುಖವಾಡ ಕಳಚಿದಾಗ ಇಡೀ ಇಂದೋರ ನಗರವೇ ಬೆಚ್ಚಿಬಿದ್ದಿದೆ. ಏಕೆಂದರೆ, ಈತ ಸಾಮಾನ್ಯ ಭಿಕ್ಷುಕನಲ್ಲ, ಬದಲಿಗೆ ಮೂರು … Continued

ಡಿವೈಡರ್​ಗೆ ಡಿಕ್ಕಿಯಾಗಿ ಕಾರಿಗೆ ಬೆಂಕಿ ; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಾವು

ಧಾರವಾಡ:  ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಜೀವಂತವಾಗಿ ದಹನವಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು  ಪಂಚಾಕ್ಷರಿ ಸಾಲಿಮಠ ಎಂದು ಗುರುತಿಸಲಾಗಿದ್ದು, ಅವರು ಹಾವೇರಿಯಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಶುಕ್ರವಾರ ರಾತ್ರಿ ಐ20 ಕಾರಿನಲ್ಲಿ … Continued

ಬಿಜೆಪಿ ನಾಯಕನ ಕಾರಿನ ಬಾನೆಟ್‌ ಒಳಗೆ ಬೃಹತ್‌ ಹೆಬ್ಬಾವು ಪತ್ತೆ ; ವೀಡಿಯೊ ವೈರಲ್‌…

ಬಾರಾಬಂಕಿ:  ಕಾರಿನ ಬಾನೆಟ್ ಒಳಗೆ ಸೇರಿಕೊಂಡ ಬೃಹತ್ ಗಾತ್ರದ ಹೆಬ್ಬಾವೊಂದು ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ವಿದ್ಯಮಾನ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾರಿನ ಎಂಜಿನ್ ಬಳಿಯ ಬಾನೆಟ್ ಒಳಗಿನಿಂದ ಬೃಹತ್ ಗಾತ್ರದ ಹಾವನ್ನು ರಕ್ಷಿಸಿದ್ದಾರೆ. ಈ ಕಾರು ಬಿಜೆಪಿ … Continued

ಬೆಳಗಾವಿ | ಕಾರಿನ ಮೇಲೆ ಮಗುಚಿ ಬಿದ್ದ ಲಾರಿ ; ಇಬ್ಬರಿಗೆ ಗಾಯ

ಬೆಳಗಾವಿ: ಬೆಳಗಾವಿ ಕೆಎಲ್‌ಇ ಆಸ್ಪತ್ರೆ ಸನಿಹದ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ಲಾರಿಯೊಂದು ಕಾರಿನ ಮೇಲೆ ಬಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಕಾಂಕ್ರೀಟ್ ಮಿಕ್ಸರ್ ಲಾರಿ ವೇಗವಾಗಿ ಚಲಿಸುತ್ತಿದ್ದ ವೇಳೆ ಪಕ್ಕದ ಕಾರಿನ ಮೇಲೆ ಉರುಳಿಬಿದ್ದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಿಸಿದ್ದಾರೆ. … Continued

ಚಿಕ್ಕಬಳ್ಳಾಪುರ | ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು; ತಾಯಿ, ಮಗನ ಸಜೀವ ದಹನ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಡಿಕ್ಕಿ ಹೊಡೆದ ನಂತರ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಕಾರಿನಲ್ಲಿದ್ದ ಆಂಧ್ರ ಮೂಲದ ತಾಯಿ ಕಲಾವತಿ (54) ಹಾಗೂ ಕಾರು ಚಾಲನೆ ಮಾಡುತ್ತಿದ್ದ ಧನಂಜಯ (34) ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ … Continued

ಇದು ಪೈಸೆ ವಾಲಿ ಕಾರ್‌ | ಒಂದು ರೂಪಾಯಿ ನಾಣ್ಯದಿಂದಲೇ ಕಾರನ್ನು ಅಲಂಕರಿಸಿದ ವ್ಯಕ್ತಿ ; ವೀಡಿಯೊ ವೈರಲ್

ಈಗಿನ ಕಾಲಘಟ್ಟದಲ್ಲಿ ಜನರು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಲು ಏನಾದರೂ ವಿಚಿತ್ರವಾದದ್ದನ್ನು ಮಾಡಲು ಯೋಚಿಸುತ್ತಾರೆ. ಈಗ ಇದೇ ತರಹ ಕಾರಿಗೆ ಸಂಬಂಧಿಸಿದ ವಿಡಿಯೋವೊಂದು ಹೊರಬಿದ್ದಿದೆ. ಈ ವೀಡಿಯೊದಲ್ಲಿ ವ್ಯಕ್ತಿಯೊಬ್ಬರು ಸಂಪೂರ್ಣ ಕಾರನ್ನು ಒಂದು ರೂ. ನಾಣ್ಯಗಳಿಂದ ಅಲಂಕರಿಸಿದ್ದಾರೆ. ಒಂದು ರೂಪಾಯಿ ನಾಣ್ಯದಿಂದ ಅಲಂಕರಿಸಲಾದ ಈ ಕಾರಿನ ವಿನ್ಯಾಸವನ್ನು ನೋಡಿದ ಜನರು ಅಚ್ಚರಿಪಟ್ಟಿದ್ದಾರೆ, ಇದಕ್ಕೆ ಕಾರಣ ನಾಣ್ಯಗಳನ್ನು … Continued

ಅಂಕೋಲಾ | ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ರೂ. ಪತ್ತೆ…!

ಅಂಕೊಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ (Ankola) ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರ ಪಕ್ಕದ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ (Car) 1.15 ಕೋಟಿ ರೂ. ಪತ್ತೆಯಾಗಿದ್ದು, ಇದರ ಮೂಲ ಇನ್ನೂ ನಿಗೂಢವಾಗಿದೆ. ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು ಪಾರ್ಕ್ ಮಾಡಲಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಅಂಕೋಲಾ ಪೊಲೀಸರಿಗೆ ಮಾಹಿತಿ ಸಿಗುತ್ತಿದ್ದಂತೆ … Continued

ವೀಡಿಯೊ..| ಹೆದ್ದಾರಿ ಬದಿ ಇದ್ದ ಹೊಟೇಲ್‌ ಒಳಗೆ ನುಗ್ಗಿದ ಕಾರು ; ಮೂವರಿಗೆ ಗಾಯ

ಅಹಮದಾಬಾದ್ : ಕಾರೊಂದು ರಸ್ತೆ ಬದಿಯ ರೆಸ್ಟೋರೆಂಟಿಗೆ ನುಗ್ಗಿದ ಘಟನೆ ಗುಜರಾತ್‌ ಛೋಟಾ ಉದಯಪುರ (Chhota Udaipur) ಜಿಲ್ಲೆಯಿಂದ ವರದಿಯಾಗಿದ್ದು, ಸಿಸಿ ಕೆಮರಾದಲ್ಲಿ ದಾಖಲಾಗಿದ್ದ ಈ ಅಪಘಾತದ ವೀಡಿಯೊದಲ್ಲಿ ಸೆರೆಯಾಗಿದೆ. ರೆಸ್ಟೊರೆಂಟ್ ಒಂದರಲ್ಲಿ ಗ್ರಾಹಕರು ಆಹಾರ ಸೇವಿಸುತ್ತ ಕುಳಿತಿದ್ದಾಗ ಕಾರೊಂದು ಸೀದಾ ರೆಸ್ಟೊರೆಂಟ್ ಒಳಗೇ ನುಗ್ಗಿದೆ. ಕ್ಷಣಮಾತ್ರದಲ್ಲಿ ಆ ಹೊಟೇಲನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದೆ. ಡಿ.10ರ ಬೆಳ್ಳಂಬೆಳಗ್ಗೆ … Continued