ಬುಡಕಟ್ಟು ಜನಾಂಗದವರ ಬಗ್ಗೆ ಹೇಳಿಕೆ : ನಟ ವಿಜಯ ದೇವರಕೊಂಡ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ : ಬುಡಕಟ್ಟು ಸಮುದಾಯವನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ ಒಂದು ತಿಂಗಳ ನಂತರ, ನಟ ವಿಜಯ ದೇವರಕೊಂಡ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೈಬರಾಬಾದ್‌ನ ರಾಯದುರ್ಗಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸೈದಾಬಾದ್ ನಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿಯ ರಾಜ್ಯಾಧ್ಯಕ್ಷ ನೆನವತ್ ಅಶೋಕಕುಮಾಕ ನಾಯಕ್ … Continued

ಬೆಂಗಳೂರು | ಪುನರ್ವಸತಿ ಕೇಂದ್ರದಲ್ಲಿ ರೋಗಿಗೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆ : ವೀಡಿಯೊ ವೈರಲ್‌

ಬೆಂಗಳೂರು : ಬೆಂಗಳೂರಿನ ಬಳಿಯ ಪುನರ್ವಸತಿ ಕೇಂದ್ರವೊಂದರಲ್ಲಿ ರೋಗಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದ್ದು, ಅದರ ಆಘಾತಕಾರಿ ವೀಡಿಯೊವೊಂದು ಹೊರಹೊಮ್ಮಿದೆ. ಸಿಸಿಟಿವಿ ದೃಶ್ಯಗಳಲ್ಲಿ ನಾಲ್ವರು ಇತರರ ಸಮ್ಮುಖದಲ್ಲಿ ವ್ಯಕ್ತಿಯೊಬ್ಬ ಕೋಣೆಯೊಳಗೆ ಕೋಲಿನಿಂದ ರೋಗಿಯನ್ನು ಹೊಡೆಯುತ್ತಿರುವುದನ್ನು ತೋರಿಸಲಾಗಿದೆ. ರೋಗಿಯನ್ನು ಇಬ್ಬರು ಎಳೆದೊಯ್ದಿರುವುದು ಸಹ ಕಂಡುಬಂದಿದೆ. ಬೆಂಗಳೂರಿನಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ನೆಲಮಂಗಲದಲ್ಲಿರುವ ಖಾಸಗಿ … Continued

ಭಾರತ ಸರ್ಕಾರ ವಿರುದ್ಧ ಹೈಕೋರ್ಟ್​​ನಲ್ಲಿ ಮೊಕದ್ದಮೆ ಹೂಡಿದ ಇಲಾನ್ ಮಸ್ಕ್ ಒಡೆತನದ ಎಕ್ಸ್‌

ಬೆಂಗಳೂರು : ಎಲಾನ್ ಮಸ್ಕ್ ಒಡೆತನದ ಎಕ್ಸ್‌ ವೆಬ್‌ಸೈಟ್‌ನಲ್ಲಿನ ಟ್ವೀಟ್ ಮತ್ತು ಇತರ ವಿಷಯವನ್ನು ತೆಗೆದುಹಾಕುವಂತೆ ಸೂಚಿಸಲು ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾಯ್ದೆ (ಐಟಿ ಆಕ್ಟ್) ಸೆಕ್ಷನ್ 79(3)(ಬಿ)ಯನ್ನು ಬಳಸುವ ವಿಧಾನವನ್ನು ಪ್ರಶ್ನಿಸಿ ಎಕ್ಸ್, ಭಾರತ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಭಾರತದಲ್ಲಿನ ಸರ್ಕಾರಿ ಅಧಿಕಾರಿಗಳು ಸರಿಯಾದ ಕಾನೂನು ಕಾರ್ಯವಿಧಾನಗಳನ್ನು ಬೈಪಾಸ್ … Continued

ಮಹಾಕುಂಭ ಮೇಳ : ತಪ್ಪು ಮಾಹಿತಿ ಹರಡಿದ 140 ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳ ವಿರುದ್ಧ ಪ್ರಕರಣ ದಾಖಲು

ಪ್ರಯಾಗರಾಜ್ : ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ 140 ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳ ವಿರುದ್ಧ 13 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಮಹಾಕುಂಭದ ಉಪಪೊಲೀಸ್ ಮಹಾನಿರೀಕ್ಷಕ (ಡಿಐಜಿ) ವೈಭವ ಕೃಷ್ಣ ದೃಢಪಡಿಸಿದ್ದಾರೆ. ಫೆಬ್ರವರಿ 26ರಂದು ಮುಂಬರುವ ಮಹಾ ಶಿವರಾತ್ರಿ ಹಬ್ಬಕ್ಕೆ ಪೊಲೀಸರು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿದ್ದಾರೆ ಎಂದು ಅವರು ತಿಳಿಸಿದರು. “ಹಾದಿತಪ್ಪಿಸುವ ವಿಷಯವನ್ನು ಹಂಚಿಕೊಂಡ … Continued

ನನ್ನ ಕೊಲೆಗೆ ಯತ್ನಿಸಿದ ಸಚಿವೆ ಹೆಬ್ಬಾಳ್ಕರ್‌ : ಪ್ರತಿದೂರು ದಾಖಲಿಸಿದ ಸಿ.ಟಿ.ರವಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಸದನದಲ್ಲಿ ನನಗೆ ಕೊಲೆಗಡುಕ ಎಂದು ನಿಂದನೆ ಮಾಡಿ ತಮ್ಮ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ … Continued

ಕರ್ನಾಟಕ ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಿದ ಎಂಇಎಸ್ ನಾಯಕರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನ ಆಚರಣೆ ಮಾಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ವಿರುದ್ಧ ಪೊಲೀಸರು ಕ್ರಮ ಜರುಗಿಸಲು ಮುಂದಾಗಿದ್ದಾರೆ. ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನೀಡದೇ ಇದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಬೀದಿಗಿಳಿದುಕರಾಳ ದಿನ ಆಚರಣೆ ಮಾಡಿದ್ದರು. … Continued

ಬಿಜೆಪಿ ಶಾಸಕ ಯತ್ನಾಳ ವಿರುದ್ಧ ದೂರು ದಾಖಲು

ವಿಜಯಪುರ : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಪದಬಳಸಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಅಕ್ಟೋಬರ್ ೧೫ರಂದು ನಡೆದ ‘ವಕ್ಫ್ ಹಠಾವೋ ದೇಶ ಬಚಾವೋ’ … Continued

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಬೆಂಗಳೂರು : ಜೆಡಿಎಸ್ ನಾಯಕ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮತ್ತು ಪರಿಷತ್ ಸದಸ್ಯ ರಮೇಶ್ ಗೌಡ ವಿರುದ್ಧ ವಿಜಯ ಟಾಟಾ ಅವರು ಸುಲಿಗೆ ಮತ್ತು ಜೀವ ಬೆದರಿಕೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ದೂರಿನಲ್ಲಿ ಭದ್ರತೆಯನ್ನೂ ಕೋರಿದ್ದಾರೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಜಯ ಟಾಟಾ ಅವರು … Continued

ಕಾಪಿರೈಟ್ ಉಲ್ಲಂಘನೆ; ನಟ ರಕ್ಷಿತ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಆರೋಪದಡಿ ಖ್ಯಾತ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಎಂಆರ್‌ಟಿ ಮ್ಯೂಸಿಕ್‌ನ ಪಾಲುದಾರಿಕೆ ಹೊಂದಿರುವ ನವೀನಕುಮಾರ ಎಂಬವರು ’ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿನ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು … Continued

ದೇಗುಲದ ಆವರಣದ ಒಳಗೆ ಗೋವಿನ ರುಂಡ ಎಸೆದ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ರತ್ಲಾಮ್: ಮಧ್ಯಪ್ರದೇಶದ ಜಯೋರಾ ಪಟ್ಟಣದ ದೇವಸ್ಥಾನದ ಆವರಣದಲ್ಲಿ ಕತ್ತರಿಸಿದ ಹಸುವಿನ ತಲೆಯನ್ನು ಎಸೆದ ಆರೋಪದ ಮೇಲೆ ನಾಲ್ವರು ಆರೋಪಿಗಳ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಜಾರಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಶುಕ್ರವಾರ ಮುಂಜಾನೆ ದೇವಸ್ಥಾನದ ಆವರಣದಲ್ಲಿ ಗೋವಿನ ರುಂಡದ ಭಾಗಗಳನ್ನು ಎಸೆದಿದ್ದಾರೆ ಎಂದು ಅಧಿಕಾರಿಗಳು … Continued