ವೀಡಿಯೊ..: ಚಲಿಸುತ್ತಿದ್ದ ಬೈಕ್‌ ಸವಾರನಿಗೆ ಹಾವು ಕಡಿದು ಸ್ಥಳದಲ್ಲೇ ಸಾವು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ದ್ವಿಚಕ್ರವಾಹನದಲ್ಲಿದ್ದ ವ್ಯಕ್ತಿಯೊಬ್ಬನಿಗೆ ನಾಗರ ಹಾವು ಕಚ್ಚಿ ಆತ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಹಾವು ಕಚ್ಚಿದ ಅವರು ಕೆಲವೇ ಕ್ಷಣಗಳಲ್ಲಿ ಅವರು ನಿಧನರಾಗಿದ್ದಾರೆ. ಇಂದೋರ್‌ನ ಮೊವ್ ಪೊಲೀಸ್ ಠಾಣೆ ವ್ಯಾಪ್ತಿಯ ತೇಲಿ ಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮನೀಶ ಎಂದು ಗುರುತಿಸಲಾಗಿದ್ದು, ಅವರು ಹಾವು ಹಿಡಿಯುವುದರಲ್ಲಿ … Continued

ವೀಡಿಯೊ | ದಾವಣಗೆರೆಯಲ್ಲಿ ರೋಡ್‌ ಶೋ ವೇಳೆ ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪ : ವಾಹನದತ್ತ ನುಗ್ಗಿದ ವ್ಯಕ್ತಿ

ದಾವಣಗೆರೆ : ಶನಿವಾರ ದಾವಣಗೆರೆಯಲ್ಲಿ ಚುನಾವಣಾ ರ್ಯಾಲಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯನ್ನು ವ್ಯಕ್ತಿಯೊಬ್ಬ ಉಲ್ಲಂಘಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯೊಬ್ಬ ಬ್ಯಾರಿಕೇಡ್ ಮೇಲೆ ಹಾರಿ ಪ್ರಧಾನಿಯ ಬಳಿಗೆ ಹೋಗಲು ಪ್ರಯತ್ನಿಸಿದ್ದಾನೆ. ಆತ ಭದ್ರತಾ ಕ್ರಮಗಳನ್ನು ಉಲ್ಲಂಘಿಸಿ ಪ್ರಧಾನಿ ವಾಹನದತ್ತ ಧಾವಿಸುತ್ತಿರುವಾಗ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಧಾವಿಸಿ ತಕ್ಷಣವೇ ಆತನನ್ನು ತಡೆದಿದ್ದಾರೆ. … Continued

ಎಎಪಿ ಶಾಸಕನ ಬೆನ್ನಟ್ಟಿ ಥಳಿಸಿದ ಪಕ್ಷದ ಕಾರ್ಯಕರ್ತರು : ದೃಶ್ಯ ಕ್ಯಾಮರಾದಲ್ಲಿ ಸೆರೆ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ದೆಹಲಿ ನಗರ ಘಟಕವು ಸೋಮವಾರ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಗುಲಾಬ್ ಸಿಂಗ್ ಯಾದವ್ ಅವರನ್ನು ಹಲವು ಪಕ್ಷದ ಕಾರ್ಯಕರ್ತರು ಬೆನ್ನಟ್ಟಿ ಥಳಿಸಿದ ವೀಡಿಯೊವನ್ನು ಹಂಚಿಕೊಂಡಿದೆ. ಬಿಜೆಪಿ ಮತ್ತು ಇತರ ಟ್ವಿಟ್ಟರ್ ಹ್ಯಾಂಡ್ಲರ್‌ಗಳು ಹಂಚಿಕೊಂಡ ವೀಡಿಯೊದಲ್ಲಿ, ಗುಲಾಬ್‌ ಸಿಂಗ್ ಅವರು ಕಾರ್ಯಕರ್ತರ ಗುಂಪಿನೊಂದಿಗೆ ಬಿಸಿಯಾದ ವಾಗ್ವಾದ ಮಾಡುತ್ತಿರುವುದನ್ನು … Continued