ನಾಲ್ಕು ದೇಶಗಳ ಪ್ರಾಧಿಕಾರಗಳಿಗೆ ಜನಾರ್ದನ ರೆಡ್ಡಿ ಆಸ್ತಿ ಮಾಹಿತಿ ಒದಗಿಸಲು ಕೋರಿದ ಸಿಬಿಐ ವಿಶೇಷ ನ್ಯಾಯಾಲಯ

ಬೆಂಗಳೂರು: ಕಬ್ಬಿಣ ಅದಿರಿನ ಅಕ್ರಮ ಮಾರಾಟದ ಮೂಲಕ ಗಳಿಸಿರುವ ವ್ಯಾಪಕ ಹಣವನ್ನು ವಿವಿಧ ದೇಶಗಳಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಇರಿಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಮಾಹಿತಿ, ದಾಖಲೆಗಳನ್ನು ಪಡೆಯಲು ತನಿಖಾ ಸಂಸ್ಥೆಗೆ ಸಹಾಯ ಮಾಡುವಂತೆ ನಾಲ್ಕು ದೇಶಗಳ ಸಕ್ಷಮ ಪ್ರಾಧಿಕಾರಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಇತ್ತೀಚೆಗೆ ಮನವಿ ಮಾಡಿದೆ. … Continued