ತನ್ನ ವರ್ಗಾವಣೆ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪರಂಬೀರ್‌ ಸಿಂಗ್‌, ದೇಶ್ಮುಖ್ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯ

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಹೊರಿಸಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಇತ್ತೀಚೆಗೆ ಮುಂಬೈ ಪೊಲೀಸ್ ಆಯುಕ್ತರಾಗಿದ್ದ ಸಿಂಗ್, ಕಳೆದ ವಾರ ಅವರ ವರ್ಗಾವಣೆ ಕಾನೂನುಬಾಹಿರ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದು … Continued

ಯೋಗೀಶ್‌ ಗೌಡ ಕೊಲೆ ಪ್ರಕರಣ :ವಿನಯ್‌ ಕುಲಕರ್ಣಿ ಜಾಮೀನು ಅರ್ಜಿ ವಜಾ ಮಾಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌

ಬೆಂಗಳೂರು: ಧಾರವಾಡ ಜಿಪಂ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ವಜಾ ಮಾಡಿದೆ. ಈ ಪ್ರಕರದಲ್ಲಿ ತಮಗೆ ಜಾಮೀನು ನೀಡುವಂತೆ ಕೋರಿ ವಿನಯ್‌ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅಕ್ಷೇಪಣೆ ಸಲ್ಲಿಸಿದ್ದ ಸಿಬಿಐ, ಯೋಗೀಶ್‌ … Continued

ಸೇನೆ ಅಧಿಕಾರಿಗಳ ನೇಮಕದಲ್ಲಿ ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆಗೆನಿರ್ಧಾರ

ಪಂಜಾಬ್‌ನ ಕಪೂರ್ಥಲಾ ಜಿಲ್ಲೆಯಲ್ಲಿ ನಡೆಯುತ್ತಿರುವ ಸೇನಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರದ ಆರೋಪಗಳ ಕುರಿತು ಸಿಬಿಐ ತನಿಖೆ ನಡೆಸಲು ಭಾರತೀಯ ಸೇನೆ ನಿರ್ಧರಿಸಿದೆ. ಮೂರು ಸೇವೆಗಳಲ್ಲಿ ಅಧಿಕಾರಿಗಳಾಗಿ ಆಯ್ಕೆಯಾಗಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸೇವಾ ಆಯ್ಕೆ ಕೇಂದ್ರಗಳು ಸೇವಾ ಆಯ್ಕೆ ಮಂಡಳಿಯ ಪರೀಕ್ಷೆಗಳನ್ನು ನಡೆಸುತ್ತವೆ. ಸೇನಾ ಗುಪ್ತಚರ ಸಂಸ್ಥೆಗಳ ಪೂರ್ವಭಾವಿ ಕಾರ್ಯಾಚರಣೆಯ ಆಧಾರದ ಮೇಲೆ, ಸೇವೆಗಳ ಆಯ್ಕೆ … Continued

ಸಿಡಿಗಾಗಿ ೧೫ ಕೋಟಿ ರೂ.ಖರ್ಚು, ನಾಲ್ಕು ತಂಡಗಳಿಂದ ಕೆಲಸ: ಬಾಲಚಂದ್ರ ಜಾರಕಿಹೊಳಿ ಮತ್ತೊಂದು ಬಾಂಬ್‌..!

ಬೆಂಗಳೂರು:ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದ ಬೆನ್ನಲ್ಲೇ ಮಾಜಿ ಸಚಿವ ಹಾಗೂ ರಮೇಶ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಕೆಕೆ ಗೆಸ್ಟ್ ಹೌಸ್ ನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿಡಿ ನಂಟು ಬೆಳಗಾವಿಯಿಂದ ಬೆಂಗಳೂರಿನ ವರೆಗೂ ಇರುವ … Continued

53 ಲಕ್ಷ ರೂ. ಹಿಂದಿರುಗಿಸಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಪ್ತ ಸಚಿನ್‌ ನಾರಾಯಣ್‌ ಮನೆ ಮತ್ತವರ ಕಂಪನಿ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ 53 ಲಕ್ಷ ರೂ. ಹಣ ಬಿಡುಗಡೆ ಮಾಡುವಂತೆ ಸಿಬಿಐಗೆ ಹೈಕೋರ್ಟ್‌ ಸೂಚಿಸಿದೆ. ಡಿ.ಕೆ.ಶಿವಕುಮಾರ್‌ ದೆಹಲಿಯ ಫ್ಲಾಟ್‌ ಹಾಗೂ ಮನೆಯಲ್ಲಿ 2017ರಲ್ಲಿ ಏಳುಕೋಟಿ ರೂಪಾಯಿಗೂ ಅಧಿಕ ನಗದು ದೊರೆತ … Continued

ಕಲ್ಲಿದ್ದಲು ಹಗರಣ: ಟಿಎಂಸಿ ಸಂಸದ ಅಭಿಷೇಕ್‌ ಪತ್ನಿ ರುಜಿರಾ ವಿಚಾರಣೆ ನಡೆಸಿದ ಸಿಬಿಐ

ಕಲ್ಲಿದ್ದಲು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಂಗಳವಾರ ಕೋಲ್ಕತ್ತದಲ್ಲಿ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ನಿವಾಸಕ್ಕೆ ತೆರಳಿ ಅವರ ಪತ್ನಿ ರುಜಿರಾ ಬ್ಯಾನರ್ಜಿ ಅವರ ವಿಚಾರಣೆ ನಡೆಸಿದರು. ವಿಚಾರಣೆ ಸಂದರ್ಭದಲ್ಲಿ ರುಜಿರಾ ಅವರ ಬ್ಯಾಂಕ್‌ ವಹಿವಾಟಿನ ವಿವರಗಳನ್ನು ಪಡೆದುಕೊಂಡರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸೋಮವಾರ ರುಜಿರಾ ಸೋದರಿ ಮೇನಕಾ ಗಂಭೀರ್‌ ಅವರ … Continued

ಸಿಬಿಐನಿಂದ ಅಭಿಷೇಕ್‌ ಬ್ಯಾನರ್ಜಿ ಅತ್ತಿಗೆ ಮನೇಕಾ ಗಂಭೀರ್‌ ವಿಚಾರಣೆ

ಕೋಲ್ಕತಾ: ಕಲ್ಲಿದ್ದಲು ಅವ್ಯವಹಾರ ಪ್ರಕರಣದಲ್ಲಿ ಸಿಬಿಐ ಸೋಮವಾರ ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಹಾಗೂ ಸಂಸದ ಅಭಿಷೇಕ್‌ ಬ್ಯಾನರ್ಜಿಯ ಅತ್ತಿಗೆ ಮನೇಕಾ ಗಂಭೀರ್‌ ಅವರನ್ನು ದಕ್ಷಿಣ ಕೋಲ್ಕತ್ತಾ ನಿವಾಸದಲ್ಲಿ ವಿಚಾರಣೆ ನಡೆಸಿದೆ. ಮನೇಕಾ ಗಂಭೀರ್‌ ಅವರ ವಸತಿ ಸಮುಚ್ಚಯದಲ್ಲಿ ವಿಚಾರಣೆ ನಡೆಯಿತು. ಕಲ್ಲಿದ್ದಲು ಅವ್ಯವಹಾರ ಪ್ರಕರಣದಲ್ಲಿ ಭಾನುವಾರ ಸಿಬಿಐ ಅಭಿಷೇಕ್‌ ಪತ್ನಿ ರುಜಿರಾ ಬ್ಯಾನರ್ಜಿ ಅವರಿಗೆ … Continued

ಅಕ್ರಮ ಕಲ್ಲಿದ್ದಲು ಗಣಿಗಾರಿಕೆ: ಮಮತಾ ಸೋದರಳಿಯ ಅಭಿಷೇಕ್‌ ಪತ್ನಿಗೆ ಸಿಬಿಐ ನೋಟೀಸ್‌

ಕಲ್ಲಿದ್ದಲು ಗಣಿಗಾರಿಕೆ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಟಿಎಂಸಿ ಸಂಸದ ಹಾಗೂ ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್‌ ಬ್ಯಾನರ್ಜಿ ನಿವಾಸಕ್ಕೆ ತೆರಳಿ ನೊಟೀಸ್‌ ನೀಡಿದೆ. ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್‌ನ ಕುನುಸ್ಟೋರಿಯಾ ಮತ್ತು ಕಜೋರಿಯಾ ಕಲ್ಲಿದ್ದಲು ಗಣಿಗಳಲ್ಲಿ ಅಕ್ರಮ ಗಣಿಗಾರಿಕೆ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆ 2020 ರ ನವೆಂಬರ್‌ನಲ್ಲಿ ಪ್ರಕರಣ ದಾಖಲಿಸಿದ್ದು, ಕಲ್ಲಿದ್ದಲು … Continued

ರಾಕೇಶ ಅಸ್ತಾನೆಗೆ ಸಿಬಿಐ ಕ್ಲೀನ್‌ಚಿಟ್‌

ನವ ದೆಹಲಿ: ಸ್ಟರ್ಲಿಂಗ್ ಬಯೋಟೆಕ್ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಗುಜರಾತ್ ಕೇಡರ್ ಐಪಿಎಸ್ ಅಧಿಕಾರಿ ಮತ್ತು ಪ್ರಸ್ತುತ ಎನ್‌ಸಿಬಿ ಮುಖ್ಯಸ್ಥ ರಾಕೇಶ್ ಅಸ್ತಾನಾಗೆ ಕ್ಲೀನ್ ಚಿಟ್ ನೀಡಿದೆ. ಸಿಬಿಐ ಮುಖ್ಯಸ್ಥ ಹುದ್ದೆಗೆ ಮುಂಚೂಣಿಯಲ್ಲಿರುವ ಶ್ರೀ ಅಸ್ತಾನಾ, ಸಂದೇಸರ ಸಹೋದರರು ನಿರ್ವಹಿಸುತ್ತಿರುವ ಸ್ಟರ್ಲಿಂಗ್‌ ಬಯೋಟೆಕ್‌ ಅವ್ಯವಹಾರದಲ್ಲಿ ಹಣ ಪಡೆದುಕೊಂಡಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ. ಕೈಬರಹದ ಡೈರಿಗಳಲ್ಲಿ, … Continued

ಪಂಜಾಬ್‌ ಪೊಲೀಸರಿಗೆ ಫೈಲ್‌ ಹಿಂದಿರುಗಿಸಿದ ಸಿಬಿಐ

ಕೇಂದ್ರೀಯ ತನಿಖಾ ದಳವು (ಸಿಬಿಐ) 2015ರ ಸಕ್ರಿಲೇಜ್‌ ಘಟನೆಗಳಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಫೈಲ್‌ಗಳನ್ನು ಪಂಜಾಬ್ ಪೊಲೀಸರಿಗೆ ಹಿಂದಿರುಗಿಸಿದೆ ಎಂದು ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಿಳಿಸಿದ್ದಾರೆ. ಪ್ರಕರಣಗಳನ್ನು ತನಿಖೆ ಮಾಡಲು ರಾಜ್ಯಕ್ಕೆ ಅವಕಾಶ ನೀಡಬೇಕೆಂಬುದು ಪಂಜಾಬ್‌ ಕಾಂಗ್ರೆಸ್ ಸರ್ಕಾರದ ಬಹುದಿನಗಳ ಬೇಡಿಕೆಯಾಗಿತ್ತು. ಈ ಪ್ರಕರಣಗಳನ್ನು ಹಿಂದಿನ ಎಸ್‌ಎಡಿ-ಬಿಜೆಪಿ ಸರ್ಕಾರ ಸಿಬಿಐಗೆ ಹಸ್ತಾಂತರಿಸಿತ್ತು. ಸಿಬಿಐಗೆ ಪಂಜಾಬ್ … Continued