ವಿಡಿಯೋ | ಥಾರ್‌ಗೆ ಹಗ್ಗಕಟ್ಟಿ ಎಟಿಎಂ ಎಳೆದೊಯ್ದು ಹಣ ದೋಚಿ ರಸ್ತೆಯಲ್ಲೇ ಯಂತ್ರ ಎಸೆದು ಕಳ್ಳರು ಪರಾರಿ

ಬಾಲಾಸೋರ್ : ಒಡಿಶಾದ ಬಾಲಾಸೋರ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಮುಂಜಾನೆ ಎಟಿಎಂ ದರೋಡೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ದುಷ್ಕರ್ಮಿಗಳ ತಂಡ ಎಟಿಎಂ ಯಂತ್ರವನ್ನು ಕಪ್ಪು ಬಣ್ಣದ ಥಾರ್ (Thar) ವಾಹನಕ್ಕೆ ಹಗ್ಗ ಕಟ್ಟಿ ಎಳೆದಿದ್ದಾರೆ. ಅದು ಕಿತ್ತುಬಂದ ನಂತರ ಅದರೊಳಗಿನ ಹಣವನ್ನು ದೋಚಿ ಪರಾರಿಯಾಗಿದೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, … Continued

ವಿಡಿಯೋ | ಕರ್ತವ್ಯದಲ್ಲಿದ್ದ ಮಹಿಳಾ ವೈದ್ಯೆ-ಸಿಬ್ಬಂದಿ ಮೇಲೆ ಕಾರ್ಪೊರೇಟರ್ ಹಲ್ಲೆ

ಮುಂಬೈ: ಮುಂಬೈ ಸಮೀಪದ ಥಾಣೆ ಜಿಲ್ಲೆಯ ಡೊಂಬಿವ್ಲಿಯ ಕೆಡಿಎಂಸಿ (KDMC) ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಸ್ಥಳೀಯ ರಾಜಕೀಯ ನಾಯಕ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. … Continued

ಉರಿ ಬಿಸಿಲಿನಲ್ಲಿ ʼತಲೆಗವಸುʼ..: ಸಿಸಿಟಿವಿ ಸುಳಿವಿನ ಮೇಲೆ ಪೊಲೀಸರು ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣ ಭೇದಿಸಿದ್ದು ಹೇಗೆ ?

ಪುಣೆ: ರಿಯಲ್ ಎಸ್ಟೇಟ್ ಸಂಸ್ಥೆಯ ನಿರ್ದೇಶಕರಾಗಿದ್ದ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ ಅಗರ್ವಾಲ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು, ಇದು ಆಕಸ್ಮಿಕ ಸಾವಲ್ಲ, ಇದು ಭೀಕರ ಕೊಲೆ ಎಂಬುದು ಬೆಳಕಿಗೆ ಬಂದಿದೆ. ನವೆಂಬರ್‌ನಲ್ಲಿ ಅದ್ದೂರಿಯಾಗಿ ಮದುವೆಯಾಗಬೇಕಾಗಿದ್ದ ಭಾವಿ ಪತ್ನಿಯೇ ತನ್ನ ಪ್ರೇಮಿಯೊಂದಿಗೆ ಸೇರಿ ಕೇತನ್‌ ಅವರನ್ನು ಲೋಹಗಢ ಕೋಟೆಯಿಂದ … Continued

ಕಚೇರಿಯಲ್ಲೇ ಸಹೋದ್ಯೋಗಿ ಯುವತಿಗೆ 20 ಬಾರಿ ಚಾಕುವಿನಿಂದ ಇರಿದು ಕೊಲೆ ; ನಂತರ ತನ್ನ ಗಂಟಲನ್ನೇ ಸೀಳಿಕೊಂಡ ಪಾಗಲ್‌ ಪ್ರೇಮಿ !

ನವದೆಹಲಿ: ಪಂಜಾಬ್‌ನ ಮೊಹಾಲಿಯಲ್ಲಿ ಅತ್ಯಂತ ಭೀಕರ ಮತ್ತು ನಡುಕ ತರಿಸುವ ಘಟನೆಯೊಂದು ನಡೆದಿದೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಆಕೆಯ ಮಾಜಿ ಪ್ರಿಯಕರ ಎಂದು ನಂಬಲಾದ ಸಹೋದ್ಯೋಗಿ ಕಚೇರಿಯ ಒಳಗಡೆಯೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಯುವತಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿಯೂ ಸಹ ತನ್ನದೇ … Continued

ಹೆದ್ದಾರಿಯಲ್ಲಿ ಸಿಸಿಟಿವಿ ಇಟ್ಟು ಸೇನೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ವ್ಯಕ್ತಿಯ ಬಂಧನ

ನವದೆಹಲಿ: ಪಂಜಾಬ್‌ನ ಪಠಾಣ್‌ಕೋಟ್‌ನಲ್ಲಿ ಸಕ್ರಿಯವಾಗಿದ್ದ ಶಂಕಿತ ಬೇಹುಗಾರಿಕಾ ( espionage) ಜಾಲವನ್ನು ಭೇದಿಸುವಲ್ಲಿ ಪಂಜಾಬ್ ಪೊಲೀಸರು ಯಶಸ್ವಿಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಗಳ ಚಲನವಲನದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳಿಗೆ (ನಿರ್ವಹಣಾಕಾರರು) ರವಾನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಚಕ್ ಧರಿವಾಲ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂದು ಗುರುತಿಸಲಾಗಿದೆ. ಈತ ಸೇನೆ … Continued

ವಿಶ್ವದ ಸ್ಮಾರ್ಟ್ ನಗರಗಳನ್ನೂ ಮೀರಿಸುವ ತಂತ್ರಜ್ಞಾನ ಹೊಂದಿರುವ ಭಾರತದ ಗ್ರಾಮಗಳು…!

ಸಾಮಾನ್ಯವಾಗಿ ‘ಹಳ್ಳಿ’ ಎಂದರೆ ನಮಗೆ ನೆನಪಾಗುವುದು ನಿಧಾನಗತಿಯ ಜೀವನ ಮತ್ತು ಆಧುನಿಕ ಸಂಪರ್ಕದ ಕೊರತೆ. ಅದೇ ರೀತಿ ‘ಸ್ಮಾರ್ಟ್ ಸಿಟಿ’ ಎಂದರೆ ಡಿಜಿಟಲ್ ತಂತ್ರಜ್ಞಾನದಿಂದ ಸಜ್ಜಾದ ಭವಿಷ್ಯದ ಕೇಂದ್ರಗಳು ಎಂಬ ಭಾವನೆ ನಮ್ಮಲ್ಲಿದೆ. ಆದರೆ, ಭಾರತದ ಕೆಲವು ಹಳ್ಳಿಗಳು ಈ ಕಲ್ಪನೆಯನ್ನು ಸಂಪೂರ್ಣವಾಗಿ ಸುಳ್ಳು ಮಾಡಿವೆ. ಜಾಗತಿಕ ಮಟ್ಟದ ಸ್ಮಾರ್ಟ್ ನಗರಗಳಿಗಿಂತಲೂ ಹೆಚ್ಚು ಪ್ರಾಯೋಗಿಕವಾಗಿ ಈ … Continued

ಭಾರತದ ಮೇಲೆ ದಾಳಿಗೆ ಸಂಚು: ದೆಹಲಿ ಪೊಲೀಸರಿಂದ ಐಎಸ್‌ಐ-ಬಬ್ಬರ್ ಖಾಲ್ಸಾ ಉಗ್ರ ಜಾಲ ಪತ್ತೆ, 11 ಶಂಕಿತರ ಬಂಧನ

ನವದೆಹಲಿ: ಭಾರತದ ಭದ್ರತಾ ಸಂಸ್ಥೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಮತ್ತು ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (BKI) ಪ್ರೇರಿತ ಭಯೋತ್ಪಾದನಾ ಜಾಲವನ್ನು ದೆಹಲಿ ಪೊಲೀಸರ ವಿಶೇಷ ಘಟಕ (Special Cell) ಭೇದಿಸಿದೆ. ಪಂಜಾಬ್ ಮತ್ತು ದೆಹಲಿಯ ವಿವಿಧೆಡೆ ದಾಳಿ ನಡೆಸಿ 11 ಶಂಕಿತರನ್ನು ಬಂಧಿಸಲಾಗಿದೆ. ರಕ್ಷಣಾ ನೆಲೆಗಳ … Continued

ಬೆಂಗಳೂರು | ಹಾಡಹಗಲೇ ಯುವಕನನ್ನು ಅಡ್ಡಗಟ್ಟಿ 31 ಲಕ್ಷ ರೂ. ದರೋಡೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಾಡಹಾಗಲೇ ಸಿನಿಮೀಯ ರೀತಿಯಲ್ಲಿ ವ್ಯಕ್ತಿಯೊಬ್ಬರಿಂದ 31 ಲಕ್ಷ ರುಪಾಯಿಗೂ ಹೆಚ್ಚು ಹಣವನ್ನು ದೋಚಲಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ಪ್ರದೇಶದಲ್ಲಿ ಭಾನುವಾರ (ಫೆಬ್ರವರಿ 1) ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗ್ಯಾಂಗ್, ಬರೋಬ್ಬರಿ … Continued

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಇಬ್ಬರು ವ್ಯಕ್ತಿಗಳು-ಹಸುಗಳನ್ನು ಬೆನ್ನಟ್ಟಿದ ಕಾಡು ಕರಡಿ ; ಸಿಸಿಟಿವಿ ದೃಶ್ಯಗಳು ವೈರಲ್

ರಿಷಿಕೇಶದ ಜನನಿಬಿಡ ಪ್ರದೇಶವಾದ ಶ್ಯಾಮಪುರದಲ್ಲಿ ಕಾಡು ಕರಡಿಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಭಯವನ್ನುಂಟು ಮಾಡಿದೆ. ಶ್ಯಾಮಪುರ ಹಾತ್ ಸಮೀಪ ಮನೆಗೆ ಮರಳುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕರಡಿ ಬೆನ್ನಟ್ಟುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರಣ್ಯ ಪ್ರದೇಶಗಳು ನಾಶವಾಗುತ್ತಿರುವುದರಿಂದ ವನ್ಯಜೀವಿಗಳು ನಗರ ಪ್ರದೇಶಗಳಿಗೆ ಲಗ್ಗೆ ಇಡುತ್ತಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ರಸ್ತೆಯಲ್ಲಿದ್ದ … Continued

ದೆಹಲಿ ಸ್ಫೋಟ | ಹೊರಬಿದ್ದ ಇನ್ನೊಂದು ವೀಡಿಯೊ ; ಆತ್ಮಹತ್ಯಾ ಬಾಂಬರ್‌ ಉಮರ್ ನಬಿ ಸ್ಫೋಟಕ ತುಂಬಿದ ಕಾರು ಚಲಾಯಿಸಿದ ದೃಶ್ಯ ಸೆರೆ

 ನವದೆಹಲಿ: ಕಳೆದ ನವೆಂಬರ್ 10 ರಂದು ಕೆಂಪು ಕೋಟೆ (Red Fort) ಬಳಿ ನಡೆದ ಭೀಕರ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಕೆಂಪು ಕೋಟೆ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಡಾ. ಉಮರ್ ನವೆಂಬರ್ 10 ರ ಬೆಳಿಗ್ಗೆ i20 ಕಾರಿನಲ್ಲಿ ಬದರ್ಪುರ ಗಡಿ ಟೋಲ್ ಮೂಲಕ ದೆಹಲಿಗೆ ಪ್ರವೇಶಿಸುತ್ತಿರುವುದನ್ನು ತೋರಿಸುವ ಹೊಸ … Continued