ಪ್ಲೇಸ್ಕೂಲ್‌ನಲ್ಲಿ 3 ವರ್ಷದ ಮಗುವನ್ನು ಕುರ್ಚಿಗೆ ಕಟ್ಟಿ ಕಪಾಳಮೋಕ್ಷ, ಥಳಿತ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ದೆಹಲಿಯ ಈಶಾನ್ಯ ಭಾಗದ ಮೌಜ್‌ಪುರ ಪ್ರದೇಶದಲ್ಲಿರುವ ಖಾಸಗಿ ಪ್ಲೇಸ್ಕೂಲ್‌ನಲ್ಲಿ ಮೂರು ವರ್ಷದ ಮಗುವಿನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೆಹಲಿ ಪೊಲೀಸರು ಪೋಕ್ಸೊ (POCSO) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಕುರಿತು ಹೊರಬಂದಿರುವ ಆಘಾತಕಾರಿ ಸಿಸಿಟಿವಿ ದೃಶ್ಯಗಳಲ್ಲಿ, ಪುಟ್ಟ ಮಗು ಕುಳಿತಿದ್ದ ಹಳದಿ ಬಣ್ಣದ ಸಣ್ಣ ಪ್ಲಾಸ್ಟಿಕ್ ಕುರ್ಚಿಯನ್ನು … Continued

ಆಸ್ಪತ್ರೆಯಿಂದ ₹4 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ : ಸಿಸಿಟಿವಿಯಲ್ಲಿ ಬಯಲಾಯ್ತು ‘ನಾಲ್ಕು ಕಾಲಿನ ಕಳ್ಳ’ನ ಕರಾಮತ್ತು !

ಮಂದಸೌರ್ : ಸರ್ಕಾರಿ ಆಸ್ಪತ್ರೆಯಿಂದ ಸುಮಾರು ₹4 ಲಕ್ಷ ಮೌಲ್ಯದ ಚಿನ್ನಾಭರಣಗಳು ನಾಪತ್ತೆಯಾದ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ತಾವು ಹುಡುಕುತ್ತಿದ್ದ “ಕಳ್ಳ” ಮನುಷ್ಯನಲ್ಲ, ಬದಲಿಗೆ ಅಲೆಮಾರಿ ನಾಯಿಯೆಂಬುದು ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ವೇಳೆ ಪತ್ತೆಯಾಗಿದ್ದು, ಕ್ಷಣಕಾಲ ಪೊಲೀಸರೇ ದಂಗಾಗಿದ್ದಾರೆ. ಈ ವಿಚಿತ್ರ ಘಟನೆ ಮಧ್ಯಪ್ರದೇಶದ ಮಂದಸೌರ್ ಜಿಲ್ಲಾ ಆಸ್ಪತ್ರೆಯಲ್ಲಿ … Continued

ವಿಡಿಯೋ | ಥಾರ್‌ಗೆ ಹಗ್ಗಕಟ್ಟಿ ಎಟಿಎಂ ಎಳೆದೊಯ್ದು ಹಣ ದೋಚಿ ರಸ್ತೆಯಲ್ಲೇ ಯಂತ್ರ ಎಸೆದು ಕಳ್ಳರು ಪರಾರಿ

ಬಾಲಾಸೋರ್ : ಒಡಿಶಾದ ಬಾಲಾಸೋರ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಮುಂಜಾನೆ ಎಟಿಎಂ ದರೋಡೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ದುಷ್ಕರ್ಮಿಗಳ ತಂಡ ಎಟಿಎಂ ಯಂತ್ರವನ್ನು ಕಪ್ಪು ಬಣ್ಣದ ಥಾರ್ (Thar) ವಾಹನಕ್ಕೆ ಹಗ್ಗ ಕಟ್ಟಿ ಎಳೆದಿದ್ದಾರೆ. ಅದು ಕಿತ್ತುಬಂದ ನಂತರ ಅದರೊಳಗಿನ ಹಣವನ್ನು ದೋಚಿ ಪರಾರಿಯಾಗಿದೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, … Continued

ವಿಡಿಯೋ | ಕರ್ತವ್ಯದಲ್ಲಿದ್ದ ಮಹಿಳಾ ವೈದ್ಯೆ-ಸಿಬ್ಬಂದಿ ಮೇಲೆ ಕಾರ್ಪೊರೇಟರ್ ಹಲ್ಲೆ

ಮುಂಬೈ: ಮುಂಬೈ ಸಮೀಪದ ಥಾಣೆ ಜಿಲ್ಲೆಯ ಡೊಂಬಿವ್ಲಿಯ ಕೆಡಿಎಂಸಿ (KDMC) ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಸ್ಥಳೀಯ ರಾಜಕೀಯ ನಾಯಕ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. … Continued

ಉರಿ ಬಿಸಿಲಿನಲ್ಲಿ ʼತಲೆಗವಸುʼ..: ಸಿಸಿಟಿವಿ ಸುಳಿವಿನ ಮೇಲೆ ಪೊಲೀಸರು ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣ ಭೇದಿಸಿದ್ದು ಹೇಗೆ ?

ಪುಣೆ: ರಿಯಲ್ ಎಸ್ಟೇಟ್ ಸಂಸ್ಥೆಯ ನಿರ್ದೇಶಕರಾಗಿದ್ದ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ ಅಗರ್ವಾಲ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು, ಇದು ಆಕಸ್ಮಿಕ ಸಾವಲ್ಲ, ಇದು ಭೀಕರ ಕೊಲೆ ಎಂಬುದು ಬೆಳಕಿಗೆ ಬಂದಿದೆ. ನವೆಂಬರ್‌ನಲ್ಲಿ ಅದ್ದೂರಿಯಾಗಿ ಮದುವೆಯಾಗಬೇಕಾಗಿದ್ದ ಭಾವಿ ಪತ್ನಿಯೇ ತನ್ನ ಪ್ರೇಮಿಯೊಂದಿಗೆ ಸೇರಿ ಕೇತನ್‌ ಅವರನ್ನು ಲೋಹಗಢ ಕೋಟೆಯಿಂದ … Continued

ಕಚೇರಿಯಲ್ಲೇ ಸಹೋದ್ಯೋಗಿ ಯುವತಿಗೆ 20 ಬಾರಿ ಚಾಕುವಿನಿಂದ ಇರಿದು ಕೊಲೆ ; ನಂತರ ತನ್ನ ಗಂಟಲನ್ನೇ ಸೀಳಿಕೊಂಡ ಪಾಗಲ್‌ ಪ್ರೇಮಿ !

ನವದೆಹಲಿ: ಪಂಜಾಬ್‌ನ ಮೊಹಾಲಿಯಲ್ಲಿ ಅತ್ಯಂತ ಭೀಕರ ಮತ್ತು ನಡುಕ ತರಿಸುವ ಘಟನೆಯೊಂದು ನಡೆದಿದೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಆಕೆಯ ಮಾಜಿ ಪ್ರಿಯಕರ ಎಂದು ನಂಬಲಾದ ಸಹೋದ್ಯೋಗಿ ಕಚೇರಿಯ ಒಳಗಡೆಯೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಯುವತಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿಯೂ ಸಹ ತನ್ನದೇ … Continued

ಹೆದ್ದಾರಿಯಲ್ಲಿ ಸಿಸಿಟಿವಿ ಇಟ್ಟು ಸೇನೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ವ್ಯಕ್ತಿಯ ಬಂಧನ

ನವದೆಹಲಿ: ಪಂಜಾಬ್‌ನ ಪಠಾಣ್‌ಕೋಟ್‌ನಲ್ಲಿ ಸಕ್ರಿಯವಾಗಿದ್ದ ಶಂಕಿತ ಬೇಹುಗಾರಿಕಾ ( espionage) ಜಾಲವನ್ನು ಭೇದಿಸುವಲ್ಲಿ ಪಂಜಾಬ್ ಪೊಲೀಸರು ಯಶಸ್ವಿಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಗಳ ಚಲನವಲನದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳಿಗೆ (ನಿರ್ವಹಣಾಕಾರರು) ರವಾನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಚಕ್ ಧರಿವಾಲ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂದು ಗುರುತಿಸಲಾಗಿದೆ. ಈತ ಸೇನೆ … Continued

ವಿಶ್ವದ ಸ್ಮಾರ್ಟ್ ನಗರಗಳನ್ನೂ ಮೀರಿಸುವ ತಂತ್ರಜ್ಞಾನ ಹೊಂದಿರುವ ಭಾರತದ ಗ್ರಾಮಗಳು…!

ಸಾಮಾನ್ಯವಾಗಿ ‘ಹಳ್ಳಿ’ ಎಂದರೆ ನಮಗೆ ನೆನಪಾಗುವುದು ನಿಧಾನಗತಿಯ ಜೀವನ ಮತ್ತು ಆಧುನಿಕ ಸಂಪರ್ಕದ ಕೊರತೆ. ಅದೇ ರೀತಿ ‘ಸ್ಮಾರ್ಟ್ ಸಿಟಿ’ ಎಂದರೆ ಡಿಜಿಟಲ್ ತಂತ್ರಜ್ಞಾನದಿಂದ ಸಜ್ಜಾದ ಭವಿಷ್ಯದ ಕೇಂದ್ರಗಳು ಎಂಬ ಭಾವನೆ ನಮ್ಮಲ್ಲಿದೆ. ಆದರೆ, ಭಾರತದ ಕೆಲವು ಹಳ್ಳಿಗಳು ಈ ಕಲ್ಪನೆಯನ್ನು ಸಂಪೂರ್ಣವಾಗಿ ಸುಳ್ಳು ಮಾಡಿವೆ. ಜಾಗತಿಕ ಮಟ್ಟದ ಸ್ಮಾರ್ಟ್ ನಗರಗಳಿಗಿಂತಲೂ ಹೆಚ್ಚು ಪ್ರಾಯೋಗಿಕವಾಗಿ ಈ … Continued

ಭಾರತದ ಮೇಲೆ ದಾಳಿಗೆ ಸಂಚು: ದೆಹಲಿ ಪೊಲೀಸರಿಂದ ಐಎಸ್‌ಐ-ಬಬ್ಬರ್ ಖಾಲ್ಸಾ ಉಗ್ರ ಜಾಲ ಪತ್ತೆ, 11 ಶಂಕಿತರ ಬಂಧನ

ನವದೆಹಲಿ: ಭಾರತದ ಭದ್ರತಾ ಸಂಸ್ಥೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಮತ್ತು ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (BKI) ಪ್ರೇರಿತ ಭಯೋತ್ಪಾದನಾ ಜಾಲವನ್ನು ದೆಹಲಿ ಪೊಲೀಸರ ವಿಶೇಷ ಘಟಕ (Special Cell) ಭೇದಿಸಿದೆ. ಪಂಜಾಬ್ ಮತ್ತು ದೆಹಲಿಯ ವಿವಿಧೆಡೆ ದಾಳಿ ನಡೆಸಿ 11 ಶಂಕಿತರನ್ನು ಬಂಧಿಸಲಾಗಿದೆ. ರಕ್ಷಣಾ ನೆಲೆಗಳ … Continued

ಬೆಂಗಳೂರು | ಹಾಡಹಗಲೇ ಯುವಕನನ್ನು ಅಡ್ಡಗಟ್ಟಿ 31 ಲಕ್ಷ ರೂ. ದರೋಡೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಾಡಹಾಗಲೇ ಸಿನಿಮೀಯ ರೀತಿಯಲ್ಲಿ ವ್ಯಕ್ತಿಯೊಬ್ಬರಿಂದ 31 ಲಕ್ಷ ರುಪಾಯಿಗೂ ಹೆಚ್ಚು ಹಣವನ್ನು ದೋಚಲಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ಪ್ರದೇಶದಲ್ಲಿ ಭಾನುವಾರ (ಫೆಬ್ರವರಿ 1) ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗ್ಯಾಂಗ್, ಬರೋಬ್ಬರಿ … Continued