ಡಿಕೆಶಿ ಕರ್ನಾಟಕ ಪ್ರದೇಶ ಸಿಡಿ ಕಮೀಟಿ ಅಧ್ಯಕ್ಷ ಎಂದು ಲಖನ್ ಜಾರಕಿಹೊಳಿ ವ್ಯಂಗ್ಯ

ಗೋಕಾಕ: ಸಿಡಿ ಕಾರ್ಖಾನೆ ಬೆಳಗಾವಿಯಲ್ಲಿಯೇ ಇದೆ. ಬೆಳಗಾವಿಯಿಂದ ತಯಾರಾಗಿ ಕನಕಪುರ ಮತ್ತು ಬೆಂಗಳೂರಿನಲ್ಲಿ ರಿಲೀಸ್ ಆಗುತ್ತದೆ. 2000ನೇ ಇಸ್ವಿಯಿಂದ ಸಿಡಿ ಕಾರ್ಖಾನೆ ಚಾಲ್ತಿಯಲ್ಲಿದ್ದು, ಸಿಬಿಐ ತನಿಖೆ ನಡೆದರೆ ಎಲ್ಲವೂ ಹೊರಬರಲಿದೆ. ಕೆಪಿಸಿಸಿ ಅಧ್ಯಕ್ಷ ಅಂದರೆ ಕರ್ನಾಟಕ ಪ್ರದೇಶ ಸಿಡಿ ಕಂಪನಿ ಅಧ್ಯಕ್ಷ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ … Continued

ಜಾರಕಿಹೊಳಿ ಸಿಡಿ. ಪ್ರಕರಣ: ಎಸ್‌ಐಟಿ ರಚನೆ ಪ್ರಶ್ನಿಸಿ ಸಂತ್ರಸ್ತೆಯಿಂದ ಸುಪ್ರೀಂಕೋರ್ಟಿಗೆ ಅರ್ಜಿ

ನವದೆಹಲಿ : ಸಿ.ಡಿ. ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಕ್ಲೀನ್‌ ಚಿಟ್‌ ನೀಡಿದ್ದ ವಿಶೇಷ ತನಿಖಾ ತಂಡದ (ಎಸ್‌ಐಟಿ) ರಚನೆಯನ್ನು ಪ್ರಶ್ನಿಸಿ ಅತ್ಯಾಚಾರ ಆರೋಪ ಮಾಡಿದ್ದ ಯುವತಿ ಈಗ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಮೇಲ್ಮನವಿಯ ವಿಚಾರಣೆಯು ಫೆಬ್ರುವರಿ 14ರಂದು ವಿಚಾರಣೆಗೆ ಬರಲಿದೆ. ‘ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ’ ಎಂದು ತಿಳಿಸಿದ್ದ ಎಸ್‌ಐಟಿಯು … Continued

ಸಿಡಿ ಪ್ರಕರಣ: ಸಿಬಿಐ ತನಿಖೆ ಅಗತ್ಯವಿಲ್ಲ ಎಂದ ಹೈಕೋರ್ಟ್‌

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ತನಿಖೆ ಸದ್ಯಕ್ಕೆ ನಡೆಸುತ್ತಿದ್ದು, ಸಿಬಿಐ ತನಿಖೆಗೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶನಿವಾರ ಅಭಿಪ್ರಾಯಪಟ್ಟಿದೆ. ತನಿಖೆಗೆ ಎಸ್‌ಐಟಿ ರಚಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶ ರದ್ದತಿ ಕೋರಿ ಸಲ್ಲಿಸಿಕೆಯಾದ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಅನ್ನು ಮುಖ್ಯ … Continued

ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಮಾಜಿ ಸಚಿವ ಡಿ. ಸುಧಾಕರ

ಚಿತ್ರದುರ್ಗ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ಹಗರಣದಲ್ಲಿ ನನ್ನ ಹೆಸರು ತಳಕು ಹಾಕಿಕೊಂಡಿದ್ದು, ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಮಾಜಿ ಸಚಿವ ಡಿ.ಸುಧಾಕರ ಹೇಳಿದ್ದಾರೆ. ಸಿಡಿ ಪ್ರಕರಣದಲ್ಲಿರುವ ಮಹಿಳೆಗೆ ಹಣ ವರ್ಗಾವಣೆ ಮಾಡಿದ್ದೇನೆ ಎಂಬ ಅರೋಪ ಸತ್ಯಕ್ಕೆ ದೂರವಾಗಿದೆ. ನಾನು ಯಾರಿಗೂ ಹಣ ನೀಡಿಲ್ಲ. ಎಸ್‌ಐಟಿ ತನಿಖೆಗೆ ಕರೆದರೆ ಸಹಕರಿಸುತ್ತೇನೆ ಎಂದರು. … Continued

ತನಿಖೆ ಹೆಸರಲ್ಲಿ ಎಸ್‌ಐಟಿಯಿಂದ ಸಾಕ್ಷ್ಯ ನಾಶ: ಸಿಡಿ ಯುವತಿಯಿಂದ ಪೊಲೀಸ್‌ ಆಯುಕ್ತರಿಗೆ ಪತ್ರ

ಬೆಂಗಳೂರು;ರಮೇಶ್ ಜಾರಕಿಹೊಳಿ ನೀಡಿದ ದೂರಿನಲ್ಲಿ ನನ್ನ ಹೆಸರಿಲ್ಲ. ಎಸ್‌ಐಟಿ ಪಿಜಿಯಲ್ಲಿ ಪರಿಶೀಲನೆ ಮಾಡಿ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಆರೋಪಿಸಿ ಸಿಡಿ ಪ್ರಕರಣದ ಯುವತಿ ಬೆಂಗಳೂರು ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಆರೋಪಿತರು ಮುಕ್ತವಾಗಿ ಓಡಾಡಲು ಎಸ್‌ಐಟಿ ಅವಕಾಶ ನೀಡಿದ್ದು, ನನಗೆ ಒಂದು ದಿನವೂ ಬಿಡದೆ ವಿಚಾರಣೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು … Continued

ಸಿಡಿ ಪ್ರಕರಣ; ಆರೋಪಿ ತಲೆಮರೆಸಿಕೊಳ್ಳಲು ಸರ್ಕಾರವೇ ಸಹಕರಿಸುತ್ತಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಆರೋಪಿ ತಲೆ ಮರೆಸಿಕೊಳ್ಳಲು ಸಹಕರಿಸುದು ಕಾನೂನಿನ ಪ್ರಕಾರ ಅಪರಾಧ. ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ತಲೆಮರೆಸಿಕೊಂಡು ಅಜ್ಞಾತವಾಸದಲ್ಲಿದ್ದಾರೆ. ಅವರಿಗೆ ಸರ್ಕಾರವೇ ಸಹಕರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ತೀವ್ರ ವಾಗ್ದಾಳಿ ನಡೆಸಿದೆ. ಆರೋಪಿ ಬಂಧಿಸುವುದನ್ನು ಬಿಟ್ಟು ರಕ್ಷಣೆ ನೀಡುತ್ತಿರುವುದು ಕಾನೂನಿನ ಪ್ರಕಾರ ಅಪರಾಧ. ಕಾನೂನು ಉಲ್ಲಂಘಿಸಿದ ಸರ್ಕಾರಕ್ಕೆ ಏನು ಶಿಕ್ಷೆ ನೀಡಬೇಕು ಎಂದು … Continued

ಸಿಡಿ ಯುವತಿ ಉಳಿದುಕೊಂಡಿದ್ದ ಪಿಜಿ ಸ್ಥಳ ಮಹಜರು

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತ ಯುವತಿಯನ್ನು ತನಿಖಾಧಿಕಾರಿ ಮತ್ತು ಅವರ ತಂಡ ಆರ್‌.ಟಿ.ನಗರಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ದೂರು ನೀಡಿರುವ ಯುವತಿ ಆರ್‍ಟಿನಗರದ ಪಿಜಿಯಲ್ಲಿ ವಾಸ್ತವ್ಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ತನಿಖಾಧಿಕಾರಿಗಳು ಅವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದರು. ಯುವತಿ ದೂರಿನಲ್ಲಿ … Continued

ಬಿಜೆಪಿ ಸರಕಾರ ರಚನೆಗೆ ಕಾರಣರಾದ ನಾವೆಲ್ಲ ರಮೇಶ ಜಾರಕಿಹೊಳಿ ಬೆನ್ನಿಗೆ ನಿಲ್ಲುತ್ತೇವೆ: ಸಚಿವ ಗೋಪಾಲಯ್ಯ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಾವೆಲ್ಲರೂ ಒಗ್ಗಟ್ಟಾಗಿದ್ದು, ರಮೇಶ್ ಜಾರಕಿಹೊಳಿ ಅವರ ಬೆನ್ನಿಗೆ ನಿಲ್ಲುತ್ತೇವೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಮಾತನಾಡಿದ ಅವರು, ಸದ್ಯ ಎಸ್ ಐಟಿ ತನಿಖೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದೆ. ನಮ್ಮಲ್ಲಿ ಯಾವುದೇ ಒಡಕ್ಕಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದು, ರಮೇಶ್ … Continued

ಅನವಶ್ಯಕ ಹೇಳಿಕೆಯಿಂದ ತನಿಖೆಯ ಗಂಭೀರತೆ ಹಾಳು ಮಾಡಬೇಡಿ: ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಗೃಹ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ, ಅನವಶ್ಯಕವಾಗಿ ಮಾತನಾಡಿ ಪ್ರಕರಣದ ತನಿಖೆಯ ಗಾಂಭೀರ್ಯತೆ ಹಾಳು ಮಾಡಬೇಡಿ ಎಂದು ಹೇಳಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಎಸ್ಐಟಿ ತನಿಖೆ … Continued

ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ಸಿಡಿ ಪ್ರಕರಣದ ಯುವತಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಸಿಡಿ ಪ್ರಕರಣಕ್ಕೆ ಸಂಬಂಸಿದಂತೆ ಸ್ವ ಇಚ್ಛಾ ಹೇಳಿಕೆ ನೀಡಲು ಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿ ಮಂಗಳವಾರ (ಮಾ.೩೦) ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಕಳೆದ ೨೮ ದಿನಗಳ ಹೈಡ್ರಾಮಾದ ನಂತರ ಸಂತ್ರಸ್ತ ಯುವತಿ ವಸಂತ ನಗರದಲ್ಲಿರುವ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ … Continued