ಧಾರಾವಾಹಿ ರೂಪದಲ್ಲಿ ಬಿಡುಗಡೆ ಆಗುತ್ತಿರುವ ಆಡಿಯೋ- ವಿಡಿಯೋಗಳ ಬಗ್ಗೆ ವೈಜ್ಞಾನಿಕ ತನಿಖೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆಡಿಯೋ ಮತ್ತು ವಿಡಿಯೋಗಳು ಸರಣಿ ಧಾರಾವಾಹಿ ತರಹ ಬರುತ್ತಿವೆ. ಸಿಡಿ, ಆಡಿಯೋ ಮತ್ತು ವಿಡಿಯೋ ಬಗ್ಗೆ  ವೈಜ್ಞಾನಿಕವಾಗಿ ತನಿಖೆ ನಡೆಯಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಸ್‌ಐಟಿ ತನಿಖೆಯ ದಾರಿ ತಪ್ಪಿಸಲು ಯಾರಿಂದಲೂ … Continued

ಸಿಡಿ ಹಗರಣಕ್ಕೆ ಮತ್ತೆ ಟ್ವಿಸ್ಟ್: ಯುವತಿಯಿಂದ ಮತ್ತೊಂದು ವಿಡಿಯೋ ಬಿಡುಗಡೆ..

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ನಮ್ಮ ಆಟ ಶುರು, ಇಂದು (ಶನಿವಾರ) ಸಂಜೆ ೪ರಿಂದ ೬ ಗಂಟೆಯೊಳಗೆ ಹೊಸ ಬಾಂಬ್‌ ಹಾಕುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೇ ಈಗ ಸಿಡಿ ಯುವತಿಯದ್ದು ಎನ್ನಲಾದ ಮತ್ತೊಂದು ವಿಡಿಯೋ ಬೆಳಿಗ್ಗೆ ಬಿಡುಗಡೆಯಾಗಿದೆ. ದಿನಕ್ಕೊಂದು ತಿರುವುದು ಪಡೆದುಕೊಳ್ಳುತ್ತಿರುವ ಈ ಸಿಡಿ ಪ್ರಕರಣ ಈಗ ನಾಲ್ಕನೇ … Continued

ಸಿಡಿ ಪ್ರಕರಣ:ನಾಳೆ ಸಂಜೆ 4ರಿಂದ6 ಗಂಟೆಯೊಳಗೆ ಹೊಸ ಬಾಂಬ್‌ ಸ್ಫೋಟ ಮಾಡ್ತೇನೆ

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ವಿರುದ್ಧ ಸಿಡಿ ಸಂತ್ರಸ್ತ ಯುವತಿ ವಕೀಲರ ಮೂಲಕ ಶುಕ್ರವಾರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ, ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ ಅವರು, ನಾಳೆ ಇದಕ್ಕಿಂತ ದೊಡ್ಡ ಬಾಂಬ್ ಸ್ಫೋಟವಾಗಲಿದೆ. ನಾಳೆಯವರೆಗೆ ಕಾಯಿರಿ, ಇದು ಬರೀ ಟ್ರಯಲ್. ನಾಳೆ ಸಂಜೆ 4ರಿಂದ 6 ಗಂಟೆಯೊಳಗೆ ಬಾಂಬ್ ಸ್ಫೋಟವಾಗುತ್ತದೆ. ದೊಡ್ಡ … Continued

ಆಡಿಯೋದಲ್ಲಿ ಡಿಕೆಶಿ ಹೆಸರು ಪ್ರಸ್ತಾಪ: ಕಾಂಗ್ರೆಸ್‌ ಕಚೇರಿಯಲ್ಲಿ ಷಡ್ಯಂತ್ರ ನಡೆದಿದೆಯೇ ಎಂದು ಬಿಜೆಪಿ ಪ್ರಶ್ನೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಯುವತಿಯದ್ದು ಎನ್ನಲಾದ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪವಾಗಿದೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ ಟ್ವೀಟ್‌ ಮಾಡಿದ್ದು, ಈ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿಯೇ ಎಂದು ಪ್ರಶ್ನಿಸಿದೆ. … Continued

ಅಂತಹ ಸರ್ಕಾರವನ್ನೇ ಉರುಳಿಸಿದ್ದೇನೆ.. ಇದ್ಯಾವ ಲೆಕ್ಕ..

ಬೆಂಗಳೂರು: ಅಂತಹ ಸರ್ಕಾರವನ್ನೇ(ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ) ಉರುಳಿಸಿದ್ದೇನೆ. ಇದ್ಯಾವ ಲೆಕ್ಕ..?. ಇನ್ನೂ ಇಂತಹ 10 ಸಿಡಿಗಳು ಬಂದರೂ ಅದನ್ನು ಎದುರಿಸಲು ಸಿದ್ಧವಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಯುವತಿ ಪೊಲೀಸರಿಗೆ ದೂರು ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೊಮ್ಮೆ ಸಿಡಿ ಯುವತಿ ತಾನು ಸಂತ್ರಸ್ತೆ ಎನ್ನುವುದೇ ಆಗಿದ್ದರೆ ಆಕೆ … Continued

ಯಾರೇ ದೂರು ಸಲ್ಲಿಸಿದರೂ ಎಸ್‌ಐಟಿಯಿಂದ ಪರಿಶೀಲನೆ

ಬೆಂಗಳೂರು; ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಸಿಡಿ ಪ್ರಕರಣದ ಕುರಿತು ಯಾರೇ ದೂರು ಸಲ್ಲಿಸಿದರೂ ಅದನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಕಾನೂನಾತ್ಮಕವಾಗಿ ಪರಿಶೀಲನೆ ನಡೆಸಿ ಕ್ರಮ‌ಕೈಗೊಳ್ಳುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಡಿಯಲ್ಲಿನ ಯುವತಿಯೇ ಆಗಲಿ, … Continued

ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಿಡಿ ಯುವತಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆಯಾಗಿದ್ದು, ಸಂತ್ರಸ್ತ ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಶುಕ್ರವಾರ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಶುಕ್ರವಾರ (ಮಾ.೨೬) ಮಧ್ಯಾಹ್ನ ಯುವತಿ ಪರವಾಗಿ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರು … Continued

ಸಿಡಿ ಮಹಿಳೆ ಸಿದ್ದರಾಮಯ್ಯ- ಡಿಕೆಶಿ ಬಳಿ ರಕ್ಷಣೆ ಕೋರಿರುವ ಮಾಹಿತಿ ಇಲ್ಲ: ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಮಹಿಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬಳಿ ರಕ್ಷಣೆ ಕೋರಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಆ ಬಗ್ಗೆ ಅವರಿಂದಲೇ ಮಾಹಿತಿ ಪಡೆಯಿರಿ ಎಂದು ಗೃಹ ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. . … Continued

ಆ ಹೆಣ್ಣು ಮಗಳು ಯಾರದ್ದೋ ಕುತಂತ್ರಕ್ಕೆ ಸಿಲುಕಿದ್ದಾಳೆ: ಎಚ್‌ಡಿಕೆ

ಬಸವ ಕಲ್ಯಾಣ: ಯುವತಿ ಯಾರದ್ದೋ ಕುತಂತ್ರಕ್ಕೆ ಸಿಲುಕಿ ಬಲವಂತವಾಗಿ ವಿಡಿಯೋ ಬಿಡುಗಡೆ ಮಾಡುತ್ತಿದ್ದಾಳೆ. ನೀವು ಯಾರದೋ ಬಲವಂತಕ್ಕೆ ಒಳಗಾಗಿ ಗುಪ್ತವಾಗಿ ವಿಡಿಯೋ ಮಾಡಿ ಹೇಳಿಕೆಗಳನ್ನು ಬಿಡುಗಡೆ ಮಾಡುವುದನ್ನು ಬಿಟ್ಟು ಹೊರ ಬನ್ನಿ ಎಂದು ನಾನು ಆ ಹೆಣ್ಣು ಮಗಳಿಗೆ ಮನವಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಸವ ಕಲ್ಯಾಣದಲ್ಲಿ ಸಿಡಿ … Continued

ಇಂಥ ಹತ್ತು ಸಿಡಿ ಬಿಡುಗಡೆ ಮಾಡಿದರೂ ಎದುರಿಸಲು ಸಿದ್ಧ:ರಮೇಶ ಜಾರಕಿಹೊಳಿ

ಬೆಂಗಳೂರು: ಒಂದಲ್ಲ ಇನ್ನೂ ಇಂಥ ಹತ್ತು ಸಿಡಿ ಬಿಡುಗಡೆ ಮಾಡಿದರೂ ಎದುರಿಸಲು ಸಿದ್ಧ. ನಾನು ಯಾವುದೇ ತಪ್ಪು ಮಾಡಿಲ್ಲ. ಈ ಷಡ್ಯಂತ್ರದ ಆರೋಪದಿಂದ ಮುಕ್ತನಾಗಿ ಹೊರಗೆ ಬರುತ್ತೇನೆ ಎಂಬ ವಿಶ್ವಾಸವಿದೆ  ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಳಿಯೂ ಮಹತ್ವದ ಸಾಕ್ಷ್ಯಗಳಿವೆ. ಅದನ್ನು ಬಿಡುಗಡೆ ಮಾಡಿದರೆ ಎಲ್ಲರೂ ಶಾಕ್ … Continued