ಸಿಡಿ ಪ್ರಕರಣ: ಯುವತಿ ತಂದೆ-ತಾಯಿ ಹೇಳಿದ್ದೇನೆಂದರೆ….

ಬೆಳಗಾವಿ : ಮಾಜಿ ಸಚಿವರ ಮೇಲಿನ ಸಿಡಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಯುವತಿ ತಂದೆ-ತಾಯಿ ತಮ್ಮ ಹೇಳಿಕೆಯುಳ್ಳ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸಿಡಿಯಲ್ಲಿರುವಳು ನಾನಲ್ಲ ಎಂದು ಮಗಳು ಹೇಳಿದ್ದಾಳೆ ಎಂದು  ಅವರು ಹೇಳಿದ್ದಾರೆ. ನನ್ನಂತೆ ಕಾಣುವ ಹುಡುಗಿಯ ದೃಶ್ಯವನ್ನು ಎಡಿಟ್ ಮಾಡಿದ್ದಾರೆ. ಅದೊಂದು ನಕಲಿ ಸಿಡಿ , ಆ ಸಿಡಿಯಲ್ಲಿ ನನ್ನ ಪಾತ್ರ ಏನೂ … Continued

ಸಿಡಿ ಪ್ರಕರಣದಲ್ಲಿ ಬಿಗ್‌ ಟ್ವಿಸ್ಟ್‌: ಮಗಳು ಕಿಡ್ನ್ಯಾಪ್‌, ಹುಡುಕಿ ಕೊಡಿ ಎಂದು ತಂದೆಯಿಂದ ದೂರು ದಾಖಲು

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮತ್ತೊಂದು ತಿರುವು ಕಂಡಿದೆ. ಸಿಡಿ ಪ್ರಕರಣದಲ್ಲಿದ್ದಾಳೆ ಎನ್ನಲಾದ ಯುವತಿಯ ತಂದೆ ತನ್ನ ಮಗಳು ಕಿಡ್ನ್ಯಾಪ್‌ ಆಗಿದ್ದಾಳೆ ಎಂದು ಬೆಳಗಾವಿಯಲ್ಲಿ ದೂರು ದಾಖಲಿಸಿದ್ದಾರೆ. ಸಿಡಿ ದೃಶ್ಯದಲ್ಲಿದ್ದಾಳೆ ಎಂದು ಹೇಳಲಾದ ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ‘ಮಾರ್ಚ್ 2 ರಿಂದ ನನ್ನ ಪುತ್ರಿ … Continued

ಸಿಡಿ ಪ್ರಕರಣ: ಧ್ವನಿ ಬಗ್ಗೆ ಎಸ್‌ಐಟಿಗೆ ಅನುಮಾನ, ಎಫ್‌ಎಸ್‌ಎಲ್‌ಗೆ ಪರೀಕ್ಷೆಗೆ

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ವಿಶೇಷ ತನಿಖಾ ತಂಡವು ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ ಅನ್ನು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಿದೆ. ಸಿಡಿಯಲ್ಲಿದ್ದ 10 ನಿಮಿಷದ ವಿಡಿಯೋದಲ್ಲಿರುವುದು ಚಿಕ್ಕಮಗಳೂರಿನ ವ್ಯಕ್ತಿಯ ಧ್ವನಿ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಕಾರಣಕ್ಕೆ ವ್ಯಕ್ತಿ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಲಾಗಿದ್ದು, ಅದನ್ನು ಎಫ್ ಎಸ್‌ಎಲ್ ಗೆ ಕಳುಸಲಾಗಿದೆ. … Continued

ಸಿಡಿ ಪ್ರಕರಣ: ಯುವತಿ ಸಂಬಂಧಿಕರ ಮನೆಗೆ ನೊಟೀಸ್‌ ಅಂಟಿಸಿದ ಪೊಲೀಸರು

ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಸಂತ್ರಸ್ತೆಯ ಅಜ್ಜಿಮನೆ ವಿಜಯಪುರ  ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಇರುವುದನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದಾರೆ.  ಈ ಮನೆಗೆ ಬೆಂಗಳೂರು ಕಬ್ಬನ್‌ಪಾರ್ಕ್‌ ಪೊಲೀಸರು ನೊಟೀಸ್‌ ಅಂಟಿಸಿದ್ದಾರೆ. ಮನೆಗೆ ಬೀಗ ಹಾಕಿರುವುವದರಿಂದ ಮನೆಯ ಬಾಗಿಲಿಗೆ ನೊಟೀಸ್‌ ಅಂಟಿಸಲಾಗಿದೆ. ಠಾಣೆಯ ಇಬ್ಬರು ಅಧಿಕಾರಿಗಳು ನೊಟೀಸ್‌ ಅಂಟಿಸಿದ್ದು, ನೊಟೀಸ್‌ ಮುಟ್ಟಿದ … Continued

ಸಿಡಿ ಪ್ರಕರಣದ ಯುವತಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣದ ಬಗ್ಗೆ ರಮೇಶ್ ಜಾರಕಿಹೊಳಿ ಶನಿವಾರ (ಮಾ.೧೩) ದೂರು ದಾಖಲಿಸಿದ ಬೆನ್ನಲ್ಲೇ ಯುವತಿ ವಿಡಿಯೋ ಬಿಡುಗಡೆ ಮಾಡಿ ಹೇಳಿಕೆ ನೀಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ … Continued

ಸಿಡಿ ಪ್ರಕರಣ; ಪೊಲೀಸರಿಗೆ‌ ದೂರು ನೀಡಿದ ರಮೇಶ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಸದಾಶಿವ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಸದಾಶಿವ ನಗರದ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ಅವರ ಆಪ್ತರಾದ ನೆಲಮಂಗಲದ ಮಾಜಿ ಶಾಸಕ  ಎಂ.ವಿ ನಾಗರಾಜ್ ಅವರ ಮೂಲಕ ದೂರು ದಾಖಲಿಸಿದ್ದು  ಸ್ವತಃ ರಮೇಶ್ ಜಾರಕಿಹೊಳೆಯವರೇ ಲಿಖಿತ ರೂಪದಲ್ಲಿ ಈ ದೂರನ್ನು  … Continued

ಸಿಡಿಗೂ ನನಗೆ ಸಂಬಂಧವೇ ಇಲ್ಲ, ನಾನು ಪ್ರಕರಣ ಹಿಂಪಡೆದಿದ್ದೇನೆ: ಕಲ್ಲಹಳ್ಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ, ಸಚಿವ ಸ್ಥಾನದಿಂದ ಅವರು ಕೆಳಗಿಳಿಯಲು ಪ್ರಮುಖ ಕಾರಣರಾಗಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ತಮಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೂ ನನಗೂ … Continued

ರಮೇಶ ಜಾರಕಿಹೊಳಿ ಪ್ರಕರಣ: ಬುಕ್ ಆಫ್ ಲಾ ಪ್ರಕಾರ ತನಿಖೆ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಬುಕ್ ಆಫ್ ಲಾ ಪ್ರಕಾರ ತನಿಖೆ ನಡೆಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು … Continued

ಸಿಡಿಗಾಗಿ ೧೫ ಕೋಟಿ ರೂ.ಖರ್ಚು, ನಾಲ್ಕು ತಂಡಗಳಿಂದ ಕೆಲಸ: ಬಾಲಚಂದ್ರ ಜಾರಕಿಹೊಳಿ ಮತ್ತೊಂದು ಬಾಂಬ್‌..!

ಬೆಂಗಳೂರು:ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದ ಬೆನ್ನಲ್ಲೇ ಮಾಜಿ ಸಚಿವ ಹಾಗೂ ರಮೇಶ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಕೆಕೆ ಗೆಸ್ಟ್ ಹೌಸ್ ನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿಡಿ ನಂಟು ಬೆಳಗಾವಿಯಿಂದ ಬೆಂಗಳೂರಿನ ವರೆಗೂ ಇರುವ … Continued

ಸಿಡಿ ಪ್ರಕರಣಕ್ಕೆ ಅಚ್ಚರಿ ತಿರುವು: ದಿಢೀರ್ ದೂರು ಹಿಂಪಡೆದ ದಿನೇಶ್ ಕಲ್ಹಳ್ಳಿ..!!

ಬೆಂಗಳೂರು: ರಮೇಶ ಜಾರಕಿಹೊಳಿಗೆ ಸಂಬಂಧಿಸದ್ದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಈಗ ಮತ್ತೊಂದು ತಿರುವು ಪಡೆದಿದೆ. ಈ ಕುರಿತು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ದಿನೇಶ ಕಲ್ಹಳ್ಳಿ ಅವರ ವಕೀಲರನ್ನು ಉಲ್ಲೇಖಿಸಿ ಅವರು … Continued