ಜ್ಞಾನವಾಪಿ ಮಸೀದಿ ಮುಚ್ಚಿದ ನೆಲಮಾಳಿಗೆಗಳ ಎಎಸ್ಐ ಸಮೀಕ್ಷೆಗೆ ಅವಕಾಶ ನೀಡಿ : ವಾರಾಣಸಿ ನ್ಯಾಯಾಲಯಕ್ಕೆ ಹಿಂದೂ ದಾವೆದಾರರ ಮನವಿ

ವಾರಾಣಸಿ : ಜ್ಞಾನವಾಪಿ ಮಸೀದಿಯ ಆವರಣದಲ್ಲಿರುವ ಹಾಗೂ ಈ ಹಿಂದೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಸಮೀಕ್ಷೆ ವ್ಯಾಪ್ತಿಗೆ ಒಳಪಡದ ನೆಲಮಾಳಿಗೆಗಳ ಸಮೀಕ್ಷೆಯನ್ನು ನಡೆಸಬೇಕೆಂದು ಕೋರಿ ವಾರಾಣಸಿಯ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. 2022ರ ಶೃಂಗಾರ ಗೌರಿ ಪೂಜೆ ದಾವೆಯಲ್ಲಿ ಮೊದಲ ದಾವೆದಾರೆಯಾಗಿರುವ ರಾಖಿ ಸಿಂಗ್ ಈ ಕುರಿತ ಅರ್ಜಿ ಸಲ್ಲಿಸಿದ್ದಾರೆ. ಜ್ಞಾನವಾಪಿ ಆವರಣದ … Continued