ಪೇಟಿಎಂ ಸಿಇಒ ಸ್ಥಾನಕ್ಕೆ ಭವೇಶ ಗುಪ್ತಾ ದಿಢೀರ್‌ ರಾಜೀನಾಮೆ

ನವದೆಹಲಿ : ಪೇಟಿಎಂ(Paytm)ನ ಮೂಲ ಕಂಪನಿ ಒನ್‌97 (One97) ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವೇಶ ಗುಪ್ತಾ ಅವರು ಕಂಪನಿಗೆ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಹೇಳಿಕೆ ಶನಿವಾರ ತಿಳಿಸಿದೆ. ನಾಯಕತ್ವ ಬದಲಾವಣೆಯ ಭಾಗವಾಗಿ, ಫಿನ್ಟೆಕ್ ಸಂಸ್ಥೆ ಪೇಟಿಎಂ ರಾಕೇಶ್ ಸಿಂಗ್ ಅವರನ್ನು ಪೇಟಿಎಂ ಮನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿದೆ. ಪಾವತಿ … Continued

ಬೆಂಗಳೂರು ಐಐಎಸ್‌ಸಿ ಹಳೆಯ ವಿದ್ಯಾರ್ಥಿ ವಿಪ್ರೋ ಕಂಪನಿಗೆ ನೂತನ ಸಿಇಒ

ಬೆಂಗಳೂರು : ವಿಪ್ರೋ ಕಂಪನಿಗೆ ನೂತನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ಶ್ರೀನಿವಾಸ ಪಲ್ಲಿಯಾ ಅವರನ್ನು ನೇಮಕ ಮಾಡಲಾಗಿದೆ. ಥಿಯೆರಿ ಡೆಲಾಪೋರ್ಟೆ ಅವರು ಈ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಶ್ರೀನಿವಾಸ ಪಲ್ಲಿಯಾ ಅವರು ಎಂಡಿ ಮತ್ತು ಸಿಇಒ ಪಾತ್ರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಬೆಂಗಳೂರು ಮೂಲದ ಐಟಿ ದೈತ್ಯ ಹೇಳಿಕೆಯಲ್ಲಿ ತಿಳಿಸಿದ್ದು, ತಕ್ಷಣವೇ ಜಾರಿಗೆ ಬರಲಿದೆ. … Continued

”ಇದು ನಾನಲ್ಲ…”: ಡೀಪ್‌ಫೇಕ್ ಅಪಾಯದ ಬಗ್ಗೆ ಹೇಳಲು ತಮ್ಮದೇ ಡೀಪ್‌ಫೇಕ್ ವೀಡಿಯೊ ಹಂಚಿಕೊಂಡ ಜೆರೋಧಾ ಕಂಪನಿಯ ನಿತಿನ್ ಕಾಮತ್ | ವೀಕ್ಷಿಸಿ

ಜೆರೋಧಾ ಕಂಪನಿ ಸಹ-ಸಂಸ್ಥಾಪಕ ಮತ್ತು ಸಿಇಒ ನಿತಿನ್ ಕಾಮತ್ ಅವರು ಹಣಕಾಸು ಸೇವಾ ಉದ್ಯಮದಲ್ಲಿ ಜನರೇಟಿವ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಹೆಚ್ಚುತ್ತಿರುವ ಬೆದರಿಕೆ ಮತ್ತು ಡೀಪ್‌ಫೇಕ್‌ಗಳ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ. X ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಡಿಜಿಟಲೀಕರಣವು ಸಾಮಾನ್ಯವಾಗುತ್ತಿದ್ದಂತೆ ಗ್ರಾಹಕರ ಗುರುತನ್ನು ಪರಿಶೀಲಿಸಲು ಸಾಧ್ಯವಾಗದ ತೊಂದರೆಯ ಬಗ್ಗೆ ಅವರು ಮಾತನಾಡಿದ್ದಾರೆ. ”ಆದರೆ ಡೀಪ್‌ಫೇಕ್‌ಗಳು … Continued

ಬೆಳಗಾವಿ ದಂಡು ಮಂಡಳಿ ಸಿಇಒ ಆತ್ಮಹತ್ಯೆ

ಬೆಳಗಾವಿ : ಬೆಳಗಾವಿ ದಂಡು ಮಂಡಳಿಯ ಸಿಇಒ ಕೆ.ಆನಂದ (40) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಬೆಳಗಾವಿ ದಂಡು ಮಂಡಳಿಯಲ್ಲಿ ಒಂದೂವರೆ ವರ್ಷಗಳಿಂದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಆನಂದ ಅವರು ಮೂಲತಃ ತಮಿಳುನಾಡಿನವರು. ಇಂದು, ಶನಿವಾರ ಅವರ … Continued