ವೀಡಿಯೊ..| ಬೆಂಗಳೂರಲ್ಲಿ ಕ್ರೂರ ಸರಗಳ್ಳತನ ; ಕತ್ತಿ ಹಿಡಿದು ಮಹಿಳೆಯರಿಗೆ ಹೆದರಿಸಿ, ಓರ್ವ ಮಹಿಳೆ ಬೆರಳು ಕತ್ತರಿಸಿ ಸರ ದೋಚಿದ ಕಳ್ಳರು

ಬೆಂಗಳೂರು: ಬೆಂಗಳೂರಿನಲ್ಲಿ ಸರಗಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸೆಪ್ಟೆಂಬರ್‌ನಲ್ಲಿ ಕತ್ತಿ ಹಿಡಿದು ಬೆದರಿಸಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಕಳ್ಳರು ಕಸಿದುಕೊಂಡ ಘಟನೆಯ ವೀಡಿಯೊ ಈಗ ವೈರಲ್‌ ಆಗಿದೆ. ಮಹಿಳೆ ವಿರೋಧಿಸಿದಾಗ, ಸರಗಳ್ಳ ಆಕೆಯ ಎರಡು ಬೆರಳುಗಳನ್ನು ಕತ್ತರಿಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಗಿರಿನಗರ ಪೊಲೀಸರು ಇಬ್ಬರು ಸರಗಳ್ಳರಾದ ಪ್ರವೀಣ ಮತ್ತು ಯೋಗಾನಂದ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. … Continued