ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲ ಕನ್ನಡಿಗರನ್ನು ಕರೆತರಲು ಸತತ ಪ್ರಯತ್ನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ಇನ್ನೂರಕ್ಕೂ ಹೆಚ್ಚು ಜನರು ಬಂಕರ್‌ಗಳಲ್ಲಿ ಆಶ್ರಯ ಪಡಿದಿದ್ದು, ಅವರನ್ನು ಸುರಕ್ಷಿತವಾಗಿ ಮರಳಿ ಕರೆತರುವ ಕಾರ್ಯ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಉಕ್ರೇನ್‌ನಿಂದ ಮರಳಿ ತಾಯ್ನಾಡಿಗೆ ಆಗಮಿಸಿದ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವಿದ್ಯಾರ್ಥಿನಿ ಚೈತ್ರಾ ಸಂಶಿಯನ್ನು ಸ್ವಾಗತಿಸಿದ ನಂತರ ಮಾಧ್ಯಮದವರೊಂದಿಗೆ … Continued