ಮೈ ಜುಂ ಎನ್ನುವ ವೀಡಿಯೊ..| ಚಾಮರಾಜನಗರ : ಆನೆ ದಾಳಿಯಿಂದ ಕೂದಲೆಳೆ ಅಂತರದಿಂದ ಪಾರಾದ ಬೈಕ್‌ ಸವಾರ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಹಾದು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳ ದಾಳಿಯಿಂದ ದ್ವಿಚಕ್ರವಾಹನ ಸವಾರ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಡೆದಿದೆ. ಇಡೀ ಘಟನೆಯನ್ನು ಕಾರಿನಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಮೈಸೂರು -ಊಟಿ ರಾಷ್ಟ್ರೀಯ ಹೆದ್ದಾರಿಯು ಬಂಡೀಪುರ ಅರಣ್ಯದ ನಡುವೆ ಹಾದುಹೋಗಿದೆ. ಹೆದ್ದಾರಿಯಲ್ಲಿ ಶುಕ್ರವಾರದಂದು ಊಟಿ ಕಡೆಯಿಂದ ಮೈಸೂರಿನತ್ತ ಬರುತ್ತಿದ್ದ ಬೈಕ್​ … Continued

ಮಲೆಮಹದೇಶ್ವರ ಬೆಟ್ಟದಲ್ಲಿ ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ ; ಒಬ್ಬರು ಸಾವು, ಮೂವರ ಸ್ಥಿತಿ ಗಂಭೀರ

ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಅವರಲ್ಲಿ ಓರ್ವ ಮೃತಪಟ್ಟ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ತಾಳುಬೆಟ್ಟದಲ್ಲಿ ನಡೆದಿದೆ ಎಮದು ವರದಿಯಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಗ್ರಾಮವೊಂದರ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರು ಶುಕ್ರವಾರ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದು ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ಶನಿವಾರ … Continued

ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ, ಇವಿಎಂಗೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಕೆಲವು ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಮತ್ತು ಗ್ರಾಮಸ್ಥರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಅರಣ್ಯದೊಳಗೆ ಇರುವ ಈ ಗ್ರಾಮದಲ್ಲಿ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು … Continued

ಚಾಮರಾಜನಗರ : ಗುಂಡಲ್ ಜಲಾಶಯದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು

ಚಾಮರಾಜನಗರ : ಬಟ್ಟೆ ತೊಳೆಯಲು ಹೋಗಿದ್ದ ವೇಳೆ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಗುಂಡಲ್ ಜಲಾಶಯದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಗೋಪಿನಾಥಂ ಗ್ರಾಮ ಪಂಚಾಯತ ವ್ಯಾಪ್ತಿಯ ಪುದೂರು ಗ್ರಾಮದ ನಿವಾಸಿ ಮೀನಾ … Continued

ಪಿಯು ಪರೀಕ್ಷೆ ಬರೆಯುವವನಿಗೂ ಫ್ಲೆಕ್ಸ್‌…4ನೇ ಬಾರಿ ಕನ್ನಡ ಪರೀಕ್ಷೆ ಬರೆಯಲು ಹೊರಟವನಿಗೆ ಶುಭಾಶಯ ಕೋರಿದ ಫ್ಲೆಕ್ಸ್‌…!

ಚಾಮರಾಜನಗರ: ಚಾಮರಾಜನಗರ: ಜನ್ಮದಿನ, ಮದುವೆ ವಾರ್ಷಿಕೋತ್ಸವ ಮುಂತಾದವುಗಳಿಗೆ ಶುಭಾಶಯ ಕೋರುವುದು ಸಾಮಾನ್ಯ. ಆದರೆ, ಗುರುವಾರ (ಮಾರ್ಚ್‌ ೧)ದಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಅಭ್ಯರ್ಥಿಗೆ ಶುಭ ಕೋರಿ ಜಯಶಾಲಿಯಾಗಿ ಬಾ ಎಂದು ಆತನಿಗೆ ಹಾರೈಸಿ ಫ್ಲೆಕ್ಸ್‌ ಹಾಕಿದ ಅಪರೂಪದ ವಿದ್ಯಮಾನ ಬೆಳಕಿಗೆ ಬಂದಿದೆ. ಈ ಶುಭಾಶಯ ಕೋರುವ ಫ್ಲೆಕ್ಸ್‌ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ … Continued

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರಿ ವೈದ್ಯ ಹುದ್ದೆ ತೊರೆದ ಸಂಸದ ಶ್ರೀನಿವಾಸ್ ಪ್ರಸಾದ ಅಳಿಯ…!

ಚಾಮರಾಜನಗರ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಸದ ಶ್ರೀನಿವಾಸ ಪ್ರಸಾದ ಅವರ ಅಳಿಯ ತಮ್ಮ ಸರ್ಕಾರಿ ವೈದ್ಯ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಂಸದ ವಿ.ಶ್ರೀನಿವಾಸಪ್ರಸಾದ ಅವರ ಅಳಿಯ ಡಾ.ಎನ್‌ಎಸ್ ಮೋಹನ ಬೆಂಗಳೂರು ಸಂಜಯ ಗಾಂಧಿ ಆಸ್ಪತ್ರೆಯ ಖ್ಯಾತ ಬೆನ್ನುಹುರಿ ತಜ್ಞ ಹಾಗು ಪ್ರಾಧ್ಯಾಪಕರಾಗಿದ್ದರು. ಮುಂದಿನ ಲೋಕಸಭಾ ಚುನಾವಣೆಗೆ ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್‌ … Continued

ಎಂಎಲ್​ಸಿ ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ಶವವಾಗಿ ಪತ್ತೆ

ಚಾಮರಾಜನಗರ: ಶುಕ್ರವಾರ ನಾಪತ್ತೆಯಾಗಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ಅವರ ಶವ ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಅಲ್ಲಿನ ನಿರ್ಜನ ಪ್ರದೇಶದಲ್ಲಿ ಶವ ಸಿಕ್ಕಿದ್ದು, ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ ಅವರ ಬಾವ 62 ವರ್ಷದ ಮಹದೇವಯ್ಯ ಅವರು ಶುಕ್ರವಾರ … Continued

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ : ಗೋಲ್ಡನ್‌ ಸ್ಟಾರ್‌ ಗಣೇಶಗೆ ಅರಣ್ಯ ಇಲಾಖೆಯಿಂದ ನೋಟಿಸ್

ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಸೂಕ್ಷ್ಮ ವಲಯದಲ್ಲಿ ಬೃಹತ್ ಕಟ್ಟಡ ನಿರ್ಮಿಸುತ್ತಿರವು ನಟ ಗಣೇಶ ಅವರಿಗೆ ಅರಣ್ಯ ಇಲಾಖೆ ನೋಟೀಸ್ ನೀಡಿ ತಕ್ಷಣ ಕಾಮಗಾರಿ ನಿಲ್ಲಿಸುವಂತೆ ಸೂಚನೆ ನೀಡಿದೆ ಎಂದು ವರದಿಯಾಗಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿ ಗ್ರಾಮದ ಸರ್ವೆ ನಂಬರ್ 105ರಲ್ಲಿ ಗಣೇಶ್‌ ಅವರು 1 ಎಕರೆ 24 … Continued

ಗುಂಡ್ಲುಪೇಟೆ : ಹೃದಯಾಘಾತದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

ಚಾಮರಾಜನಗರ: ಹದಿನೈದು ವರ್ಷದ ಎಸ್ಸೆಸ್ಸೆಲ್ಸಿ  ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತವಾಗಿ ಅಸುನೀಗಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟ್‌ನಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿನಿ ಫೆಲಿಶಾ (15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಈಕೆ ಇಲ್ಲಿನ ಕ್ರೈಸ್ತ ಮಿಷನರಿ ಹಾಸ್ಟೆಲ್​ನಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಳು. ವಿದ್ಯಾರ್ಥಿನಿ … Continued

ಚಿರತೆ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ ಸಾವು

ಚಾಮರಾಜನಗರ: ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಇತ್ತೀಚೆಗೆ ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ. ಚಿರತೆ ದಾಳಿಯಿಂದ ಬಾಲಕಿಯ ದವಡೆ ಮೂಳೆ ಮುರಿದಿತ್ತು ಹಾಗೂ ಮುಖ ಊದಿಕೊಂಡಿತ್ತು, 14 ದಿನಗಳಿಂದ ಮೈಸೂರಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಜು‌ಲೈ 11ರಂದು ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿತ್ತು. ಆದರೆ ಇಂದು, … Continued