ಚಾಮರಾಜನಗರ : ಎರಡು ಹುಲಿ ಮರಿಗಳ ಮೃತದೇಹ ಪತ್ತೆ

ಚಾಮರಾಜನಗರ : ಐದು ಹುಲಿಗಳಿಗೆ ವಿಷಪ್ರಾಶನ ಮಾಡಿ ಹತ್ಯೆ ಮಾಡಿದ ಪ್ರಕರಣ ಜನಮಾನಸದಿಂದ ಮಾಸುವ ಮುನ್ನ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಎರಡು ಹುಲಿಮರಿಗಳು ಮೃತಪಟ್ಟ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿವೆ. ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಅರಣ್ಯ ಪ್ರದೇಶದಲ್ಲಿ ಎರಡು ಹುಲಿ ಮರಿಗಳು ಮೃತಪಟ್ಟಿರುವುದು ಕಂಡುಬಂದಿದೆ. … Continued

ಚಾಮರಾಜನಗರ | ಹುಲಿ ದಾಳಿಗೆ ಮಹಿಳೆ ಸಾವು, ಯುವಕನಿಗೆ ಗಾಯ

ಚಾಮರಾಜನಗರ: ಕೆಲವೇ ತಾಸುಗಳ ಅಂತರದಲ್ಲಿ ಇಬ್ಬರ ಮೇಲೆ ಹುಲಿ ದಾಳಿ ಮಾಡಿದೆ. ಹುಲಿ ದಾಳಿಯಲ್ಲಿ ಮಹಿಳೆ ಸಾವಿಗೀಡಾಗಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಚಾಮರಾಜನಗರ ತಾಲೂಕಿನ ಬೇಡಗುಳಿಯಲ್ಲಿ ನಡೆದಿದೆ. ಬೇಡಗುಳಿಯ ರಂಗಮ್ಮ ಎಂಬ ವೃದ್ಧೆ ಹುಲಿ ದಾಳಿಗೆ ಅಸುನೀಗಿದ್ದಾರೆ. ರಂಗಮ್ಮ ಎಂಬವರ ಮೇಲೆ ಮಂಗಳವಾರ ಬೆಳಗ್ಗೆ ಹುಲಿ ದಾಳಿ ಮಾಡಿದ್ದು ತಲೆ ಮತ್ತು … Continued

ಟಿಪ್ಪರ್ – ಕಾರಿನ ನಡುವೆ ಡಿಕ್ಕಿ: ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ಸಾವು

ಚಾಮರಾಜನಗರ: ಟಿಪ್ಪರ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನಕ್ಕೆ ತೆರಳುತ್ತಿದ್ದ ಐವರು ಸಾವಿಗೀಡಾದ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಮೈಸೂರಿನ ಶ್ರೀಲಕ್ಷ್ಮೀ, ಲಿಖಿತಾ, ಮಂಡ್ಯದ ಸುಹಾಸ್, ನಿತಿನ್ ಮತ್ತು ಶ್ರೇಯಸ್ ಮೃತಪಟ್ಟವರೆಂದು ತಿಳಿದುಬಂದಿದೆ. ಮೃತರೆಲ್ಲರೂ ಸ್ನೇಹಿತರಾಗಿದ್ದು, ಮಹಾಶಿವರಾತ್ರಿ ರಥೋತ್ಸವ … Continued

ಚಾಮರಾಜನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು, ರೈತನ ವಿರುದ್ಧ ಪ್ರಕರಣ ದಾಖಲು

ಚಾಮರಾಜನಗರ : ಜಿಲ್ಲೆಯಲ್ಲಿ ಶನಿವಾರ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಸಾವಿಗೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಂಡೀಪುರ ಸಮೀಪದ ಹೆಡಿಯಾಲ ಅರಣ್ಯ ವ್ಯಾಪ್ತಿಯ ದೊಡ್ಡಬರಗಿ ಗ್ರಾಮದಲ್ಲಿ ಘಟನೆ ಅಧಿಕಾರಿಗಳ ಪ್ರಕಾರ, ದೊಡ್ಡಬರಗಿ ಗ್ರಾಮದ ರೈತ ಗೋಪಾಲ ಎಂಬವರು ತಮ್ಮ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿದ್ದಾರೆ ಮತ್ತು ಬೇಲಿ ದಾಟಲು ಪ್ರಯತ್ನಿಸಿದ … Continued