ಬಿಜೆಪಿಗೆ ಸೇರ್ಪಡೆಯಾದ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೇನ್

ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಚಂಪೈ ಸೊರೇನ್ ಶುಕ್ರವಾರ ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ, ಬಾಬುಲಾಲ್ ಮರಾಂಡಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಪಕ್ಷದ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರಿದರು. ಅವರನ್ನು ಬಿಜೆಪಿಗೆ ಸ್ವಾಗತಿಸಿದ … Continued

ಜೆಎಂಎಂ ಪಕ್ಷಕ್ಕೆ ಮಾಜಿ ಸಿಎಂ ಚಂಪೈ ಸೊರೇನ್ ರಾಜೀನಾಮೆ

ನವದೆಹಲಿ: ಜಾರ್ಖಂಡದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಬುಧವಾರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜಾರ್ಖಂಡದ ಆದಿವಾಸಿಗಳು, ಮೂಲನಿವಾಸಿಗಳು, ದಲಿತರು, ಹಿಂದುಳಿದವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ತಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ. ಪಕ್ಷದ ಈಗಿನ ಕಾರ್ಯವೈಖರಿ ಮತ್ತು ನೀತಿಗಳಿಂದ ನೊಂದಿರುವ ಕಾರಣ ನಾನು ಅಂತಹ ಕ್ರಮಕ್ಕೆ ಮುಂದಾಗಬೇಕಾಯಿತು … Continued

ಜಾರ್ಖಂಡ್ ವಿಧಾನಸಭಾ ಚುನಾವಣೆಗೂ ಮುನ್ನ ನೂತನ ರಾಜಕೀಯ ಪಕ್ಷ ಸ್ಥಾಪನೆ ಘೋಷಣೆ ಮಾಡಿದ ಮಾಜಿ ಸಿಎಂ ಚಂಪೈ ಸೊರೇನ್

ನವದೆಹಲಿ: ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್‌ ಬುಧವಾರ ಘೋಷಿಸಿದ್ದಾರೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಅವರು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್‌ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳ ನಡುವೆಯೇ ಈ ಘೋಷಣೆ ಹೊರಬಿದ್ದಿದೆ. “ರಾಜಕೀಯದಿಂದ ನಿವೃತ್ತಿ, ನೂತನ … Continued

ಮೂರು ಆಯ್ಕೆಗಳಿವೆ…: ಬಿಜೆಪಿ ಸೇರ್ಪಡೆಯಾಗುವ ವದಂತಿ ಮಧ್ಯೆ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೇನ್‌ ಮಾರ್ಮಿಕ ಹೇಳಿಕೆ

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಚಂಪೈ ಸೊರೇನ್‌ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವದಂತಿಗಳ ನಡುವೆ ತಾನು ಸಂಪೂರ್ಣ ಜೀವನವನ್ನು ಸಮರ್ಪಿಸಿಕೊಂಡ ಪಕ್ಷದಲ್ಲಿ ನನಗೆ ಅಸ್ತಿತ್ವವಿಲ್ಲ ಎಂಬ ಭಾವನೆ ಬರುವಂತಾಗಿದೆ ಹಾಗೂ ತನಗೆ ಪರ್ಯಾಯ ಮಾರ್ಗಹುಡುಕುವ ಅನಿವಾರ್ಯತೆ ಸೃಷ್ಟಿಸಲಾಗಿದೆ ಎಂದು ಹೇಳಿದ್ದಾರೆ. ಜಾರ್ಖಂಡ್ ವಿಧಾನಸಭೆ ಚುನಾವಣೆಗೂ ಮುನ್ನ … Continued

ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ; ಹೇಮಂತ ಸೊರೇನ್ ಮತ್ತೆ ಸಿಎಂ..!

ರಾಂಚಿ : ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ತಮ್ಮ ಸ್ಥಾನಕ್ಕೆ ಇಂದು, ಬುಧವಾರ ರಾಜೀನಾಮೆ ಸಲ್ಲಿಸಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿಯಾಗಲಿದ್ದಾರೆ. ರಾಜ್ಯಪಾಲರಿಗೆ ಚಂಪೈ ಸೊರೇನ್ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಹೇಮಂತ್ ಸೊರೇನ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಇದೀಗ ಹೇಮಂತ್ ಸೊರೇನ್ … Continued

ಹೇಮಂತ್ ಸೊರೇನ್ ಇ.ಡಿ. ವಶಕ್ಕೆ; ಜಾರ್ಖಂಡ್ ನೂತನ ಸಿಎಂ ಆಗಿ ಚಂಪೈ ಸೊರೇನ್ ಆಯ್ಕೆ

ರಾಂಚಿ : ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಅವರನ್ನು ಬುಧವಾರ ಸಂಜೆ ಜಾರಿ ನಿರ್ದೇಶನಾಲಯವು ಅವರು ಹುದ್ದೆ ತ್ಯಜಿಸಿದ ಕೆಲವೇ ನಿಮಿಷಗಳಲ್ಲಿ ಕಸ್ಟಡಿಗೆ ತೆಗೆದುಕೊಂಡಿತು.  ಅವರ  ರಾಜೀನಾಮೆ ನಂತರ ಅವರ ಆಪ್ತ ಹಾಗೂ ಪಕ್ಷದ ಹಿರಿಯ ನಾಯಕ ಚಂಪೈ ಸೊರೇನ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ನೀಡಿದ ಕೆಲವೇ ನಿಮಿಷಗಳಲ್ಲಿ ಭೂ ಹಗರಣಕ್ಕೆ … Continued