ಚನ್ನಮ್ಮನ ಕಿತ್ತೂರು : ಗ್ರಾಪಂ ಕಚೇರಿಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ, ಮಗಳ ಹತ್ಯೆ

ಬೆಳಗಾವಿ: ಕೌಟುಂಬಿಕ ಆಸ್ತಿ ಕಲಹದಿಂದ ಗ್ರಾಮ ಪಂಚಾಯತ ಕಚೇರಿಯೊಳಗೆ ನಿವೃತ್ತ ಯೋಧ ಹಾಗೂ ಅವರ ಮಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮತ್ತೋರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಅವರಾದಿ ಗ್ರಾಮದ ನಿವಾಸಿ, ಮಾಜಿ ಸೈನಿಕ ರುದ್ರಪ್ಪ … Continued

ಚನ್ನಮ್ಮನ ಕಿತ್ತೂರು | ಪಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ : ಬಿಜೆಪಿ ಸದಸ್ಯನ ಅಪಹರಣ..!

ಬೆಳಗಾವಿ : ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಗುರುವಾರ ರಾತ್ರಿ ತಂಡವೊಂದು ಅಪಹರಣ ಮಾಡಿದೆ ಎಂದು ವರದಿಯಾಗಿದೆ. ಬಿಜೆಪಿ ಸದಸ್ಯರಾದ ನಾಗರಾಜ ಅಸುಂಡಿ ಅವರು ಪಟ್ಟಣದ ಚೌಕಿಮಠದ ಬಳಿ ನಿಂತಿದ್ದಾಗ ಸ್ಕಾರ್ಪಿಯೊ ವಾಹನದಲ್ಲಿ ಬಂದ ಕೆಲವರು ಬಲವಂತವಾಗಿ ನಾಗರಾಜ ಅವರನ್ನು ಎಳೆದುಕೊಂಡು ವಾಹನದಲ್ಲಿ … Continued