ಚನ್ನಪಟ್ಟಣ ಉಪಚುನಾವಣೆ | ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆಶೀರ್ವಾದ ಪಡೆದ ಯೋಗೇಶ್ವರ ; ಕಾಂಗ್ರೆಸ್‌ ಸೇರ್ಪಡೆ ಈಗ ಔಪಚಾರಿಕ

ಬೆಂಗಳೂರು: ಭಾರೀ ಕೂತೂಹಲಕ್ಕೆ ಕಾರಣವಾಗಿರುವ ಚನ್ನಪಟ್ಟಣದ ಉಪಚುನಾವಣೆಗೆ ಸಂಬಂಧಿಸಿದಂತೆ ಟಿಕೆಟ್‌ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೇಶ್ವರ ವಿಚಾರದಲ್ಲಿ ಇದ್ದ ಕೂತೂಹಲಕ್ಕೆ ಬುಧವಾರ (ಅ23) ರಂದು ತೆರೆ ಬಿದ್ದಿದೆ. ರಾಜಕೀಯ ಬೆಳವಣಿಗೆಯಲ್ಲಿ ಸಿ.ಪಿ.ಯೋಗೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಅವರು ವಾಟ್ಸ್​ಆಯಪ್​ ಮೂಲಕ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. … Continued

ವಿಧಾನ ಪರಿಷತ್‌ ಸ್ಥಾನಕ್ಕೆ ಬಿಜೆಪಿಯ ಸಿ.ಪಿ.ಯೋಗೇಶ್ವರ ರಾಜೀನಾಮೆ…!

ಹುಬ್ಬಳ್ಳಿ: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಪಿ. ಯೋಗೇಶ್ವರ ಅವರು ಸೋಮವಾರ ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು, ಸೋಮವಾರ ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು … Continued