ಕಾಂಗ್ರೆಸ್‌ಗೆ ಶಾಕ್‌ ನೀಡಿದ ʼಹಿಂದಿ ಬೆಲ್ಟ್‌; ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು, ತೆಲಂಗಾಣ ಕಾಂಗ್ರೆಸ್‌ ತೆಕ್ಕೆಗೆ, ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ವರ್ಚಸ್ಸಿಗೆ ಧಕ್ಕೆ

 ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಾಲಿಗೆ ಆಘಾತಕಾರಿ ಫಲಿತಾಂಶವಾಗಿದೆ . 2018ರಲ್ಲಿ ಗೆಲುವು ಸಾಧಿಸಿದ್ದ ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಎದುರು ಕಾಂಗ್ರೆಸ್‌ ಸೋಲನುಭವಿಸಿದೆ. ದೇಶದ ‘ಹಿಂದಿ ಬೆಲ್ಟ್‌’ನ ಪ್ರಮುಖ 3 ರಾಜ್ಯಗಳಲ್ಲಿ ಮತದಾರರು ಕಾಂಗ್ರೆಸ್‌ಗೆ ಆಘಾತ ನೀಡಿದ್ದಾರೆ . ಇದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ರಾಹುಲ್ ಗಾಂಧಿ … Continued

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲಿ ಬಿಜೆಪಿ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ

ಪಂಚ ರಾಜ್ಯಗಳಿಗೆ ನಡೆದ ವಿದಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಮತ ಎಣಿಕೆ ಇಂದು ಭಾನುವಾರ ಬೆಳಿಗ್ಗೆ ಆರಂಭವಾಗಿದ್ದು, ಆರಂಭದ ಮತ ಎಣಿಕೆಯ ಟ್ರೇಂಡ್‌ ಪ್ರಕಾರ ಬಿಜೆಪಿ ಮೂರು ರಾಜ್ಯಗಳಲ್ಲಿ ಹಾಗೂ ಕಾಂಗ್ರೆಸ್‌ ಒಂದು ರಾಜ್ಯದಲ್ಲಿ ಮುನ್ನಡೆ ಸಾಧಿಸಿರುವುದು ಕಂಡುಬಂದಿದೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂಛತ್ತೀಸ್ ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದಾರೆ ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಛತ್ತೀಸ್ … Continued

ಪಂಚ ರಾಜ್ಯಗಳ ಚುನಾವಣೆ 2023 : 2 ರಾಜ್ಯಗಳಲ್ಲಿ ಬಿಜೆಪಿ, 2 ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ, 1ರಲ್ಲಿ ಅತಂತ್ರ ಎಂದು ಎಕ್ಸಿಟ್ ಪೋಲ್ ಗಳ ಭವಿಷ್ಯ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಲಾಭವಾಗಲಿದೆ ಹಾಗೂ ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಗಲಿದೆ ಎಂದು ಎಂದು ಗುರುವಾರ ಪ್ರಕಟವಾದ ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮಿಜೋರಾಂನಲ್ಲಿ ಅತಂತ್ರ ವಿಧಾನಸಭೆಯ ಬಗ್ಗೆ ಹೇಳಿವೆ ಎಂದು ಸೂಚಿಸಿವೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, 200 ಸದಸ್ಯ ಬಲದ ರಾಜಸ್ಥಾನ ಮತ್ತು … Continued

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ : 5 ರಾಜ್ಯಗಳಲ್ಲಿ ಎಬಿಪಿ-ಸಿವೋಟರ್ ಸಮೀಕ್ಷೆ- ತುರುಸಿನ ಸ್ಪರ್ಧೆಯಲ್ಲಿ ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಲ್ಪ ಮುಂದೆ, ರಾಜಸ್ಥಾನದಲ್ಲಿ ಬಿಜೆಪಿಗೆ ಬಹುಮತ ಸಾಧ್ಯತೆ

ನವದೆಹಲಿ : ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ಮತದಾನವು ನವೆಂಬರ್ 7 ರಂದು ಪ್ರಾರಂಭವಾಗಿ ನವೆಂಬರ್ 30 ರಂದು ಮುಕ್ತಾಯಗೊಳ್ಳಲಿದೆ. ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಒಂದೇ ಹಂತದಲ್ಲಿ ಮತ್ತು ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. … Continued

ಆಘಾತಕಾರಿ ಘಟನೆ ..: ಮದುವೆ ಮಂಟಪದಲ್ಲಿ ವಧು-ವರರ ಮೇಲೆ ಎಸಿಡ್‌ ಎರಚಿದ ದುಷ್ಕರ್ಮಿಗಳು, 12 ಜನರಿಗೆ ಗಂಭೀರ ಗಾಯ

ಜಗದಲ್‌ಪುರ: ಛತ್ತೀಸ್‌ಗಢದ ಜಗದಲ್‌ಪುರದಲ್ಲಿ ಬುಧವಾರ ರಾತ್ರಿ ನಡೆದ ವಿವಾಹ ಸಮಾರಂಭದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ವಧು-ವರರ ಮೇಲೆ ಯಾರೋ ಎಸಿಡ್ ಎರಚಿದ್ದಾರೆ. ಘಟನೆಯಲ್ಲಿ ವಧು-ವರರು, ಆರು ಮತ್ತು ನಾಲ್ಕು ವರ್ಷದ ಇಬ್ಬರು ಮಕ್ಕಳು ಸೇರಿದಂತೆ 12 ಜನರು ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಎಲ್ಲ ಗಾಯಾಳುಗಳನ್ನು ವೈದ್ಯಕೀಯ ಕಾಲೇಜು-ಆಸ್ಪತ್ರೆಗೆ ದಾಖಲಿಸಲಾಗಿದೆ. … Continued

ಛತ್ತೀಸ್‌ಗಡ : 19 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಕ್ಸಲನ ಹತ್ಯೆ ಮಾಡಿದ ಪೊಲೀಸರು

ದಾಂತೇವಾಡ: ಛತ್ತೀಸ್‍ಘಢದ ದಾಂತೇವಾಡ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 19 ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲೀಯ ಹತ್ಯೆಯಾಗಿದ್ದಾನೆ. ಕಾನೂನುಬಾಹಿರ ಚಳವಳಿಯ ಕಟೆಕಲ್ಯಾಣ ಪ್ರದೇಶ ಸಮಿತಿಯ ಸದಸ್ಯ ಬುಧ್ರಾಮ್ ಮರ್ಕಮ್ ಹತ್ಯೆಯಾಗಿದ್ದು, ಈತನ ಸುಳಿವು ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಕಾಡಿನಲ್ಲಿ ಸೋಮವಾರ ಮಧ್ಯರಾತ್ರಿ ಬಂಡುಕೋರರು ಮತ್ತು ಜಿಲ್ಲಾ ಮೀಸಲು ಪಡೆ ಮುಖಾಮುಖಿಯಾಗಿದೆ. ಅರಣ್ಯ … Continued

ಹೊಸ ವರ್ಷದಂದು 9 ಮಹಿಳಾ ನಕ್ಸಲರೂ ಸೇರಿ 44 ನಕ್ಸಲರ ಶರಣಾಗತಿ

ಸುಕ್ಮಾ(ಛತ್ತೀಸ್​ಗಡ): ಹೊಸ ವರ್ಷದ ಮೊದಲ ದಿನವೇ ಸುಕ್ಮಾ ಪೊಲೀಸರ ಮುಂದೆ ಸುಮಾರು 44 ನಕ್ಸಲರು ಶರಣಾಗತರಾಗಿದ್ದಾರೆ. ಇದರಲ್ಲಿ 9 ಮಹಿಳಾ ನಕ್ಸಲರೂ ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಕ್ಸಲ್ ನಿರ್ಮೂಲನಾ ಕಾರ್ಯಕ್ರಮವಾದ ಪೂನಾ ನಾರ್ಕೋಮ್ ಅಭಿಯಾನವನ್ನು ಸುಕ್ಮಾ ಜಿಲ್ಲೆಯಲ್ಲಿ ನಡೆಸಲಾಗುತ್ತಿದೆ. ಈ ಅಭಿಯಾನದಡಿ ಸುಕ್ಮಾ ಪೊಲೀಸರು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಕ್ಸಲರನ್ನು ಮುಖ್ಯ ವಾಹಿನಿಗೆ … Continued

ಛತ್ತೀಸ್‍ಗಢ: ನಕ್ಸಲರ ಗುಂಡಿಗೆ ಗದಗ ಯೋಧ ಹುತಾತ್ಮ

ಗದಗ: ನಕ್ಸಲ್ ರ ಗುಂಡಿನ ದಾಳಿಗೆ ಜಿಲ್ಲೆಯ ಯೋಧ ವೀರಮರಣವನ್ನಪ್ಪಿರುವ ಘಟನೆ ಛತ್ತೀಸ್‍ಗಢದಲ್ಲಿ ನಡೆದಿದೆ. ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋಜನೂರ ಗ್ರಾಮದ ಯೋಧ ಲಕ್ಷ್ಮಣ್ ಗೌರಣ್ಣವರ(31) ಹತಾತ್ಮರಾಗಿದ್ದಾರೆ. ಛತ್ತೀಸ್‍ಗಢ ಗಡಿ ಭಾಗದಲ್ಲಿ ನಕ್ಸಲರು ಹಾಗೂ ಯೋಧರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ನಕ್ಸಲರ ಗುಂಡು ಲಕ್ಷ್ಮಣ ಅವರ ಎದೆ ಹೊಕ್ಕಿದ್ದರಿಂದ ಅವರು ಹತಾತ್ಮರಾಗಿದ್ದಾರೆ. ಲಕ್ಷ್ಮಣ್ … Continued

ಕಸದ ಲಾರಿಗಳಲ್ಲಿ ಕೊರೊನಾದಿಂದ ಮೃತಪಟ್ಟವರ ಶವಗಳ ಸಾಗಣೆ

ರಾಜನಂದಗಾಂವ: ಛತ್ತೀಸಗಢ ರಾಜ್ಯದ ರಾಜನಂದಗಾಂವನಲ್ಲಿ ಕೊರೊನಾ ಕಾರಣದಿಂದ ಮೃತಪಟ್ಟವರನ್ನು ಆರೋಗ್ಯ ಕಾರ್ಯಕರ್ತರು ಕಸ ತುಂಬುವ ಲಾರಿಗಳಲ್ಲಿ ಶವಾಗಾರಕ್ಕೆ ಸಾಗಿಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ಆಂಬುಲೆನ್ಸ್‌ಗಳು ಹಾಗೂ ಶವಸಾಗಣೆ ವಾಹನಗಳ ಕೊರತೆಯಿಂದಾಗಿ ಮೃತದೇಹಗಳನ್ನು ಕಸ ತುಂಬುವ ವಾಹನಗಳಲ್ಲಿ ಸಾಗಿಸಲಾಗುತ್ತಿದೆ. ವಿಡಿಯೋದಲ್ಲಿ ಶವಗಳನ್ನು ಕಸದ ಲಾರಿಗೆ ಎಸೆಯುತ್ತಿರುವ ದೃಷ್ಯಗಳಿವೆ. ಈ ಘಟನೆ ಕುರಿತು ರಾಜ್ಯ ಸರಕಾರ ಅಥವಾ ಆರೋಗ್ಯ … Continued

ಆಮಿಷ ಒಡ್ಡಿ ಭದ್ರತಾ ಪಡೆಗಳಿಗೆ ಯು-ಆಕಾರದ’ ಹೊಂಚು ದಾಳಿಗೆ ಗುರಿಯಾಗುವಂತೆ ಮಾಡಿದ ನಕ್ಸಲರು

ಉನ್ನತ ಮಾವೋವಾದಿ ಕಮಾಂಡರ್ ಇರುವ ಮಾಹಿತಿ ನೀಡಿ ಭದ್ರತಾ ಸಿಬ್ಬಂದಿ ಬಲೆಗೆ ಬೀಳಿಸಿದ ನಂತರ ಮಾವೋವಾದಿಗಳು ಛತ್ತೀಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ “ಯು-ಟೈಪ್” ಹೊಂಚು ದಾಳಿ ನಡೆಸಿದರು ಎಂದು ಪರಿಚಿತ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ ಎಂದು  ವರದಿಯೊಂದು ಹೇಳಿದೆ. ವರದಿ ಪ್ರಕಾರ, ಮಾವೋವಾದಿ ಕಾರ್ಯಾಚರಣೆ ನೇತೃತ್ವವನ್ನು ಬೆಟಾಲಿಯನ್ ನಂಬರ್ -1 ಕಮಾಂಡರ್ ಮಾಡ್ವಿ ಹಿಡ್ಮಾ ವಹಿಸಿದ್ದರು. ನಕ್ಸಲ್‌ … Continued