ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಸ್ವಾಮೀಜಿ 10 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಗೋವಿಂದ ಪೂಜಾರಿ ಎಂಬ ಉದ್ಯಮಿಗೆ ಸುಮಾರು 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸೆಪ್ಟೆಂಬರ್‌ 29ರವರೆಗೆ 10 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಇತ್ತೀಚೆಗೆ ಪ್ರಕರಣ ಹೊರಬಂದಾಗಿನಿಂದ ತಲೆಮರೆಸಿಕೊಂಡಿದ್ದ ಸ್ವಾಮೀಜಿ, ಮಠದಿಂದ ತಲೆಮರೆಸಿಕೊಂಡಿದ್ದರು. … Continued

ಸಿಸಿಬಿ ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ; ಆಸ್ಪತ್ರೆಗೆ ದಾಖಲು

ಬೆಂಗಳೂರು : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಅವರು ಸಿಸಿಬಿ ವಿಚಾರಣೆ ವೇಳೆ ಕುಸಿದು ಬಿದ್ದಿದ್ದಾರೆ ಎನ್ನಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಇಂದು, ಶುಕ್ರವಾರ ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾ ಅವರನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತರಲಾಗಿತ್ತು. 45 ನಿಮಿಷದ … Continued

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೆಪ್ಟೆಂಬರ್ 23ರ ವರೆಗೆ ಸಿಸಿಬಿ ಪೊಲೀಸರ ಕಸ್ಟಡಿಗೆ

ಬೆಂಗಳೂರು: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯ ಅವರನ್ನು 10 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಜನರನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ, ಬೆಂಗಳೂರಿನ 1ನೇ ಎಸಿಎಂಎಂ … Continued

ಉದ್ಯಮಿಗೆ ವಂಚನೆ ಆರೋಪ: ಚೈತ್ರಾ ಕುಂದಾಪುರ ಪೊಲೀಸರ ವಶಕ್ಕೆ

ಉಡುಪಿ: ಜಿಲ್ಲೆಯ ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚನೆ ಮಾಡಿದ ಆರೋಪದ ಮೇಲೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿವಂಚಿಸಿರುವುದಾಗಿ ಚೈತ್ರಾ ಕುಂದಾಪುರ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ … Continued

ವಂಚನೆ ಪ್ರಕರಣ : ಗುಜರಾತ್‌ನ ಮಾಜಿ ಸಚಿವ ವಿಪುಲ್ ಚೌಧರಿಗೆ 7 ವರ್ಷ ಜೈಲು ಶಿಕ್ಷೆ

ಅಹಮದಾಬಾದ್: ವಂಚನೆ ಪ್ರಕರಣದಲ್ಲಿ ಗುಜರಾತ್‌ನ ಮಾಜಿ ಸಚಿವ ಮತ್ತು ದೂಧಸಾಗರ್ ಡೈರಿಯ ಮಾಜಿ ಅಧ್ಯಕ್ಷ ವಿಪುಲ್ ಚೌಧರಿ ಅವರಿಗೆ ಗುಜರಾತ್‌ನ ನ್ಯಾಯಾಲಯವು ಗುರುವಾರ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.. ಚೌಧರಿ ಅವರು 2014ರಲ್ಲಿ ಮಹಾರಾಷ್ಟ್ರಕ್ಕೆ ಸರಿಯಾದ ವಿಧಾನಗಳನ್ನು ಅನುಸರಿಸದೆ ಜಾನುವಾರುಗಳ ಆಹಾರವನ್ನು ಪೂರೈಸುವ ಮೂಲಕ ಹೈನುಗಾರಿಕೆಗೆ 22.5 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ … Continued