ನಕ್ಸಲ್ ಕಮಾಂಡರ್ ಸೇರಿದಂತೆ 26 ಮಂದಿ ನಕ್ಸಲರನ್ನು ಎನ್‌ಕೌಂಟರಿನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು

ನವದೆಹಲಿ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಮಾಡ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 26 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ದೃಢಪಡಿಸಿದ್ದಾರೆ. 2003 ರಲ್ಲಿ ಆಗಿನ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಮೇಲೆ ನಡೆದ ಅಲಿಪಿರಿ ಬಾಂಬ್ ದಾಳಿಯ ಪ್ರಮುಖ ಸಂಚುಕೋರ ನಂಬಲ ಕೇಶವ ರಾವ್ ಅಲಿಯಾಸ್ ಬಸವ ರಾಜುನನ್ನು 50 … Continued

ಎನ್‌ಸಿಸಿ ಶಿಬಿರದಲ್ಲಿ ನಮಾಜ್‌ ಮಾಡಲು ವಿದ್ಯಾರ್ಥಿಗಳಿಗೆ ಬಲವಂತ : 7 ಶಿಕ್ಷಕರು ಸೇರಿ 8 ಜನರ ವಿರುದ್ಧ ಪ್ರಕರಣ ದಾಖಲು

ಬಿಲಾಸ್ಪುರ: ಛತ್ತೀಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ನಡೆದ ಎನ್.ಸಿ.ಸಿ ಶಿಬಿರದಲ್ಲಿ ಗುರು ಘಾಸಿದಾಸ್ ಸೆಂಟ್ರಲ್ ಯೂನಿವರ್ಸಿಟಿಯ ಕೆಲವು ವಿದ್ಯಾರ್ಥಿಗಳಿಗೆ ಬಲವಂತವಾಘಿ ನಮಾಜ್ ಮಾಡಿಸಿದ ಆರೋಪದ ಮೇಲೆ ಶನಿವಾರ ಏಳು ಶಿಕ್ಷಕರು ಸೇರಿದಂತೆ ಎಂಟು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯ ಶಿವತಾರೈ ಗ್ರಾಮದಲ್ಲಿ ಮಾರ್ಚ್ 26 ರಿಂದ … Continued

ಛತ್ತೀಸಗಢ | ಪ್ರಧಾನಿ ಮೋದಿ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಶರಣಾದ 50 ನಕ್ಸಲೀಯರು

ರಾಯ್ಪುರ : ಛತ್ತೀಸ್‌ಗಢದ ಬಿಲಾಸಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುನ್ನ 50 ಮಾವೋವಾದಿಗಳು ಶರಣಾಗಿದ್ದಾರೆ, ಇದು ಕೇಂದ್ರ ಮತ್ತು ರಾಜ್ಯ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆ ಮತ್ತು ಮನೆಗೆ ಹಿಂತಿರುಗಿ ಅಭಿಯಾನಕ್ಕೆ ಮಹತ್ವದ ಯಶಸ್ಸು ಎಂದು ಪರಿಗಣಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 33,700 ಕೋಟಿ ರೂ.ಗೂ ಹೆಚ್ಚು ಮೊತ್ತದ … Continued

ಛತ್ತೀಸಗಢ ಮಾಜಿ ಸಿಎಂ ಭೂಪೇಶ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ

ರಾಯ್ಪುರ: ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಘೇಲ್ ಅವರು ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೊರಡುವ ಮೊದಲು ತಮ್ಮ ನಿವಾಸದಲ್ಲಿ ಸಿಬಿಐ ಶೋಧ ನಡೆಸಿದೆ ಎಂದು ಬುಧವಾರ ಹೇಳಿದ್ದಾರೆ. ಕೇಂದ್ರೀಯ ತನಿಖಾ ದಳದ (ಸಿಬಿಐ) ತಂಡಗಳು ಬುಧವಾರ ರಾಯ್ಪುರ ಮತ್ತು ಭಿಲೈನಲ್ಲಿರುವ ಬಘೆಲ್ ಅವರ ನಿವಾಸಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿ ಮತ್ತು ಅವರ ನಿಕಟವರ್ತಿಗಳ … Continued

ಛತ್ತೀಸಗಢದ ಹಿಂದಿ ಸಾಹಿತಿ ವಿನೋದಕುಮಾರ ಶುಕ್ಲಾಗೆ ಜ್ಞಾನಪೀಠ ಪ್ರಶಸ್ತಿ ಘೋಷಣೆ

ನವದೆಹಲಿ: ಖ್ಯಾತ ಹಿಂದಿ ಬರಹಗಾರ ವಿನೋದಕುಮಾರ ಶುಕ್ಲಾ ಅವರುಭಾರತದಲ್ಲಿ ಸಾಹಿತ್ಯಕ್ಕೆ ನೀಡುವ ಅತ್ಯುನ್ನತ ಪುಸ್ಕಾರವಾದ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 88 ವರ್ಷ ವಯಸ್ಸಿನ ಕವಿ, ಸಣ್ಣ ಕಥೆಗಾರ ಮತ್ತು ಪ್ರಬಂಧಕಾರ ವಿನೋದಕುಮಾರ ಶುಕ್ಲಾ ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಛತ್ತೀಸ್‌ಗಢದ ಮೊದಲ ಲೇಖಕರಾಗಿದ್ದಾರೆ. ಶುಕ್ಲಾ ಅವರನ್ನು ಸಮಕಾಲೀನ ಹಿಂದಿ ಸಾಹಿತ್ಯದಲ್ಲಿ ಅತ್ಯಂತ ವಿಶಿಷ್ಟವಾದ ಧ್ವನಿ … Continued

ಛತ್ತೀಸ​ಗಢದಲ್ಲಿ ಎರಡು ಪ್ರತ್ಯೇಕ ಎನ್​ಕೌಂಟರ್​ ; 22 ನಕ್ಸಲರ ಹತ್ಯೆ

ರಾಯ್ಪುರ:  ಎಡಪಂಥೀಯ ಉಗ್ರವಾದದ ವಿರುದ್ಧದ ಬೃಹತ್ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಗುರುವಾರ (ಮಾರ್ಚ್ 20) ಛತ್ತೀಸ್‌ಗಢದ ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 26 ನಕ್ಸಲರನ್ನು ಕೊಂದಿವೆ. ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ 18 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಒಬ್ಬ ಪೊಲೀಸ್ ಜವಾನ ಕೂಡ … Continued

ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ ಬಾಘೇಲ್ ಮನೆಯಲ್ಲಿ ಶೋಧ ನಡೆಸಿದ್ದಕ್ಕೆ ಇಡಿ (ED) ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಗುಂಪು…!

ನವದೆಹಲಿ: ಆಪಾದಿತ ಮದ್ಯ ಹಗರದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಪುತ್ರ ತನಿಖೆ ಎದುರಿಸುತ್ತಿದ್ದು, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಅವರ ನಿವಾಸದಲ್ಲಿ ಶೋಧ ನಡೆಸಿದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮೇಲೆ ಜನರ ಗುಂಪೊಂದು ದಾಳಿ ನಡೆಸಿದೆ. ಸೋಮವಾರ ಮುಂಜಾನೆ, ಇಡಿಯು ಆಪಾದಿತ ಮದ್ಯ ಹಗರಣದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಬೂಪೇಶ … Continued

ಎನ್‌ ಕೌಂಟರ್‌ನಲ್ಲಿ 31 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲೀಯರೊಂದಿಗಿನ ಎನ್‌ಕೌಂಟರ್‌ನಲ್ಲಿ 31 ನಕ್ಸಲೀಯರು ಹತರಾಗಿದ್ದಾರೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಹತ್ಯೆಯಾದ ಇಬ್ಬರು ಭದ್ರತಾ ಸಿಬ್ಬಂದಿಗಳಲ್ಲಿ ಒಬ್ಬರು ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಗಾರ್ಡ್‌ಗೆ ಸೇರಿದವರು ಮತ್ತು ಇನ್ನೊಬ್ಬರು ವಿಶೇಷ ಕಾರ್ಯಪಡೆಗೆ ಸೇರಿದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. … Continued

ಎನ್‌ ಕೌಂಟರ್‌ನಲ್ಲಿ 12 ಮಾವೋವಾದಿಗಳ ಹತ್ಯೆ , ಇಬ್ಬರು ಯೋಧರು ಹುತಾತ್ಮ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 12 ಮಾವೋವಾದಿಗಳು ಹತರಾಗಿದ್ದಾರೆ, ಇದೇವೇಳೆ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಪೊಲೀಸಗಗ ಅಧಿಕಾರಿಯೊಬ್ಬರು ಭಾನುವಾರ ಬೆಳಿಗ್ಗೆ ತಿಳಿಸಿದ್ದಾರೆ. ಉದ್ಯಾನದ ನಿರ್ದಿಷ್ಟ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳ ಜಂಟಿ ತಂಡವು ಸ್ಥಳಕ್ಕೆ ತೆರಳಿದ ನಂತರ … Continued

ಕರಡಿ ದಾಳಿಗೆ ಅಪ್ಪ-ಮಗ ಸಾವು : ಅರಣ್ಯಾಧಿಕಾರಿ ಮೇಲೆ ಕರಡಿಯ ಭೀಕರ ದಾಳಿ ವೀಡಿಯೊ ವೈರಲ್

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಕಟ್ಟಿಗೆ ತರಲು ಕಾಡಿಗೆ ತೆರಳಿದ್ದ ತಂದೆ-ಮಗನ ಮೇಲೆ ಕೋಪಗೊಂಡ ಕರಡಿ ಮಾರಣಾಂತಿಕವಾಗಿ ದಾಳಿ ಮಾಡಿ ಕೊಂದುಹಾಕಿದೆ. ಸುಕ್ಲಾಲ್ ದರ್ರೋ (45) ಮತ್ತು ಅಜ್ಜು ಕುರೇಟಿ (22) ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ಕರಡಿ ದಾಳಯಿಂದ ಸಾವಿಗೀಡಾಗಿದ್ದಾರೆ. ಒಡಿಶಾ-ಛತ್ತೀಸ್‌ಗಢ ಗಡಿಯಲ್ಲಿರುವ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ದಂಗರಕ್ತ ಗ್ರಾಮದ ಬಳಿಯ ಜೆಲಂಕಾಸ ಅರಣ್ಯದಲ್ಲಿ ಈ … Continued