ಎಸ್‌ಐಆರ್ : ಚುನಾವಣಾ ಆಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿ ಸಿಜೆಐಗೆ ಪತ್ರ ಬರೆದ 23 ರಾಜಕೀಯ ಪಕ್ಷಗಳು

ನವದೆಹಲಿ: ದೇಶದ ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ ಹಸ್ತಕ್ಷೇಪ ನಡೆಯುತ್ತಿದ್ದು, ಅನೇಕ ಸಂದರ್ಭಗಳಲ್ಲಿ ಚುನಾವಣಾ ಫಲಿತಾಂಶಗಳು ಜನರ ನೈಜ ಜನಾದೇಶವನ್ನು ಪ್ರತಿಬಿಂಬಿಸುತ್ತಿಲ್ಲ ಎಂದು ಆರೋಪಿಸಿ ವಿಪಕ್ಷಗಳ ಒಕ್ಕೂಟವು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ಅವರಿಗೆ ಪತ್ರ ಬರೆದಿವೆ. ಈ ಜಂಟಿ ಪತ್ರಕ್ಕೆ 23 ರಾಜಕೀಯ ಪಕ್ಷಗಳು ಮತ್ತು ಒಬ್ಬ ಸ್ವತಂತ್ರ ಸಂಸದರು ಸಹಿ ಹಾಕಿದ್ದಾರೆ ಎಂದು … Continued

ಭಾರತದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ ಅವರು ಸೋಮವಾರ ಭಾರತದ ೫೩ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನಂತರ ಈ ಹುದ್ದೆಯನ್ನು ವಹಿಸಿಕೊಂಡಿರುವ ನ್ಯಾಯಮೂರ್ತಿ ಸೂರ್ಯಕಾಂತ ಅವರು ಸುಮಾರು ೧೫ ತಿಂಗಳುಗಳ ಕಾಲ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ಫೆಬ್ರವರಿ ೯, ೨೦೨೭ ರಂದು ನಿವೃತ್ತರಾಗಲಿದ್ದಾರೆ. … Continued

ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಸೂರ್ಯಕಾಂತ ನೇಮಕ

ನವದೆಹಲಿ: ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ (CJI) ಆಗಿ ನೇಮಕ ಮಾಡಲು ಕೇಂದ್ರ ಸರ್ಕಾರವು ಗುರುವಾರ ಒಪ್ಪಿಗೆ ನೀಡಿದೆ. ಅವರು ನವೆಂಬರ್ 24 ರಿಂದ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಕೇಂದ್ರ ಕಾನೂನು ಸಚಿವರಾದ ಅರ್ಜುನರಾಮ ಮೇಘವಾಲ್ ಅವರು ‘ಎಕ್ಸ್’ (X) ಸಾಮಾಜಿಕ ಜಾಲತಾಣದ ಮೂಲಕ ಈ ವಿಷಯವನ್ನು ಪ್ರಕಟಿಸಿದ್ದಾರೆ. … Continued

ಶೂ ಎಸೆಯಲು ಯತ್ನಿಸಿದ ಘಟನೆ : ಸಿಜೆಐ ಗವಾಯಿ ಜೊತೆ ಮಾತನಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರೊಂದಿಗೆ ಮಾತನಾಡಿ, ಸೋಮವಾರ ಮುಂಜಾನೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಅವರ ಮೇಲೆ ನಡೆದ ದಾಳಿಯನ್ನು ಖಂಡಿಸಿದರು. ಈ ಘಟನೆ “ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರೊಂದಿಗೆ ಮಾತನಾಡಿದ್ದೇನೆ. ಸುಪ್ರೀಂ … Continued

ಜೀವನಾಂಶಕ್ಕೆ 12 ಕೋಟಿ ರೂ., ಬಿಎಂಡಬ್ಲ್ಯು ಕಾರ್‌, ಮುಂಬೈನಲ್ಲಿ ಮನೆ ಬೇಕೆಂದು ಬೇಡಿಕೆ ಇಟ್ಟ ಮಹಿಳೆಗೆ ನೀವೇಕೆ ಸಂಪಾದಿಸಬಾರದು ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: “ಆಪ್ ಇತನಿ ಪಡಿ ಲಿಖಿ ಹೈ. ಆಪಕೋ ಖುದ್ ಮಾಂಗನಾ ನಹಿ ಚಾಹಿಯೇ, ಆಪಕೋ ಖುದ್ ಕಾಮ ಕೆ ಖಾನಾ ಚಾಹಿಯೇ” (ನೀವು ಉತ್ತಮ ವಿದ್ಯಾವಂತರು; ನೀವು ವಸ್ತುಗಳನ್ನು ಕೇಳಬಾರದು, ಬದಲಿಗೆ ನಿಮ್ಮ ಜೀವನೋಪಾಯಕ್ಕೆ ಸಂಪಾದಿಸಿಕೊಳ್ಳಬೇಕು) ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ವೈವಾಹಿಕ ವಿಚ್ಛೇದನ ಪ್ರಕರಣದಲ್ಲಿ ತನ್ನ ಪರಿತ್ಯಕ್ತ ಪತಿಯಿಂದ ಭಾರಿ ಮೊತ್ತದ … Continued

ನ್ಯಾಯಮೂರ್ತಿ ಬಿ.ಆರ್. ಗವಾಯಿ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ ; ಮೇ 14 ರಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಬುಧವಾರ ಕೇಂದ್ರ ಕಾನೂನು ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಭೂಷಣ ರಾಮಕೃಷ್ಣ ಗವಾಯಿ ಅವರನ್ನು ಮುಂದಿನ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸುವಂತೆ ಶಿಫಾರಸು ಮಾಡಿದ್ದಾರೆ. ನ್ಯಾಯಮೂರ್ತಿ ಗವಾಯಿ ಅವರು ಮೇ 14 ರಂದು ಸುಪ್ರೀಂ ಕೋರ್ಟ್‌ನ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ … Continued

ನಗದು ಪತ್ತೆ ಪ್ರಕರಣ: ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ಅಪಾರ ಪ್ರಮಾಣದ ಹಣದ ರಾಶಿ ಪತ್ತೆಯಾಗಿದೆ ಎಂಬ ಆರೋಪವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ … Continued

ಸುಪ್ರೀಂ ಕೋರ್ಟ್ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ ಖನ್ನಾ ಪ್ರಮಾಣ ವಚನ

ನವದೆಹಲಿ: ಸುಪ್ರೀಂ ಕೋರ್ಟ್ 51ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾಯಮೂರ್ತಿ ಸಂಜೀವ ಖನ್ನಾ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ನ್ಯಾಯಮೂರ್ತಿ ಖನ್ನಾ ಅವರು ಸಿಜೆಐ ಆಗಿ 183 ದಿನಗಳ ಕಾಲ (ಸುಮಾರು … Continued

ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ ಖನ್ನಾ ನೇಮಕ

ನವದೆಹಲಿ: ನ್ಯಾಯಮೂರ್ತಿ ಸಂಜೀವ  ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ಅಧಿಸೂಚನೆ ಹೊರಡಿಸಿದ್ದಾರೆ. ಸಿಜೆಐ ಚಂದ್ರಚೂಡ್‌ ಅವರು ಶಿಫಾರಸ್ಸು ಮಾಡಿದ್ದ ನ್ಯಾ. ಸಂಜೀವ್‌ ಖನ್ನಾ ಅವರ ಹೆಸರನ್ನು ಕೇಂದ್ರ ಸರ್ಕಾರವು ಅನುಮೋದಿಸಿದ ನಂತರ ರಾಷ್ಟ್ರಪತಿ ಭವನದಿಂದ ಅಧಿಕೃತವಾಗಿ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. ಕಾನೂನು ಮತ್ತು ನ್ಯಾಯ … Continued

ನಿಮ್ಮನ್ನು ಕೋರ್ಟ್ ನಿಂದ ಹೊರಗೆ ಕಳಿಸಬೇಕಾಗ್ತದೆ ; ಹಿರಿಯ ವಕೀಲರ ಮೇಲೆ ಗರಂ ಆದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ನವದೆಹಲಿ: ಮಂಗಳವಾರ ನಡೆದ ನೀಟ್‌ ಯುಜಿ (NEET-UG) ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಸುಪ್ರೀಂ ಕೋರ್ಟ್‌ನಲ್ಲಿರುವ ಭದ್ರತಾ ಸಿಬ್ಬಂದಿಗೆ ಹಿರಿಯ ವಕೀಲರನ್ನು ನ್ಯಾಯಾಲಯದಿಂದ ಹೊರಗೆ ಕಳುಹಿಸುವಂತೆ ಆದೇಶ ನೀಡಿದರು. ನ್ಯಾಯಮೂರ್ತಿಗಳು ಕಠೋರವಾಗಿ ಎಚ್ಚರಿಸಿದ ನಂತರ ವಕೀಲರು ಸ್ವಯಂಪ್ರೇರಿತರಾಗಿ ನ್ಯಾಯಾಲಯದಿಂದ ಹೊರನಡೆದರು. ನೀಟ್-ಯುಜಿ ವಿಚಾರಣೆ ವೇಳೆ ಮತ್ತೊಬ್ಬ ಮತ್ತೊಬ್ಬ ವಕೀಲರ ವಾದ ಮಂಡನೆಗೆ … Continued