ಸಚಿವರು, ಶಾಸಕರ ವೇತನ ದ್ವಿಗುಣ ಸಾಧ್ಯತೆ : ವೇತನ. ಭತ್ಯೆ ಹೆಚ್ಚಳಕ್ಕೆ ತಿದ್ದುಪಡಿ ಮಸೂದೆ ಸಿದ್ಧ

ಬೆಂಗಳೂರು: ಕರ್ನಾಟಕದ ಚುನಾಯಿತ ಪ್ರತಿನಿಧಿಗಳು ಶೀಘ್ರದಲ್ಲೇ ಎರಡು ಪಟ್ಟು ಹೆಚ್ಚು ಸಂಬಳ ಪಡೆಯಲಿದ್ದಾರೆ, ಕರಡು ಮಸೂದೆಯು ಮುಖ್ಯಮಂತ್ರಿ, ಮಂತ್ರಿಗಳು ಮತ್ತು ಶಾಸಕರಿಗೆ 100%ರಷ್ಟು ವೇತನ ಹೆಚ್ಚಳವನ್ನು ಪ್ರಸ್ತಾಪಿಸುತ್ತದೆ. ಪಿಂಚಣಿಗಳು ಮತ್ತು ವಿಮಾನ/ರೈಲು ಪ್ರಯಾಣ ಭತ್ಯೆಗಳಲ್ಲಿ ಶೇಕಡಾ 50 ರಷ್ಟು ಹೆಚ್ಚಳದಿಂದ ಹಿಡಿದು ಇತರ ಸೌಲಭ್ಯಗಳ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಶಾಸಕಾಂಗದ ವೇತನಗಳು, ಪಿಂಚಣಿಗಳು … Continued

ಸಿಎಂ ಯಾರೆಂದು ನಿರ್ಧರಿಸುವುದು ಹೈಕಮಾಂಡ್‌ ; ಸಿದ್ದರಾಮಯ್ಯ

ಬೆಂಗಳೂರು: ಡಿಕೆ ಶಿವಕುಮಾರ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ.. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ … Continued

ಡಿಕೆ ಶಿವಕುಮಾರ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ವೀರಪ್ಪ ಮೊಯ್ಲಿ

ಉಡುಪಿ : ಡಿಕೆ ಶಿವಕುಮಾರ ಅವರಿಗೆ ಮೊದಲ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು. ಇವತ್ತು ಅವರು ಯಶಸ್ವಿ ನಾಯಕರಾಗಿ ಬೆಳೆದಿದ್ದಾರೆ. ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ … Continued

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಯಾದಗಿರಿ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಜೋರಾಗಿ ನಡೆದಿವೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೆಂಬಲಿಗರ ಮಧ್ಯೆ ವಾಗ್ಯುದ್ಧಕ್ಕೂ ಕಾರಣವಾಗಿದೆ. ಹೈಕಮಾಂಡ್‌ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ಅವರ ವಿಚಾರದಲ್ಲಿ  ಅಧಿಕಾರ ಹಂಚಿಕೆ ಸೂತ್ರ ಸಿದ್ಧಪಡಿಸಿದೆ ಎನ್ನಲಾಗಿದೆ.ಕಳೆದ ದಿನಗಳಿಂದ ಡಿ.ಕೆ. ಶಿವಕುಮಾರ ಅವರ ಬಣದ ನಾಯಕರು ಮುಖ್ಯಮಂತ್ರಿಯನ್ನು … Continued

ದೆಹಲಿ ಸಿಎಂ ಆಗಿ ಇಂದು ರೇಖಾ ಗುಪ್ತಾ ಪ್ರಮಾಣ ವಚನ ; ಸಂಪುಟದಲ್ಲಿ 6 ಮಂದಿ ಸಚಿವರು

ನವದೆಹಲಿ : ಬಿಜೆಪಿ ನಾಯಕರಾದ ಪರ್ವೇಶ ವರ್ಮಾ, ಕಪಿಲ್ ಮಿಶ್ರಾ, ಮಂಜಿಂದರ್ ಸಿಂಗ್ ಸಿರ್ಸಾ ಮತ್ತು ಆಶಿಶ್ ಸೂದ್ ಸೇರಿದಂತೆ ಆರು ಮಂದಿ ಗುರುವಾರ ರೇಖಾ ಗುಪ್ತಾ ನೇತೃತ್ವದ ದೆಹಲಿಯ ಬಿಜೆಪಿ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಸಂಜೆ ಇಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ … Continued

ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ

ನವದೆಹಲಿ : ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಪರ್ವೇಶ ವರ್ಮಾ ಉಪಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿಯಲ್ಲಿ ಬುಧವಾರ ನಡೆದ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಇಬ್ಬರೂ ನಾಯಕರ ಹೆಸರನ್ನು ಘೋಷಿಸಲಾಯಿತು.ಪ್ರಸ್ತುತ ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳ ಪೈಕಿ ರೇಖಾ ಗುಪ್ತಾ ಅವರು ಏಕೈಕ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿ ಚುನಾವಣೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ … Continued

ಮಣಿಪುರ : ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ

ಗುವಾಹತಿ : ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಎರಡು ವರ್ಷಗಳ ನಂತರ ಅವರು ರಾಜೀನಾಮೆ ನೀಡಿದ್ದಾರೆ. ಅವರ ನಾಯಕತ್ವದ ವಿರುದ್ಧ ರಾಜ್ಯ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ ಶಮನಗೊಳಿಸಲು ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಸರ್ಕಾರವು ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮತ್ತು ಬಹುಮತ ಪರೀಕ್ಷೆಯ … Continued

ಚಂದ್ರಬಾಬು ನಾಯ್ಡು ದೇಶದ ಅತಿ ಶ್ರೀಮಂತ ಸಿಎಂ ; ಮಮತಾ ಬ್ಯಾನರ್ಜಿ ಬಡ ಸಿಎಂ ; ಸಿದ್ದರಾಮಯ್ಯ ಎಷ್ಟನೇ ಸಿರಿವಂತ ಸಿಎಂ ಗೊತ್ತೆ..?

 ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ. ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ.ಗಳೊಂದಿಗೆ ಅತ್ಯಂತ ಬಡವರು ಎಂದು ಸೋಮವಾರ ಬಿಡುಗಡೆಯಾದ ಅಸೋಸಿಯೇಷನ್ ​​​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ. ವಿವಿಧ ರಾಜ್ಯಗಳು ಮತ್ತು … Continued

ವಿಶ್ವ ಚೆಸ್ ಚಾಂಪಿಯನ್‌ ಶಿಪ್ ಪ್ರಶಸ್ತಿ ಗೆದ್ದ ಗುಕೇಶಗೆ 5 ಕೋಟಿ ರೂ.ಬಹುಮಾನ ಘೋಷಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಭಾರತದ ಈ ಯುವ ಗ್ರ್ಯಾಂಡ್ ಮಾಸ್ಟರ್ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಕೇವಲ 18ನೇ ವಯಸ್ಸಿನಲ್ಲಿ ಈ ಸಾಧನೆ ಮಾಡುವ ಮೂಲಕ ಗುಕೇಶ ಅವರು ಅತ್ಯಂತ ಕಿರಿಯ ವಯಸ್ಸಿನ ಚೆಸ್‌ ವಿಶ್ವ ಚಾಂಪಿಯನ್ ಆಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಐತಿಹಾಸಿಕ ಸಾಧನೆಗೆ ತಮಿಳುನಾಡು ಸರ್ಕಾರ ಗುಕೇಶ ಅವರಿಗೆ 5 … Continued

ಇದು ಅಧಿಕೃತ ; ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ : ನಾಳೆ ಪ್ರಮಾಣ ವಚನ

ಮುಂಬೈ: ಮುಂಬೈನ ಆಜಾದ್ ಮೈದಾನದಲ್ಲಿ ನಾಳೆ ಗುರುವಾರ (ಡಿಸೆಂಬರ್‌ 5) ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ನಾಯಕತ್ವವು ಬುಧವಾರ ಮುಖ್ಯಮಂತ್ರಿ ಹುದ್ದೆಗೆ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಿದೆ, ಯಾರು ಉನ್ನತ ಹುದ್ದೆಯನ್ನು ಪಡೆಯುತ್ತಾರೆ ಎಂಬ ದೀರ್ಘಾವಧಿಯ ಕುತೂಹಲಕ್ಕೆ ಈ ಮೂಲಕ ತೆರೆ ಬಿದ್ದಿದೆ. ಅವರ ಹೆಸರನ್ನು ಹೊಸದಾಗಿ ಆಯ್ಕೆಯಾದ ಶಾಸಕರ … Continued