ಮಣಿಪುರ ಹಿಂಸಾಚಾರದಲ್ಲಿ 60 ಮಂದಿ ಸಾವು, 231 ಮಂದಿಗೆ ಗಾಯ, 1,700 ಮನೆಗಳಿಗೆ ಬೆಂಕಿ: ಸಿಎಂ ಬಿರೇನ್ ಸಿಂಗ್

ಇಂಫಾಲ: ಮೇ 3 ರಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ 1,700 ಮನೆಗಳು ಸುಟ್ಟು ಭಸ್ಮವಾಗಿದ್ದು, ಮಹಿಳೆಯರು ಸೇರಿದಂತೆ ಕನಿಷ್ಠ 60 ಜನರು ಸಾವಿಗೀಡಾಗಿದ್ದಾರೆ ಮತ್ತು 231 ಜನರು ಗಾಯಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಸೋಮವಾರ ಹೇಳಿದ್ದಾರೆ. ರಾಜ್ಯ ರಾಜಧಾನಿ ಇಂಫಾಲದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪುರದ ಅಶಾಂತಿ “ಅತ್ಯಂತ ದುರದೃಷ್ಟಕರ” ಎಂದು ಬಣ್ಣಿಸಿದರು. … Continued