ಬಿಹಾರದಲ್ಲಿ ನಿತೀಶ ಆಡಳಿತ ಅಂತ್ಯ : ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಸಿಎಂ ಆಗಿ ಆಯ್ಕೆ..!

ಪಾಟ್ನಾ: ಬಿಹಾರ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಯ ನಾಯಕರೊಬ್ಬರು ಮುಖ್ಯಮಂತ್ರಿ ಪಟ್ಟಕ್ಕೇರುವುದು ಈಗ ಅಧಿಕೃತಗೊಂಡಿದೆ. ಬಿಜೆಪಿಯ ಹಿರಿಯ ನಾಯಕ ಸಾಮ್ರಾಟ ಚೌಧರಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಮೂಲಗಳ ಪ್ರಕಾರ, ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭವು ಬುಧವಾರ (ಏ.೧೫) ನಡೆಯುವ ಸಾಧ್ಯತೆಯಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಪಾಟ್ನಾಕ್ಕೆ ಭೇಟಿ … Continued

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ ರಾಜೀನಾಮೆ ಸಾಧ್ಯತೆ : ಪುತ್ರನ ರಾಜಕೀಯ ಪ್ರವೇಶಕ್ಕೆ ತಯಾರಿ, ನಿಶಾಂತಗೆ ಉಪಮುಖ್ಯಮಂತ್ರಿ ಪಟ್ಟ ?

ನವದೆಹಲಿ: ಕಳೆದ ವರ್ಷ ಹತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಿತೀಶಕುಮಾರ್ ತಮ್ಮ ಹುದ್ದೆಯಿಂದ ಕೆಳಗಿಳಿಯುತ್ತಿದ್ದಾರೆ ಎಂದು ವರದಿಯಾಗಿದೆ. ನಿತೀಶ ಅವರು ತಮ್ಮ ಮಗ ನಿಶಾಂತ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ನಡೆಯ ಭಾಗ ಇದು ಎಂದು ಹೇಳಲಾಗುತ್ತಿದೆ. ನಿತೀಶ ಅವರು ಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಗೆ ಹಸ್ತಾಂತರಿಸಿ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ವರದಿಯಾಗಿದೆ. ನಿಶಾಂತ ಅವರ … Continued

ಮಣಿಪುರದ ಮುಖ್ಯಮಂತ್ರಿಯಾಗಿ ಯುಮ್ನಾಮ್ ಖೇಮಚಂದ್‌ ಸಿಂಗ್ ಪ್ರಮಾಣ ವಚನ ಸ್ವೀಕಾರ

ಇಂಫಾಲ: ಯುಮ್ನಾಮ್ ಖೇಮಚಂದ್ ಸಿಂಗ್ ಬುಧವಾರ ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಲೋಕ ಭವನದಲ್ಲಿ ರಾಜ್ಯಪಾಲ ಅಜಯ ಭಲ್ಲಾ ಅವರು ಪ್ರಮಾಣ ವಚನ ಬೋಧಿಸಿದರು. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಖೇಮಚಂದ್ ಸಿಂಗ್ ಅವರನ್ನು ಬುಧವಾರ ನವದೆಹಲಿಯಲ್ಲಿ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಸಭೆಯಲ್ಲಿ ಪಕ್ಷದ ಕೇಂದ್ರ ವೀಕ್ಷಕ ತರುಣ್ … Continued

ಐ-ಪ್ಯಾಕ್‌ ಪ್ರಕರಣ : ಮಮತಾ ಬ್ಯಾನರ್ಜಿ ವಿರುದ್ಧ ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಇ.ಡಿ. ಮೊರೆ

ನವದೆಹಲಿ: ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ (I-PAC) ಕಚೇರಿಗಳ ಮೇಲೆ ನಡೆದ ದಾಳಿಯ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯ ಸರ್ಕಾರಿ ಅಧಿಕಾರಿಗಳು ತನಿಖೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED) ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಕಲ್ಲಿದ್ದಲು ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐ-ಪ್ಯಾಕ್ ಕಚೇರಿಗಳಲ್ಲಿ ಇಡಿ ಶೋಧ … Continued

ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ ; ಯತ್ನಾಳ ಭವಿಷ್ಯ

ಬೆಳಗಾವಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ಬುಧವಾರ ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ. ಈಗ ಮುಖ್ಯಮಂತ್ರಿ ಹುದ್ದೆಗೆ ಲಾಬಿ ಮಾಡುತ್ತಿರುವವರಿಗೆ ಅದು ಸಿಗುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಮುಂದಿನ ಮುಖ್ಯಮಂತ್ರಿ … Continued

ಸಚಿವರು, ಶಾಸಕರ ವೇತನ ದ್ವಿಗುಣ ಸಾಧ್ಯತೆ : ವೇತನ. ಭತ್ಯೆ ಹೆಚ್ಚಳಕ್ಕೆ ತಿದ್ದುಪಡಿ ಮಸೂದೆ ಸಿದ್ಧ

ಬೆಂಗಳೂರು: ಕರ್ನಾಟಕದ ಚುನಾಯಿತ ಪ್ರತಿನಿಧಿಗಳು ಶೀಘ್ರದಲ್ಲೇ ಎರಡು ಪಟ್ಟು ಹೆಚ್ಚು ಸಂಬಳ ಪಡೆಯಲಿದ್ದಾರೆ, ಕರಡು ಮಸೂದೆಯು ಮುಖ್ಯಮಂತ್ರಿ, ಮಂತ್ರಿಗಳು ಮತ್ತು ಶಾಸಕರಿಗೆ 100%ರಷ್ಟು ವೇತನ ಹೆಚ್ಚಳವನ್ನು ಪ್ರಸ್ತಾಪಿಸುತ್ತದೆ. ಪಿಂಚಣಿಗಳು ಮತ್ತು ವಿಮಾನ/ರೈಲು ಪ್ರಯಾಣ ಭತ್ಯೆಗಳಲ್ಲಿ ಶೇಕಡಾ 50 ರಷ್ಟು ಹೆಚ್ಚಳದಿಂದ ಹಿಡಿದು ಇತರ ಸೌಲಭ್ಯಗಳ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಶಾಸಕಾಂಗದ ವೇತನಗಳು, ಪಿಂಚಣಿಗಳು … Continued

ಸಿಎಂ ಯಾರೆಂದು ನಿರ್ಧರಿಸುವುದು ಹೈಕಮಾಂಡ್‌ ; ಸಿದ್ದರಾಮಯ್ಯ

ಬೆಂಗಳೂರು: ಡಿಕೆ ಶಿವಕುಮಾರ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ.. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ … Continued

ಡಿಕೆ ಶಿವಕುಮಾರ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ವೀರಪ್ಪ ಮೊಯ್ಲಿ

ಉಡುಪಿ : ಡಿಕೆ ಶಿವಕುಮಾರ ಅವರಿಗೆ ಮೊದಲ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು. ಇವತ್ತು ಅವರು ಯಶಸ್ವಿ ನಾಯಕರಾಗಿ ಬೆಳೆದಿದ್ದಾರೆ. ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ … Continued

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಯಾದಗಿರಿ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಜೋರಾಗಿ ನಡೆದಿವೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೆಂಬಲಿಗರ ಮಧ್ಯೆ ವಾಗ್ಯುದ್ಧಕ್ಕೂ ಕಾರಣವಾಗಿದೆ. ಹೈಕಮಾಂಡ್‌ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ಅವರ ವಿಚಾರದಲ್ಲಿ  ಅಧಿಕಾರ ಹಂಚಿಕೆ ಸೂತ್ರ ಸಿದ್ಧಪಡಿಸಿದೆ ಎನ್ನಲಾಗಿದೆ.ಕಳೆದ ದಿನಗಳಿಂದ ಡಿ.ಕೆ. ಶಿವಕುಮಾರ ಅವರ ಬಣದ ನಾಯಕರು ಮುಖ್ಯಮಂತ್ರಿಯನ್ನು … Continued

ದೆಹಲಿ ಸಿಎಂ ಆಗಿ ಇಂದು ರೇಖಾ ಗುಪ್ತಾ ಪ್ರಮಾಣ ವಚನ ; ಸಂಪುಟದಲ್ಲಿ 6 ಮಂದಿ ಸಚಿವರು

ನವದೆಹಲಿ : ಬಿಜೆಪಿ ನಾಯಕರಾದ ಪರ್ವೇಶ ವರ್ಮಾ, ಕಪಿಲ್ ಮಿಶ್ರಾ, ಮಂಜಿಂದರ್ ಸಿಂಗ್ ಸಿರ್ಸಾ ಮತ್ತು ಆಶಿಶ್ ಸೂದ್ ಸೇರಿದಂತೆ ಆರು ಮಂದಿ ಗುರುವಾರ ರೇಖಾ ಗುಪ್ತಾ ನೇತೃತ್ವದ ದೆಹಲಿಯ ಬಿಜೆಪಿ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಸಂಜೆ ಇಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ … Continued