ಚಿಂತಾಮಣಿ | ಕೃಷಿ ಹೊಂಡದಲ್ಲಿ ವಿದ್ಯುತ್​ ಸ್ಪರ್ಶಿಸಿ ಮೂವರು ಯುವಕರು ಸಾವು

ಚಿಕ್ಕಬಳ್ಳಾಪುರ : ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶದಿಂದ ಮೂವರು ಯುವಕರು ಸಾವಿಗೀಡಾದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕೆದಿರೇನಹಳ್ಳಿಯಲ್ಲಿ ನಡೆದಿದೆ. ಎಂದು ವರದಿಯಾಗಿದೆ. ಚಿಂತಾಮಣಿ ತಾಲೂಕಿನ ಮುಂತಕೆದಿರೇನಹಳ್ಳಿಯ ಕೃಷಿ ಹೊಂಡದಲ್ಲಿ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಹೊಂಡದಲ್ಲಿ ನೀರೆತ್ತುತ್ತಿದ್ದ 22–28 ವರ್ಷದ ಮೂವರು ವಿದ್ಯುತ್‌ ಸ್ಪರ್ಷದಿಂದ ಸಾವಿಗೀಡಾಗಿದ್ದಾರೆ ಎಂದು … Continued

ಚಿಕ್ಕಬಳ್ಳಾಪುರ | ಮಾರಕಾಸ್ತ್ರಗಳಿಂದ ಕೊಚ್ಚಿ ನಡುರಸ್ತೆಯಲ್ಲೇ ಜೆಡಿಎಸ್​ ಮುಖಂಡನ ಭೀಕರ ಹತ್ಯೆ

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನನ್ನು ರಸ್ತೆ ಮಧ್ಯದಲ್ಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ವೆಂಕಟೇಶ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಅವರು ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಔಷಧದ ಅಂಗಡಿಯಿಂದ ಸ್ಕೂಟಿ ಮೇಲೆ ಮನೆಗೆ ಹೊರಟಿದ್ದರು. ಆಗ ದಾರಿಗೆ … Continued

ರಾಜ್ಯದಲ್ಲಿ ಅತಿವೃಷ್ಟಿ , ದೇಶದಲ್ಲಿ ಶುಭಕ್ಕಿಂತ ಅಶುಭಗಳೇ ಹೆಚ್ಚು : ಕೋಡಿಮಠ ಶ್ರೀಗಳ ಭವಿಷ್ಯ

ಚಿಕ್ಕಬಳ್ಳಾಪುರ: ಈಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಕ್ರೋಧಿ ನಾಮ ಸಂವತ್ಸರದಲ್ಲಿ ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು … Continued

ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏ.20ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಎರಡು ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲಕುಮಾರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರ ಮತ್ತು ಕೋಲಾರ ಸೇರಿ ಚಿಕ್ಕಬಳ್ಳಾಪುರದಲ್ಲಿ ಸಭೆ, ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ … Continued

ಮಾಲೂರು ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ಇ.ಡಿ. ದಾಳಿ

ಕೋಲಾರ : ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (Kochimul) ಕೋಚಿಮುಲ್ ಅಧ್ಯಕ್ಷ ಹಾಗೂ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ (KY Nanjegowda) ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ನಂಜೇಗೌಡ ಅವರಿಗೆ ಸೇರಿದ ನಾಲ್ಕು ಕಡೆಗಳಲ್ಲಿ ಇ.ಡಿ. ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದಲ್ಲಿರುವ … Continued

ಪ್ರವಾಸದ ವೇಳೆ ವಿದ್ಯಾರ್ಥಿ ಜೊತೆ ರೊಮ್ಯಾಂಟಿಕ್ ಫೋಟೋಶೂಟ್ : ಮುಖ್ಯ ಶಿಕ್ಷಕಿ ಅಮಾನತು​

ಚಿಕ್ಕಬಳ್ಳಾಪುರ: ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಆಗಿ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವೀಡಿಯೊ ವೈರಲ್ ಆದ ಬೆನ್ನಲ್ಲೇ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ … Continued

ಚಿಕ್ಕಬಳ್ಳಾಪುರ : ಕೆರೆಗೆ ಉರುಳಿ ಬಿದ್ದ ಕಾರು, ನಾಲ್ವರು ಸಾವು

ಚಿಕ್ಕಬಳ್ಳಾಪುರ : ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ಬೈಪಾಸ್ ​ಬಳಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಚಿಕ್ಕಬಳ್ಳಾಪುರ ಬೈಪಾಸ್​ಬಳಿಯ ಅಮಾನಿ ಗೋಪಾಲಕೃಷ್ಣ ಕೆರೆಯ ನೀರಿಗೆ ಕಾರು ಉರುಳಿಬಿದ್ದು ಟ್ಯಾಗೂರು(21), ಪವನ(22), ಆರ್ಯನ್(22), ವಸಂತ(21) ಎಂಬ ನಾಲ್ವರು ಯುವಕರು ಮೃತಪಟ್ಟಿದ್ದಾರೆ ಕಾರು ಬೆಂಗಳೂರಿನಿಂದ ಬಾಗೇಪಲ್ಲಿ ಕಡೆಗೆ ಹೋಗುತ್ತಿದ್ದಾಗ ದುರ್ಘಟನೆ … Continued

ಚಿಕ್ಕಬಳ್ಳಾಪುರದಲ್ಲಿ ಮಾರಕ ಝೀಕಾ ವೈರಸ್ ಪತ್ತೆ

ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರಿನ ಪಕ್ಕದ ಜಿಲ್ಲೆಯಾದ ಚಿಕ್ಕಬಳ್ಳಾಪುರದಲ್ಲಿ ಮಾರಕ ಝೀಕಾ ವೈರಸ್‌ ಪತ್ತೆಯಾಗಿದೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಅಪಾಯಕಾರಿ ಝೀಕಾ ವೈರಸ್ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಝೀಕಾ ವೈರಸ್‌ ಹರಡದಂತೆ ತಡೆಯುವ ಮುಂಜಾಗ್ರತಾ ಕ್ರಮವಾಗಿ ರಾಜ್ಯದ 68 ಕಡೆಗಳಲ್ಲಿನ ಸೊಳ್ಳೆಗಳಲ್ಲಿ ಮಾರಣಾಂತಿಕ ವೈರಸ್‌ … Continued

ಚಿಕ್ಕಬಳ್ಳಾಪುರ : ನಿಂತಿದ್ದ ಟ್ಯಾಂಕರ್‌ಗೆ ಟಾಟಾ ಸುಮೋ ಡಿಕ್ಕಿ ; ಮಗು ಸೇರಿ 13 ಸಾವು

ಚಿಕ್ಕಬಳ್ಳಾಪುರ: ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ 13 ಮಂದಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ಚಿತ್ರಾವತಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಆಂಧ್ರ ಪ್ರದೇಶದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಗುರುವಾರ ಬೆಳಿಗ್ಗೆ 7ರ ಸುಮಾರಿನಲ್ಲಿ ಸಂಭವಿಸಿದೆ. … Continued

ವೀಕೆಂಡ್ ಟ್ರಿಪ್ಪಿಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ಜಲಾಶಯದಲ್ಲಿ ಮುಳುಗಿ ಸಾವು

ಚಿಕ್ಕಬಳ್ಳಾಪುರ: ವೀಕೆಂಡ್‌ನಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದ ವರದಿಯಾಗಿದೆ. ಮೃತರನ್ನು ರಾಧಿಕಾ(19), ಪೂಜಾ (20) ಹಾಗೂ ಇಮ್ರಾನ್ ಖಾನ್(20) ಎಂದು ಗುರುತಿಸಲಾಗಿದೆ. ವೀಕೆಂಡ್ ಎಂದು ಬೆಂಗಳೂರಿನ ಫಾರ್ಮಸಿ ಕಾಲೇಜಿನ ಸುನೀತಾ, ರಾಧಿಕ, ಪೂಜಾ, ವಿಕಾಸ್, ಚನ್ನರಾ, ಇಮ್ರಾನ್ ಖಾನ್ ಎಂಬ ಆರು ವಿದ್ಯಾರ್ಥಿಗಳು … Continued