ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು

ಚಿಕ್ಕಮಗಳೂರು : ಬಾತುಕೋಳಿ ಹಿಡಿಯುವುದಕ್ಕೆ ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಜೆಯಲ್ಲಿ ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮೃತ ಮಕ್ಕಳನ್ನು ಅಬ್ದುಲ್ ರೆಹಮಾನ್ (13), ನಾಯಜ್ (12), ಶಿವಮೊಗ್ಗದ ಮೈದಿಹಾ (9), ಅರಮಾನ್ … Continued

ಮೂಡಿಗೆರೆ : ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ…!

ಚಿಕ್ಕಮಗಳೂರು :  ಮೃತಪಟ್ಟ ಪತಿಯ ಕೊಳೆತ ಶವದೊಂದಿಗೇ ಪತ್ನಿ 10 ದಿನಗಳ ಕಾಲ ಕಳೆದ ಆಘಾತಕಾರಿ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಣಕಲ್‌ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಮಾನಸಿಕ ಅಸ್ವಸ್ಥರಾಗಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಬಾಣಕಲ್ ನಿವಾಸಿ ಸಿರಿಲ್ ಮೋನಿಸ್ (77) ಮತ್ತು ಅವರ ಪತ್ನಿ ಸಿಸಿಲ್ (62) ಮಾತ್ರ ಮನೆಯಲ್ಲಿ … Continued

ಚಿಕ್ಕಮಗಳೂರು : ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತ ಪ್ರದೇಶದಲ್ಲಿ ನಾಪತ್ತೆ

ಚಿಕ್ಕಮಗಳೂರು : ಕೇರಳದಿಂದ 40 ಜನರ ತಂಡದೊಂದಿಗೆ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ  ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ (Mullayanagiri) ಭಾಗದ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ (16) ಎಂದು ಗುರುತಿಸಲಾಗಿದ್ದು, ಕೇರಳದಿಂದ ಬಂದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ … Continued

ಚಿಕ್ಕಮಗಳೂರಲ್ಲಿ ಭರ್ಜರಿ ಮಳೆ ; ಸಿಡಿಲು ಬಡಿದು ಮಹಿಳೆ ಸಾವು

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ. ಈ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಸಿಡಿಲು ಬಡಿದು ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ (65) ಮೃತರು ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ ಅವರು … Continued

ಕೊಪ್ಪ | ಹಲ್ಲುಗಳನ್ನು ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ

ಚಿಕ್ಕಮಗಳೂರು : ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಸಮೀಪದ ಸಾಲುಮರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಿಘ್ನೇಶ (18) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ಕೊಪ್ಪ ಪಟ್ಟಣದ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷದ ಐಟಿಐ ಓದುತ್ತಿದ್ದ ಎನ್ನಲಾಗಿದೆ. … Continued

ಮನ ಮಿಡಿಯುವ ಘಟನೆ ; ಮೃತ ಆನೆ ಕಳೆಬರಕ್ಕೆ ಗೌರವ ಸಲ್ಲಿಸಲು ದೂರದಿಂದ ಬಂದ ಆನೆಗಳ ದೊಡ್ಡ ಹಿಂಡು…!

ಚಿಕ್ಕಮಗಳೂರು : ಪ್ರಾಣಿಗಳಲ್ಲೂ ಭಾವನೆಗಳಿವೆ. ಅವು ಕಷ್ಟ, ಸುಖ, ದುಃಖಗಳಲ್ಲಿ ಒಂದಾಗುತ್ತವೆ. ತಮ್ಮ ಮೂಕ ಭಾಷೆಗಳಲ್ಲಿ ಭಾವನೆಗಳನ್ನು ವ್ಯಕ್ತಪಡಿಸುತ್ತವೆ. ಅದರಲ್ಲಿಯೂ ಆನೆಗಳು ಇನ್ನೂ ಹೆಚ್ಚು ಭಾವುಕ ಜೀವಿಗಳು. ಅವುಗಳು ಯಾವುದೇ ಆನೆಗಳು ಮೃತಪಟ್ಟರೂ ಅದರ ಕಳೆಬರ ಕಂಡರೆ ಅದಕ್ಕೆ ಗೌರವ ಸೂಚಿಸಿಯೇ ಮುಂದಕ್ಕೆ ಸಾಗುತ್ತವೆ ಎಂದು ಹೇಳಾಗುತ್ತಿದೆ. ಇಂಥದ್ದೇ ನಿದರ್ಶನ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ. … Continued

ವೀಡಿಯೊ…| ಚಿಕ್ಕಮಗಳೂರು : ಕರ್ತವ್ಯ ನಿರತ ವೈದ್ಯರ ಮೇಲೆ ಚಪ್ಪಲಿ ಎಸೆದ ಮಹಿಳೆ…!

ಚಿಕ್ಕಮಗಳೂರು: ಚಿಕ್ಕಮಗಳೂರಿನ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರ ಮೇಲೆ ಮಹಿಳೆಯೊಬ್ಬರು ಚಪ್ಪಲಿ ಎಸೆದ ಘಟನೆ ನಡೆದಿದ್ದು,  ಭಾರೀ ಆಕ್ರೋಶ ವ್ಯಕ್ತವಾಗಿದೆ. ಕರ್ತವ್ಯದಲ್ಲಿದ್ದ ವೈದ್ಯರೊಬ್ಬರ ಮೇಲೆ ಮಹಿಳೆಯೊಬ್ಬಳು ಮೊದಲು ಚಪ್ಪಲಿ ಎಸೆದಿದ್ದಾಳೆ. ನಂತರ ಮಹಿಳೆಯೊಂದಿಗಿನ ಗುಂಪೊಂದು ವೈದ್ಯರನ್ನು ಕರ್ತವ್ಯ ನಿರ್ವಹಿಸಲು ತೊಂದರೆ ಪಡಿಸಿ ಅವರ ಅಂಗಿಯ ಕಾಲರ್‌ ಅನ್ನು ಹಿಡುದು ಎಳೆದಾಡಿದೆ ಎಂದು ವರದಿಯಾಗಿದೆ. ಈ ವೀಡಿಯೊ ವೈರಲ್‌ ಆಗಿದ್ದು, … Continued

ಶೃಂಗೇರಿ ಶಾರದಾಂಬಾ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಆಗಸ್ಟ್‌ 15ರಿಂದ ವಸ್ತ್ರ ಸಂಹಿತೆ ಜಾರಿಯಾಗಲಿದ್ದು, ಶಾರದಾಂಬೆಯ ದರ್ಶನ ಹಾಗೂ ಶ್ರೀಗಳ ದರ್ಶನ ಹಾಗೂ ಪಾದಪೂಜೆಗೆ ಆಗಮಿಸುವ ಭಕ್ತರು ನಿಗದಿತ ಉಡುಪುಗಳನ್ನು ಧರಿಸಿ ಬರುವಂತೆ ಸೂಚಿಸಲಾಗಿದೆ. ಈ ಬಗ್ಗೆ ಶೃಂಗೇರಿ ಶಾರದಾ … Continued

ಮೂಡಿಗೆರೆ : ಲಾರಿ – ಓಮ್ನಿ ಕಾರು ನಡುವೆ ಡಿಕ್ಕಿ ; ನಾಲ್ವರು ಸಾವು, ಹಲವರಿಗೆ ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಶುಕ್ರವಾರ ಲಾರಿ ಹಾಗೂ ಓಮ್ನಿ  ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಮಧ್ಯಾಹ್ನ ಬಣಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರು ಚಿತ್ರದುರ್ಗ ಮೂಲದವರು ಎಂದು ಹೇಳಲಾಗಿದೆ. ಕುಟುಂಬವೊಂದು ಎರಡು … Continued

ಒಂದು ಕರು ಹಾಕಿ ಎಂಟು ದಿನದ ನಂತರ ಮತ್ತೊಂದು ಕರುವಿಗೆ ಜನ್ಮ ನೀಡಿದ ಎಮ್ಮೆ…!

ಚಿಕ್ಕಮಗಳೂರು : ಒಂದು ಕರುವಿಗೆ ಜನ್ಮ ನೀಡಿದ್ದ ಎಮ್ಮೆ ಒಂದು ವಾರದ ನಂತರ ಮತ್ತೊಂದು ಕರುವಿಗೆ ಜನ್ಮ ನೀಡಿ ಅಚ್ಚರಿಗೆ ಕಾರಣವಾಗಿದೆ. ಈ ಎಮ್ಮೆ ಒಂದು ಕರು ಹಾಕಿ ಎಂಟು ದಿನಗಳ ನಂತರ ಮತ್ತೊಂದು ಕರುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಶಂಕರಪುರ ಸಮೀಪದ ಮಡುಬ ರಸ್ತೆಯಲ್ಲಿರುವ ಹಳಿಯೂರಿನಲ್ಲಿ ನಡೆದಿದೆ. … Continued