ಮತದಾರರ ಮಾಹಿತಿ ಸಂಗ್ರಹಣೆಯಲ್ಲಿ ಮಾಹಿತಿ ಕಳುವು ಆರೋಪ: ಚಿಲುಮೆ ಸಂಸ್ಥೆ ನಿರ್ದೇಶಕನ ಬಂಧನ

ಬೆಂಗಳೂರು: ಮತದಾರರ ಮಾಹಿತಿ ಸಂಗ್ರಹಣೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಆರೋಪಿತ ಅಕ್ರಮದ ತನಿಖೆ ಚುರುಕುಗೊಳಿಸಿರುವ ಹಲಸೂರು ಗೇಟ್‌ ಠಾಣೆ ಪೊಲೀಸರು, ಚಿಲುಮೆ ಸಂಸ್ಥೆಯ ನಿರ್ದೇಶಕ ಎನ್ನಲಾದ ಕೆಂಪೇಗೌಡ ಎಂಬಾತನನ್ನು ಬಂಧಿಸಿದ್ದಾರೆ. ಕೆಂಪೇಗೌಡ, ಸಂಸ್ಥೆಯ ಆರ್ಥಿಕ ವ್ಯವಹಾರ ನೋಡಿಕೊಳ್ಳುತ್ತಿದ್ದ ಎಂದು ಹೇಳಲಾಗಿದ್ದು, ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ ಸಹೋದರ ಎನ್ನಲಾಗಿದೆ. ಪ್ರಾಥಮಿಕ ಸಾಕ್ಷ್ಯಾಧಾರಗಳು ಲಭ್ಯವಾದ … Continued