ಬೆಂಗಳೂರು ಕಾಲ್ತುಳಿತದ ಘಟನೆ : ನೈತಿಕ ಹೊಣೆ ಹೊತ್ತು ಕೆಎಸ್‌ ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು :  ಬೆಂಗಳೂರಿನ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ ಮತ್ತು ಖಜಾಂಚಿ ಇ ಜೈರಾಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ. ಗುರುವಾರ ರಾತ್ರಿ ಕೆಎಸ್‌ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪದಾಧಿಕಾರಿಗಳಿಗೆ ಹೈಕೋರ್ಟ್‌ ನಿಂದ ದೊಡ್ಡ ರಿಲೀಫ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವಕ್ಕೂ ಮುನ್ನ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳ ವಿರುದ್ಧ ಬಲವಂತ ಕ್ರಮಕೈಗೊಳ್ಳಬಾರದು ಎಂದು ಶುಕ್ರವಾರ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಕೆಎಸ್‌ಸಿಎ ಪದಾಧಿಕಾರಿಗಳು ನ್ಯಾಯಾಲಯದ ವ್ಯಾಪ್ತಿ ತೊರೆಯಬಾರದು ಮತ್ತು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಬೇಕು ಎಂದೂ ಹೈಕೋರ್ಟ್‌ ಸೂಚಿಸಿದೆ. … Continued

ಬೆಂಗಳೂರು ಕಾಲ್ತುಳಿತದ ಘಟನೆ : ಮತ್ತಿಬ್ಬರು ಉನ್ನತ ಹುದ್ದೆಯಲ್ಲಿದ್ದವರ ತಲೆದಂಡ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ. 4ರಂದು ನಡೆದ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ (Bengaluru stampede) ಬೆನ್ನಲ್ಲೇ ಸರ್ಕಾರ ಹಲವು ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ. ಹಾಗೂ ರಾಜ್ಯ ಗುಪ್ತಚರ ಇಲಾಖೆಯ ಎಜಿಡಿಪಿ ಹೆಂತ … Continued

ಬೆಂಗಳೂರು ಕಾಲ್ತುಳಿತ | ಮೃತರಲ್ಲಿ 3 ಹದಿಹರೆಯದವರು, ಒಬ್ಬಳಿಗೆ 13 ವರ್ಷ, ಆರು ಮಂದಿ 20-30 ವರ್ಷದವರು : ಎಲ್ಲರಿಗೂ 40 ವರ್ಷದೊಳಗೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರೆಲ್ಲರೂ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರು, 13 ವರ್ಷದ ಬಾಲಕಿ ಮೃತರಲ್ಲಿ ಅತ್ಯಂತ ಕಿರಿಯಳು. ಮೃತರಲ್ಲಿ ಮೂವರು ಹದಿಹರೆಯದವರು ಮತ್ತು 20-30 ವರ್ಷ ವಯಸ್ಸಿನ ಆರು ಜನ ಸೇರಿದ್ದಾರೆ. 18 ವರ್ಷಗಳ ಕಾಯುವಿಕೆಯ ನಂತರ ಐಪಿಎಲ್ ಟ್ರೋಫಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹುರಿದುಂಬಿಸಲು … Continued

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಹೈಕೋರ್ಟ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರ ಪೀಠವು ರಾಜ್ಯ ಸರ್ಕಾರದಿಂದ ಈ ಬಗ್ಗೆ ವಸ್ತುಸ್ಥಿತಿ … Continued

ವೀಡಿಯೊ..| ಬೆಂಗಳೂರು ಕಾಲ್ತುಳಿತ ; ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಡಿಕೆ ಶಿವಕುಮಾರ

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿದಲ್ಲಿ 11 ಜನರು ಸಾವಿಗೀಡಾದ ದುರಂತದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕಣ್ಣೀರಿಟ್ಟಿದ್ದಾರೆ. ಶಿವಕುಮಾರ ಅವರು ತಾವು ಕಂಡ ಹೃದಯ ವಿದ್ರಾವಕ ದೃಶ್ಯಗಳನ್ನು ವಿವರಿಸಿದ್ದಾರೆ. ʼಕಾಲ್ತುಳಿತದಲ್ಲಿ (Bengaluru Stampede) “ನಾನು ಮಕ್ಕಳ ಬಗ್ಗೆ ಚಿಂತಿತನಾಗಿದ್ದೇನೆ, ಅವರು 15 ವರ್ಷ ವಯಸ್ಸಿನವರು ಎಂದು ನಾನು ನೋಡಿದೆ. … Continued

ಬೆಂಗಳೂರು | ಆರ್‌ ಸಿಬಿ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ: 11 ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು : ಐಪಿಎಲ್ ಪ್ರಶಸ್ತಿ ಗೆದ್ದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಬುಧವಾರ ಅಭಿನಂದಿಸುವ ಕಾರ್ಯಕ್ರಮದ ವೇಳೆ ಕನಿಷ್ಠ 11 ಜನರು ಕಾಲ್ತುಳಿತದಿಂದ ಸಾವಿಗೀಡಾಗಿದ್ದಾರೆ ಮತ್ತು ಸುಮಾರು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ … Continued