ಚಿತ್ರದುರ್ಗ: ಆಪರೇಷನ್ ಥಿಯೇಟರ್​ನಲ್ಲಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿದ್ದ ವೈದ್ಯ ಸೇವೆಯಿಂದ ವಜಾ

ಚಿತ್ರದುರ್ಗ: ಆಪರೇಷನ್ ಥಿಯೇಟರ್​ನಲ್ಲಿ ಪ್ರಿ ವೆಡ್ಡಿಂಗ್ ಶೂಟ್ (Pre wedding Shoot) ಮಾಡಿಕೊಂಡಿದ್ದ ವೈದ್ಯನನ್ನು ಸೇವೆಯಿಂದ ವಜಾಗೊಳಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ವೈದ್ಯ ಡಾ.ಅಭಿಷೇಕ ಅವರು ಭರಮಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ (Government Hospital) ಪ್ರಿ ವೆಡ್ಡಿಂಗ್ ಶೂಟ್ ಮಾಡಿಕೊಂಡಿದ್ದು, ಈ ವೀಡಿಯೊ ವೈರಲ್ ಆಗಿತ್ತು. ಸುದ್ದಿ ವೈರಲ್‌ ಆದ ನಂತರ ಸರ್ಕಾರಿ ಆಸ್ಪತ್ರೆಯ ಆಪರೇಷನ್ … Continued

ಚಿತ್ರದುರ್ಗ : ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ನಾಲ್ವರು ಸಾವು

ಚಿತ್ರದುರ್ಗ : ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ನಾಲ್ಕು ಮಂದಿ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಸಾಣಿಕೆರೆ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಇಂದು, ಶುಕ್ರವಾರ ನಸುಕಿನ ಜಾವ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ ಆರು ಮಂದಿ ಕಾರಿನಲ್ಲಿ ಬೆಂಗಳೂರಿನ ಕಡೆ ಬರುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ … Continued

ಸಿಇಒನಿಂದ ಮಗನ ಕೊಲೆ ಪ್ರಕರಣ : ಐದು ವಾರಗಳಿಂದ ಮಗನ ಭೇಟಿಗೆ ಸುಚನಾ ಸೇಠ್‌ ಅವಕಾಶ ನೀಡಿರಲಿಲ್ಲ ; ಪತಿ ಹೇಳಿಕೆ

ಪಣಜಿ: ನಾಲ್ಕು ವರ್ಷದ ಮಗುವನ್ನು ಕೊಂದ ಆರೋಪ ಹೊತ್ತಿರುವ ಬೆಂಗಳೂರಿನ ಎಐ ಸ್ಟಾರ್ಟ್‌ಅಪ್ ಸಿಇಒ ಸುಚನಾ ಸೇಠ್ ಅವರಿಂದ ಬೇರ್ಪಟ್ಟ ಪತಿ ಕಳೆದ ಐದು ಭಾನುವಾರಗಳಿಂದ ತಮ್ಮ ಮಗುವನ್ನು ಭೇಟಿಯಾಗಲು ಅವಕಾಶ ನೀಡಿರಲಿಲ್ಲ ಎಂದು ಶನಿವಾರ ಗೋವಾ ಪೊಲೀಸರಿಗೆ ಹೇಳಿದ್ದಾರೆ. ವೆಂಕಟ ರಾಮನ್ ಅವರು ವಿಚಾರಣೆಯ ಭಾಗವಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಬೆಂಗಳೂರಿನಿಂದ ಮಧ್ಯಾಹ್ನ ಗೋವಾದ … Continued

ಮೇಡಂ ಶಾಂತವಾಗಿದ್ದಳು, ದಾರಿಯುದ್ದಕ್ಕೂ ಒಂದು ಮಾತಾಡಿಲ್ಲ…ಗೂಗಲ್‌ ಮ್ಯಾಪಲ್ಲಿ ಠಾಣೆ ಸರ್ಚ್‌ ಮಾಡಿದೆ : ಸುಚನಾ ಸೇಠ್‌ ಬಗ್ಗೆ ಮಹತ್ವದ ಸಂಗತಿ ಬಿಚ್ಚಿಟ್ಟ ಟ್ಯಾಕ್ಸಿ ಚಾಲಕ

ಗೋವಾ: ತನ್ನ ಮಗನನ್ನು ಹತ್ಯೆಗೈದ ಆರೋಪಿ ಬೆಂಗಳೂರಿನ ಸಿಇಒ ಸುಚನಾ ಸೇಠ್ ಅವಳನ್ನು ಗೋವಾದಿಂದ ಕರ್ನಾಟಕಕ್ಕೆ ಕರೆದೊಯ್ಯದ ಟ್ಯಾಕ್ಸಿ ಚಾಲಕ ತನ್ನ 10 ಗಂಟೆಗಳ ಸುದೀರ್ಘ ಪ್ರಯಾಣದ ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದ್ದಾನೆ. ಪ್ರಯಾಣದುದ್ದಕ್ಕೂ ಆರೋಪಿ ಸುಚನಾ ಸೇಠ್ ಮೌನವಾಗಿದ್ದಳು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಗೋವಾದ ತನ್ನ ಸರ್ವಿಸ್ ಅಪಾರ್ಟ್‌ಮೆಂಟ್‌ನಿಂದ ಕ್ಯಾಬ್‌ಗೆ ತನ್ನ ‘ತೂಕ’ದ ಬ್ಯಾಗ್ ಅನ್ನು … Continued

‘ಕೋರ್ಟ್ ಆದೇಶವನ್ನು ಸಹಿಸಲು ಸಾಧ್ಯವಿಲ್ಲ’: ಮುದ್ದೆಯಾದ ಟಿಶ್ಯೂ ಪೇಪರ್‌ ನಲ್ಲಿ ಸುಚನಾ ಸೇಠ್ ಬರೆದ “ಬರಹ” ಪತ್ತೆ…!

ತನ್ನ ನಾಲ್ಕು ವರ್ಷದ ಮಗುವನ್ನು ಕೊಂದ ಆರೋಪದಲ್ಲಿ ಬೆಂಗಳೂರಿನ ಸ್ಟಾರ್ಟ್‌ ಅಪ್‌ನ ಸಿಇಒ ಸುಚನಾ ಸೇಠ್ ಅವಳನ್ನು ಬಂಧಿಸಿದ ಕೆಲವು ದಿನಗಳ ನಂತರ, ತನ್ನ ಮಗನ ಕಸ್ಟಡಿಯನ್ನು ತನ್ನ ಗಂಡನಿಗೆ ಕೊಡಲು ಬಯಸುವುದಿಲ್ಲ ಎಂದು ಸೂಚಿಸುವ ಕೈಬರಹದ “ಗುಪ್ತ ಟಿಪ್ಪಣಿ” ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಂಡಿಯಾ ಟುಡೇ ವರದಿಯ ಪ್ರಕಾರ, ತನ್ನ ಗಂಡನನ್ನು ಹೋಲುವ ತನ್ನ … Continued

ನನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ: ಸಿಎಂಗೆ ಪತ್ರ ಬರೆದ ಕಾಂಗ್ರೆಸ್‌ ಶಾಸಕ ರಘುಮೂರ್ತಿ

ಚಿತ್ರದುರ್ಗ: ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸುವುದು ಬೇಡ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ನಿಗಮ ಮಂಡಳಿ ನೇಮಕಾತಿ ಪಟ್ಟಿ ಸಿದ್ಧಗೊಂಡಿದ್ದು, ಇದೇ ಜನವರಿ ತಿಂಗಳಲ್ಲೇ ಪ್ರಕಟವಾಗಲಿದೆ ಎಂಬ ವರದಿಯ ಬೆನ್ನಲ್ಲೇ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕಾಂಗ್ರೆಸ್‌ ಶಾಸಕ … Continued

ವಿದ್ಯಾಪೀಠದ ದೈನಂದಿನ ವ್ಯವಹಾರದ ಹೊರತಾದ ಯಾವುದೇ ನಿರ್ಧಾರ ಕೈಗೊಳ್ಳುವಂತಿಲ್ಲ: ಮುರುಘಾ ಶರಣರಿಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಚಿತ್ರದುರ್ಗದ ಎಸ್‌ಜೆಎಂ ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಹೊರತುಪಡಿಸಿ ಯಾವುದೇ ನೀತಿ-ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ವಿದ್ಯಾಪೀಠದ ಅಧ್ಯಕ್ಷರಾಗಿರುವ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮೌಖಿಕವಾಗಿ ಸೂಚಿಸಿದೆ. ಪೋಕ್ಸೊ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ ಮಠದ ಎಸ್‌ಜೆ‌ಎಂ … Continued

4 ವರ್ಷದ ಮಗನ ಕೊಲೆ ಆರೋಪಿ ಬೆಂಗಳೂರು ಸಿಇಒ ಸಿಕ್ಕಿಬಿದ್ದಿದ್ದು ಹೇಗೆ..? ಈ ಸುಚನಾ ಸೇಠ್ ಯಾರು…? ಕೊಲೆ ಮಾಡಲು ಕಾರಣ ಏನು..?

 ನವದೆಹಲಿ : ಬೆಂಗಳೂರು ಮೂಲದ ಎಐ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್ ಅವಳನ್ನು ಗೋವಾದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಮಗುವಿನ ದೇಹವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಗೋವಾದಿಂದ ಕ್ಯಾಬ್‌ನಲ್ಲಿ ಬೆಂಗಳೂರಿಗೆ ಹೋಗಲು ಪ್ರಯತ್ನಿಸುತ್ತಿದ್ದಾಗ ಚಿತ್ರದುರ್ಗದ ಬಳಿ ಆಕೆ ಸಿಕ್ಕಿಬಿದ್ದಿದ್ದಾಳೆ. ಸುಚನಾ ಸೇಠ್ ಶನಿವಾರ ಉತ್ತರ ಗೋವಾದ … Continued

ಚಿತ್ರದುರ್ಗ : ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆ

ಚಿತ್ರದುರ್ಗ : ನಗರದ ಚಳ್ಳಕೆರೆ ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಚಿತ್ರದುರ್ಗ ನಗರದ ಚಳ್ಳಕೆರೆ ಟೋಲ್ ಗೇಟ್ ಬಳಿಯ ಹಳೆ ಬೆಂಗಳೂರು ಮಾರ್ಗದ ಜೈಲ್ ರಸ್ತೆಯ ಪಾಳು ಬಿದ್ದ ಮನೆಯೊಂದರಲ್ಲಿ ಈ ಅಸ್ಥಿಪಂಜರಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ. ಜಗನ್ನಾಥ ರೆಡ್ಡಿ ಸಮೀಲ್ ಇಂಜಿನಿಯರ್ ದೊಡ್ಡ ಸಿದ್ದವ್ವನಹಳ್ಳಿ … Continued

2ನೇ ಪೋಕ್ಸೋ ಪ್ರಕರಣ: ಮುರುಘಾ ಶರಣದ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ, ಬಂಧನವಾದ ಕೆಲ ಗಂಟೆಗಳಲ್ಲೇ ಬಿಡುಗಡೆಗೆ ಆದೇಶ

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಹೊರಡಿಸಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಸೋಮವಾರ ಸಂಜೆ ಕರ್ನಾಟಕ ಹೈಕೋರ್ಟ್‌ ಸಂಜೆ ತಡೆ ನೀಡಿದ್ದು, ಆರೋಪಿ ಶರಣರನ್ನು ಬಿಡುಗಡೆ ಮಾಡುವಂತೆ ಚಿತ್ರದುರ್ಗ ಜಿಲ್ಲಾ ಅಧೀಕ್ಷಕರಿಗೆ ನಿರ್ದೇಶಿಸಿದೆ. ವಿಶೇಷ ನ್ಯಾಯಾಲಯದ ಆದೇಶದಂತೆ ಬಂಧಿಸಿ … Continued