ಅಪ್ರಾಪ್ತ ಪತ್ನಿ ಮೇಲೆ, ಪತಿ-ಸ್ನೇಹಿತರಿಂದ ಗ್ಯಾಂಗ್‌ ರೇಪ್

ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಕುರಿತು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾದ ಬಗ್ಗೆ ವರದಿಯಾಗಿದೆ. ವರ್ಷದ ಹಿಂದೆ ಬಾಲಕಿಯನ್ನು ಬೆದರಿಸಿ ಬಲವಂತವಾಗಿ ಮದುವೆಯಾಗಿದ್ದ ಯುವಕ ಹಾಗೂ ಮೂವರು ಸ್ನೇಹಿತರು ಜೂನ್ 7ರಂದು ನಗರದ ಹೊರವಲಯಕ್ಕೆ ಬಾಲಕಿಯನ್ನು ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದರು. ನಂತರ ಈ ಕೃತ್ಯದ ಬಗ್ಗೆ ದೂರು … Continued

ಐತಿಹಾಸಿಕ ಚಿತ್ರದುರ್ಗ ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆ

ಚಿತ್ರದುರ್ಗ: ಐತಿಹಾಸಿಕ ಹಿನ್ನೆಲೆಯ ಚಿತ್ರದುರ್ಗ ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆಯಾಗಿದ್ದಾರೆ. ಚಿತ್ರದುರ್ಗ ಮುರುಘಾ ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು ಶ್ರೀಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ. ಚಿತ್ರದುರ್ಗ ನಗರದ ಮುರುಘಾ ಮಠದ ಶಿರಸಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ಶುಕ್ರವಾರ ಭಕ್ತರ ಸಮ್ಮುಖದಲ್ಲಿ ಶ್ರೀಮಠದ ಉತ್ತರಾಧಿಕಾರಿಯ ಹೆಸರನ್ನು … Continued

ಮರಕ್ಕೆ ಡಿಕ್ಕಿಯಾದ ಬೊಲೆರೊ: ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಬೋಕಿಕೆರೆ ಗೇಟ್ ಬಳಿ ಭಾನುವಾರ ಮುಂಜಾನೆ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ಹೊನ್ನಾವರ ನಿವಾಸಿಗಳಾದ ಶ್ರೀಧರ ನಾಯ್ಕ್, ಜೀವನಕುಮಾರ್, ವಿನಾಯಕ ಎಂದು ಗುರುತಿಸಲಾಗಿದೆ. ಎಲ್ಲರೂ ತುಮಕೂರು ಗ್ಯಾಸ್ ಪೈಪ್ ಲೈನ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು … Continued

ಲಸಿಕೆ ಬೇಡವೆಂದು ಮನೆ ಏರಿ ಕುಳಿತಿದ್ದ ಯುವಕ.. ಮನವೊಲಿಸಿದ ತಹಶೀಲ್ದಾರ..!

ಚಿತ್ರದುರ್ಗ: ಕೊರೊನಾ ಲಸಿಕೆ ಬೇಡವೆಂದು ಮನೆ ಏರಿ ಕುಳಿತಿದ್ದ ಯುವಕನೊಬ್ಬನ ಮನವೊಲಿಸಿ ಕೊರೊನಾ ಲಸಿಕೆ ನೀಡುವಲ್ಲಿ ಚಳ್ಳಕೆರೆ ತಹಶೀಲ್ದಾರ್ ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಎನ್. ದೇವರಹಳ್ಳಿ ಗ್ರಾಮದಲ್ಲಿ ಇಂದು, ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ … Continued

ಪರಿಷತ್‌ ಚುನಾವಣೆ: ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಬಿಜೆಪಿ ಗೆಲುವು, ಕೆಜಿಎಫ್‌ ಬಾಬು ಸೋಲು

ಪರಿಷತ್‌ ಚುನಾವಣೆ: ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಬಿಜೆಪಿ ಗೆಲುವು, ಕೆಜಿಎಫ್‌ ಬಾಬು ಸೋಲು ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ 10ರಂದು ನಡೆದಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಅವರು ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ವಿರುದ್ಧ ನವೀನ್ ಗೆಲುವಿನ ನಗೆ ಬೀರಿದ್ದಾರೆ. ಸತತ … Continued

ಮನೆ ಗೋಡೆ ಕುಸಿದು ದಂಪತಿ ಸಾವು, ಮತ್ತೊಬ್ಬರಿಗೆ ಗಾಯ

ಚಿತ್ರದುರ್ಗ : ಕಳೆದ ಮೂರು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪಕ್ಕದ ಮನೆಯ ಗೋಡೆ ಕುಸಿದು ಮಲಗಿದ್ದ ದಂಪತಿ ಜೀವಂತ ಸಮಾಧಿಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕಾರೋಬನಹಟ್ಟಿಯಲ್ಲಿ ನಡೆದಿದೆ. ಕಾರೋಬನಹಟ್ಟಿಯ ನಿವಾಸಿ ಚನ್ನಕೇಶವ (26) ಮತ್ತು ಸೌಮ್ಯ (21)ಮೃತ ದಂಪತಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚೆನ್ನಕೇಶವ ಅವರ ತಂದೆ ಕ್ಯಾತಣ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. … Continued