ಕನ್ನಡವೂ ಸೇರಿ ಬಹುಭಾಷೆಗಳ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಇನ್ನಿಲ್ಲ

ತಿರುವನಂತಪುರಂ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.. ಮಲಯಾಳಂ ಅಷ್ಟೇ ಅಲ್ಲ, ಜಯಚಂದ್ರನ್ ಅವರು, ಕನ್ನಡ, ತಮಿಳು, ತೆಲುಗು ಹಿಂದಿಯಲ್ಲೂ ಅನೇಕ ಗೀತೆಗಳನ್ನು ಹಾಡಿ ಅಳಿಸಲಾಗದ ಛಾಪು ಮೂಡಿಸಿದ್ದರು. 16000 ಕ್ಕೂ … Continued

ಖ್ಯಾತ ಸಿನೆಮಾ ನಿರ್ದೇಶಕ ಶ್ಯಾಮ್ ಬೆನಗಲ್ ಇನ್ನಿಲ್ಲ

ಮುಂಬೈ: ಖ್ಯಾತ ನಿರ್ದೇಶಕ ಹಾಗೂ 1970 ಮತ್ತು 1980ರ ದಶಕದಲ್ಲಿ ಭಾರತೀಯ ಸಮಾನಾಂತರ ಸಿನಿಮಾಕ್ಕೆ ನಾಂದಿ ಹಾಡಿದ್ದ ಶ್ಯಾಂ ಬೆನಗಲ್ 90 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಪತ್ನಿ ನೀರಾ ಬೆನಗಲ್ ಮತ್ತು ಪುತ್ರಿ ಪಿಯಾ ಬೆನಗಲ್ ಅವರನ್ನು ಅಗಲಿದ್ದಾರೆ. ಡಿಸೆಂಬರ್ 14 ರಂದು 90 ವರ್ಷಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಅವರನ್ನು ಮುಂಬೈನ ವೊಕಾರ್ಡ್ … Continued

ಯಶ್‌ ನಟನೆಯ ‘ಟಾಕ್ಸಿಕ್‌ʼ ಸಿನೆಮಾ ನಿರ್ಮಾಣ ಸಂಸ್ಥೆಗೆ ಹೈಕೋರ್ಟ್‌ನಿಂದ ಸದ್ಯಕ್ಕೆ ರಿಲೀಫ್‌

ಬೆಂಗಳೂರು : ನಟ ಯಶ ಪ್ರಧಾನ ಭೂಮಿಕೆಯಲ್ಲಿರುವ ʼಟಾಕ್ಸಿಕ್‌ʼ ಸಿನಿಮಾದ ಶೂಟಿಂಗ್‌ಗಾಗಿ ಬೆಂಗಳೂರಿನ ಜಾಲಹಳ್ಳಿಯ ಎಚ್‌ಎಂಟಿ ಮೀಸಲು ಅರಣ್ಯದಲ್ಲಿ ಮರಗಳ ಹನನ ಮಾಡಲಾಗಿದೆ ಎಂದು ಆರೋಪಿಸಿ ಚಿತ್ರ ನಿರ್ಮಾಣ ಸಂಸ್ಥೆ ಕೆವಿಎನ್‌ ಮಾನ್‌ಸ್ಟರ್‌ ಮೈಂಡ್‌ ಕ್ರಿಯೇಷನ್ಸ್‌ ಎಲ್‌ಎಲ್‌ಪಿ ವಿರುದ್ಧದ ತನಿಖೆಗೆ ಮತ್ತು ವಿಚಾರಣಾಧೀನ ನ್ಯಾಯಾಲಯದಲ್ಲಿನ ನ್ಯಾಯಾಂಗ ಪ್ರಕ್ರಿಯೆಗೆ ಹೈಕೋರ್ಟ್‌ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು … Continued

ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆಸ್ಪತ್ರೆಗೆ ದಾಖಲು

ಚೆನ್ನೈ: ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ಖ್ಯಾತ ಹಿನ್ನೆಲೆ ಗಾಯಕಿ ಪಿ. ಸುಶೀಲಾ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 86 ವರ್ಷದ ಗಾಯಕಿಯನ್ನು ತೀವ್ರ ಹೊಟ್ಟೆ ನೋವಿನ ತೊಂದರೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಪಿ. ಸುಶೀಲಾ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಆ ಭಾರತೀಯ ಚಿತ್ರರಂಗದ ಎವರ್‌ಗ್ರೀನ್ ನೈಟಿಂಗೇಲ್ ಪಿ. … Continued

ಕಾಪಿರೈಟ್ ಉಲ್ಲಂಘನೆ; ನಟ ರಕ್ಷಿತ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಆರೋಪದಡಿ ಖ್ಯಾತ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಎಂಆರ್‌ಟಿ ಮ್ಯೂಸಿಕ್‌ನ ಪಾಲುದಾರಿಕೆ ಹೊಂದಿರುವ ನವೀನಕುಮಾರ ಎಂಬವರು ’ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿನ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು … Continued

ʼಹಮಾರೆ ಬಾರಹ’ ಸಿನೆಮಾ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ

ಮುಂಬೈ: ‘ಹಮಾರೆ ಬಾರಹ’ ಸಿನಿಮಾ ಬಿಡುಗಡೆಗೆ ಬಾಂಬೆ ಹೈಕೋರ್ಟ್‌ ಬುಧವಾರ ಅನುಮತಿ ನೀಡಿದೆ. ಸಿನೆಮಾದಲ್ಲಿನ ಕೆಲವು ಆಕ್ಷೇಪಾರ್ಹ ಭಾಗಗಳಿಗೆ ಕತ್ತರಿ ಹಾಕಲು ಚಿತ್ರತಂಡವು ಒಪ್ಪಿದ ನಂತರ ಬಾಂಬೆ ಹೈಕೋರ್ಟ್‌ ಬಿಡುಗಡೆಗೆ ಅನುಮತಿ ನೀಡಿದೆ. ಹಮಾರೆ ಬಾರಹ ಸಿನಿಮಾ ಜೂನ್‌ 7ಕ್ಕೆ ಬಿಡುಗಡೆ ಆಗಬೇಕಿತ್ತು. ನಂತರ ಇದರ ಬಿಡುಗಡೆ ದಿನಾಂಕವನ್ನು ಜೂನ್ 14ಕ್ಕೆ ಮುಂದೂಡಲಾಗಿತ್ತು. ಈ ಚಿತ್ರವು … Continued

‘ಹಮಾರೆ ಬಾರಹ’ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಹಮಾರೆ ಬಾರಹ’ ಚಿತ್ರದ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದ್ದು ಇಸ್ಲಾಮ್‌ ನಂಬಿಕೆ ಮತ್ತು ವಿವಾಹಿತ ಮುಸ್ಲಿಂ ಮಹಿಳೆಯರನ್ನು ಅವಹೇಳನ ಮಾಡುತ್ತದೆ ಎಂದು ಆರೋಪಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ತ್ವರಿತ ನಿರ್ಧಾರ ತೆಗೆದುಕೊಳ್ಳುವಂತೆ ಬಾಂಬೆ ಹೈಕೋರ್ಟ್‌ಗೆ ಸೂಚಿಸಿದೆ. ಚಲನಚಿತ್ರ ಪ್ರಮಾಣೀಕರಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಇತ್ಯರ್ಥವಾಗುವವರೆಗೆ ಚಲನಚಿತ್ರ ಪ್ರದರ್ಶನ ಮಾಡುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ವಿಕ್ರಂನಾಥ … Continued

ವೀಡಿಯೊ…| ಬಾಲಿವುಡ್‌ ನಟರಾದ ಅಕ್ಷಯಕುಮಾರ, ಟೈಗರ್ ಶ್ರಾಫ್ ಕಾರ್ಯಕ್ರಮದಲ್ಲಿ ಜನಸಮೂಹದಿಂದ ಕಲ್ಲು ತೂರಾಟ-ಚಪ್ಪಲಿ ಎಸೆತ-ಲಾಠಿ ಚಾರ್ಜ್‌

ನವದೆಹಲಿ : ಸೋಮವಾರ, ಲಕ್ನೋದಲ್ಲಿ ನಡೆದ ಬಾಲಿವುಡ್ ನಟರಾದ ಅಕ್ಷಯಕುಮಾರ ಮತ್ತು ಟೈಗರ್ ಶ್ರಾಫ್ ತಮ್ಮ ಮುಂಬರುವ ಚಿತ್ರ ಬಡೇ ಮಿಯಾನ್ ಚೋಟೆ ಮಿಯಾನ್ ಪ್ರಚಾರ ಕಾರ್ಯಕ್ರಮವು ಅನಿರೀಕ್ಷಿತ ಘಟನೆಗಳಿಗೆ ಸಾಕ್ಷಿಯಾಯಿತು. ಇಬ್ಬರೂ ತಮ್ಮ ಉತ್ಸಾಹಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಲು ಘಂಟಾಘರ್‌ ನಲ್ಲಿನ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಜನಸ್ತೋಮವು ಉನ್ಮಾದಕ್ಕೆ … Continued