ವಿಮಾನ ನಿಲ್ದಾಣದಲ್ಲಿ ಪ್ರತಿ ಬಾರಿಯೂ ಕೃತಕ ಕಾಲು ತೆಗೆಸುವ ಸಿಬ್ಬಂದಿ: ಸುಧಾ ಚಂದ್ರನ್ ಕ್ಷಮೆಯಾಚಿಸಿದ ಸಿಐಎಸ್‌ಎಫ್

ನವದೆಹಲಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಶುಕ್ರವಾರ ನಟಿ ಹಾಗೂ ಭರತನಾಟ್ಯ ಸುಧಾ ಚಂದ್ರನ್ ಅವರ ಕ್ಷಮೆಯಾಚಿಸಿದೆ. ಇತ್ತೀಚೆಗೆ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ಅವರ ಕೃತಕ ಕಾಲನ್ನು ಬಿಚ್ಚಿ ತೋರಿಸುವಂತೆ ಸೂಚಿಸುವ ಮೂಲಕ ಅವಮಾನ ಮಾಡಲಾಗಿತ್ತು ಎಂದು ಸುಧಾ ಚಂದ್ರನ್‌ ಹೇಳಿದ್ದರು ಹಾಗೂ ಈ ಕುರಿತು ಪ್ರಧಾನಿ ಹಾಗೂ ಸರ್ಕಾರಕ್ಕೂ ಮನವಿ ಮಾಡಿದ್ದರು. … Continued