ಬೆಳಗಾವಿ ಗಡಿ ವಿವಾದ : ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ, ಸಮರ್ಥ ಕಾನೂನು ತಂಡ ರಚನೆ-ಸಿಎಂ ಬೊಮ್ಮಾಯಿ

ಬೆಂಗಳೂರು: ಮಹಾರಾಷ್ಟ್ರದ ಜೊತೆಗಿನ ಗಡಿ ವಿವಾದ ಕುರಿತಂತೆ ರಾಜ್ಯದ ಪರ ಸಮರ್ಥವಾಗಿ ವಾದ ಮಂಡಿಸಲು ಬಲಿಷ್ಠ ಕಾನೂನು ತಂಡ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಿರಿಯ ವಕೀಲರಾದ ಮುಕುಲ್‌ ರೋಹಟಗಿ, ಶಾಮ್‌ ದಿವಾನ್‌, ಉದಯ್‌ ಹೊಳ್ಳ ಹಾಗೂ ಮಾರುತಿ ಜಿರಲೆ ಅವರು ತಂಡದಲ್ಲಿದ್ದಾರೆ. ರಾಜ್ಯದ ಪರ ವಾದ ಮಂಡನೆಗೆ ಅಗತ್ಯವಾದ ಎಲ್ಲ ಸಿದ್ಧತೆ … Continued

ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ: 2013ರಿಂದ ತನಿಖೆಗೆ ಆದೇಶ, ಕಾಂಗ್ರೆಸ್‌ಗೆ ತಿರುಗುಬಾಣವಾಗಲಿದೆ-ಸಿಎಂ ಬೊಮ್ಮಾಯಿ

ಬೆಂಗಳೂರು : 2013ರಿಂದಲೂ ಚಿಲುಮೆ ಸಂಸ್ಥೆಗೆ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಇತರ ಜವಾಬ್ದಾರಿಗಳನ್ನು ವಹಿಸಿದ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದೇನೆ. ತನಿಖೆಯ ಮೂಲಕ ಎಲ್ಲ ಸತ್ಯಗಳು ಹೊರಬರಲಿದೆ. ನಿರಾಧಾರ ಆರೋಪ ಮಾಡುತ್ತಿರುವ ಕಾಂಗ್ರೆಸ್ನ ಈ ಪ್ರಯತ್ನ, ಮುಂದಿನ ದಿನಗಳಲ್ಲಿ ಅವರಿಗೆ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಕಾವೇರಿ ನಿವಾಸದ ಬಳಿ … Continued

ನಂದಿನಿ ಹಾಲು, ಮೊಸರಿನ ದರ ಹೆಚ್ಚಳಕ್ಕೆ ಸದ್ಯಕ್ಕೆ ಸಿಎಂ ಬೊಮ್ಮಾಯಿ ಬ್ರೇಕ್: ನ.20ರ ನಂತರ ನಿರ್ಧಾರ

ಕಲಬುರಗಿ : ನಂದಿನಿ ಹಾಲಿನ ದರ ಏರಿಕೆ ಬಗ್ಗೆ ನವೆಂಬರ್‌ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಸೋಮವಾರ ಸೇಡಂನಲ್ಲಿ ನಂದಿನಿ ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮವರಿಗೆ ಪ್ರತಿಕ್ರಿಯೆ ನೀಡಿ, ಕಳೆದ … Continued

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಬುಧವಾರ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲು ತೀರ್ಮಾನಿಸಲಾಗಿದೆ … Continued

7ನೇ ವೇತನ ಆಯೋಗ ರಚನೆಗೆ ಸಿಎಂ ಸಮ್ಮತಿ: ಎರಡ್ಮೂರು ದಿನದಲ್ಲಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗ ರಚನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದು, ಎರಡು ದಿನಗಳಲ್ಲಿ ಆದೇಶ ಹೊರಬೀಳಲಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಾಕ್ಷರಿ ಅವರು, ನೌಕರರ ವೇತನ ಪರಿಷ್ಕರಣೆಗಾಗಿ ಸದ್ಯದಲ್ಲೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ … Continued

ಪತ್ರಕರ್ತರಿಗೆ ಉಡುಗೊರೆ ಆರೋಪ ಕಾಂಗ್ರೆಸ್​ನ ಅಪಪ್ರಚಾರದ ಟೂಲ್ ಕಿಟ್: ಸಿಎಂ ಬೊಮ್ಮಾಯಿ‌ ವಾಗ್ದಾಳಿ

ಬೆಂಗಳೂರು : ಎಲ್ಲ ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ಉಡುಗೊರೆ ನೀಡಲಾಗಿದೆ ಎನ್ನುವುದು ಕಾಂಗ್ರೆಸ್​ನ ಅಪಪ್ರಚಾರದ ಟೂಲ್ ಕಿಟ್. ಸುಳ್ಳು ಹೇಳುವ ಮೂಲಕ ಎಲ್ಲ ಪತ್ರಕರ್ತರಿಗೆ ಅವಮಾನಿಸಿರುವುದನ್ನು ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿಗಳ ಕಚೇರಿಯಿಂದ ಕೆಲವು ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ 1 ಲಕ್ಷ ರೂಪಾಯಿ ನಗದು ಉಡುಗೊರೆ ನೀಡಿರುವ … Continued

ರಾಜ್ಯದ 5 ಕಡೆ ಕೈಗಾರಿಕಾ ವಿಶೇಷ ಟೌನ್ ಶಿಪ್‌ ನಿರ್ಮಾಣ : ಸಿಎಂ ಬೊಮ್ಮಾಯಿ ಘೋಷಣೆ

ಹುಬ್ಬಳ್ಳಿ: ರಾಜ್ಯದ ಧಾರವಾಡ, ಚಿತ್ರದುರ್ಗ, ಹಾವೇರಿ, ದಾವಣಗೆರೆ, ಬೆಳಗಾವಿಯಲ್ಲಿ ಕೈಗಾರಿಕಾ ವಿಶೇಷ ಟೌನ್‌ಶಿಪ್‌ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಮುಮ್ಮಿಗಟ್ಟಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ‘ಎಫ್‌ಎಂಸಿಜಿ ಕ್ಲಸ್ಟರ್‌(ಫಾಸ್ಟ್‌ ಮೂವಿಂಗ್‌ ಕನ್ಸ್ಯೂಮರ್‌ ಗೂಡ್ಸ್‌) ಬಂಡವಾಳ ಹೂಡಿಕೆದಾರರ ಒಡಂಬಡಿಕೆ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ಮುಂಬೈ- ಚೆನ್ನೈ ಕೈಗಾರಿಕಾ ಕಾರಿಡಾರ್‌ … Continued

ಕಿತ್ತೂರು ಬಳಿ ಸಾವಿರ ಎಕರೆ ಕೈಗಾರಿಕಾ ಟೌನ್‌ಶಿಪ್ ನಿರ್ಮಾಣ: ಸಿಎಂ ಬೊಮ್ಮಾಯಿ

ಬೆಳಗಾವಿ : ಕಿತ್ತೂರು ಬಳಿ ಇರುವ ಕೆಐಎಡಿಬಿ ಜಾಗದಲ್ಲಿ 1000 ಎಕರೆ ಕೈಗಾರಿಕಾ ಟೌನ್‌ಶಿಪ್ ನಿರ್ಮಿಸಲು ನಿರ್ಧರಿಸಲಾಗಿದೆ. ಶೀಘ್ರವೇ ಈ ನಿಟ್ಟಿನಲ್ಲಿ ಕೆಲಸ ಆರಂಭಿಸಿ 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ … Continued

ಸಚಿವ ಸಂಪುಟ ವಿಸ್ತರಣೆಯೋ ? ಪುನರ್ ರಚನೆಯೋ ? ಕಾದು ನೋಡಿ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಸಚಿವ ಸಂಪುಟದ ಕುರಿತು ಚರ್ಚಿಸಲು ಬಿಜೆಪಿ ಕೇಂದ್ರ ನಾಯಕತ್ವವನ್ನು ಭೇಟಿ ಮಾಡಲು ಶೀಘ್ರದಲ್ಲೇ ನವದೆಹಲಿಗೆ ತೆರಳುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ. ಆದರೆ ಇದು ಸಚಿವ ಸಂಪುಟ ವಿಸ್ತರಣೆಯೇ ಅಥವಾ ಪುನರ್ರಚನೆಯೇ ಎಂಬುದು ಸಸ್ಪೆನ್ಸ್ ಆಗಿ ಉಳಿಸಿಕೊಂಡಿದೆ. ಸಂಪುಟಕ್ಕೆ ಯಾರನ್ನು ಸೇರ್ಪಡೆಗೊಳಿಸಬೇಕು ಎಂಬುದನ್ನು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ನಿರ್ಧರಿಸುತ್ತದೆ ಎಂದು ಅವರು … Continued

ಕನ್ನಡ ರಾಜ್ಯೋತ್ಸವದಂದು ಪುನೀತ ರಾಜಕುಮಾರ​ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು: ಪವರ್‌ಸ್ಟಾರ್‌ ದಿವಂಗತ ಪುನೀತ್ ರಾಜ್​ಕುಮಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕೊಡಲು ತೀರ್ಮಾನಿಸಿದ್ದು, ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು, ಗುರುವಾರ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ … Continued