ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯಲು ಕ್ಯಾಬಿನೆಟ್ ತೀರ್ಮಾನ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ರದ್ದು ಮಾಡುವ ಪ್ರಸ್ತಾವೆನೆಗೆ ರಾಜ್ಯ ಸಚಿವ ಸಂಪುಟದ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿ ನವೆಂಬರ್‌ ೨೫ರಂದು ಬಿಜೆಪಿ ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದರು, ಮಾಜಿ ಸಚಿವರು, ಶಾಸಕರು … Continued

ನಿಗಮ, ಮಂಡಳಿ ನೇಮಕಾತಿ ಕಗ್ಗಂಟು, ಒಮ್ಮತ ಮೂಡಿಸಲು ಕಸರತ್ತು : ಡಿಸೆಂಬರ್‌ನಲ್ಲಿ ನೇಮಕಾತಿ…?

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ಆರು ತಿಂಗಳ ನಂತರ ಬಾಕಿ ಉಳಿದಿರುವ ಮಂಡಳಿ ಮತ್ತು ನಿಗಮಗಳಿಗೆ ನೇಮಕಾತಿ ಮಾಡುವಂತೆ ಒತ್ತಡಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಕರ್ನಾಟಕ ಉಸ್ತುವಾರಿ … Continued

ದಾಖಲೆ ಬಿಡುಗಡೆ ಮಾಡಿ ”ತಾನು ಕಳ್ಳ ಪರರ ನಂಬ” ಎಂದು ಕುಮಾರಸ್ವಾಮಿಗೆ ಲೇವಡಿ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರ ಫೋನ್ ಸಂಭಾಷಣೆ ವೀಡಿಯೊ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಲ್ಲಿದದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಡುವೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಕುಮಾರಸ್ವಾಮಿ ಆರೋಪ ತಳ್ಳಿ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ, ಯತೀಂದ್ರ ಸಿದ್ದರಾಮಯ್ಯ ಯಾವ ವರ್ಗಾವಣೆ ಬಗ್ಗೆ ಕೂಡ … Continued

ಕಾಂಗ್ರೆಸ್ ಸರ್ಕಾರದ ವಸೂಲಿ ದಂಧೆ ಹಾದಿಬೀದಿಗೆ: ಸಿಎಂ ಪುತ್ರನ ವೀಡಿಯೊ ಬಿಡುಗಡೆ ಮಾಡಿ ಜನರಿಗೆ ಉತ್ತರಕೊಡಿ ಎಂದು ಎಚ್‌ಡಿಕೆ ಸವಾಲು

ಬೆಂಗಳೂರು: ಕಾಸಿಗಾಗಿ ಹುದ್ದೆ (#CashForPosting) ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವೀಡಿಯೊ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ … Continued

ನಿಗಮ ಮಂಡಳಿಗಳಿಗೆ ಶೀಘ್ರವೇ ನೇಮಕ ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ; ಸಿಎಂ ಸಿದ್ದರಾಮಯ್ಯ

ಮಂಗಳೂರು : ನಿಗಮ – ಮಂಡಳಿಗಳಿಗೆ ಶೀಘ್ರವೇ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಹಾಗೂ ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿಯಲ್ಲಿ ಆಯೋಜಿಸಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ನಿಗಮ ಮಂಡಳಿಗಳಲ್ಲಿ ಎರಡನೇ ಹಂತದಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು … Continued

ಸಾರಿಗೆ ನಿಗಮಗಳಿಗೆ 5675 ಬಸ್‌ ಖರೀದಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಶಕ್ತಿ ಯೋಜನೆಗೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್‌ ಖರೀದಿಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ ಗಳ ಖರೀದಿಗೆ 500 ಕೋಟಿ ರೂ. ತೆಗೆದಿರಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು … Continued

ಅತ್ತಿಬೆಲೆ ಪ್ರಕರಣ: 3 ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

ಬೆಂಗಳೂರು: ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್‌ಪೆಕ್ಟರ್ ಮತ್ತು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಅಮಾನತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಪ್ರಕರಣದ ಸಂಬಂಧ ಇಂದು, ಮಂಗಳವಾರ ಸಭೆ ನಡೆಸಿದ ಅವರು, ಈ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಪಟಾಕಿ ವಿಚಾರದಲ್ಲಿ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ … Continued

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಮಾಸಾಶನವನ್ನು (monthly pension) ಮುಂದಿನ ಬಜೆಟ್‌ನಲ್ಲಿ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ … Continued

ವಿದ್ಯುತ್‌ ಉತ್ಪಾದನೆ ಸಾಮರ್ಥ್ಯಕ್ಕಿಂತ ಕಡಿಮೆಯಾಗಿದ್ದು ಏಕೆ? : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ರಾಜ್ಯದ ವಿದ್ಯುತ್‌ ಉತ್ಪಾದನೆಯು ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತವಾಗಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಿಮಾಯ್ಯ ಅವರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು, ಶುಕ್ರವಾರ ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ವೇಳೆ 32,009 ಮೆಗಾ ವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಇದ್ದರೂ ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಯಾಕೆ ಹೆಚ್ಚಳವಾಗಿಲ್ಲ … Continued

ಕಾವೇರಿ ವಿವಾದ: ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಕೇಂದ್ರ ಜಲಶಕ್ತಿ ಸಚಿವರ ಭೇಟಿ

ನವದೆಹಲಿ : ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯದ ಜನಪ್ರತಿನಿಧಿಗಳು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಅವರನ್ನು ಗುರುವಾರ ಭೇಟಿಯಾಗಿದ್ದಾರೆ. ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಗಜೇಂದ್ರ ಸಿಂಗ್ ಶೇಖಾವತ್ ನಿವಾಸದಲ್ಲಿ ಭೇಟಿಯಾಗಿ ನೀರು ಹಂಚಿಕೆ ವಿವಾದದ ಕುರಿತು ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ … Continued