ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟೀನ್ ಪ್ರಾರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟೀನ್‌ ನಿರ್ವಹಣೆ ಕುರಿತಂತೆ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಿದರು. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲೇ 175 ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗಿತ್ತು. ಹಾಗೆಯೇ ಹಲವು ಜಿಲ್ಲಾ ಕೇಂದ್ರಗಳಲ್ಲೂ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಸಿದ್ದರಾಮಯ್ಯ ಈಗ ತಮ್ಮ ಸರ್ಕಾರದ ಈ … Continued

ಜೂನ್‌ 11ರಂದು ಶಕ್ತಿ ಯೋಜನೆಗೆ ಚಾಲನೆ: ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ…!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಮೂರನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ. ಅದರಂತೆ ಜೂನ್ 11 ರಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಲಿದ್ದಾರೆ. ಇದೇ ಭಾನುವಾರ ಜೂನ್‌ 11ರಂದು ಮೊದಲ ಯೋಜನೆಗೆ ವಿಧಾನಸೌಧ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ … Continued

ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶಾಲಾ ಪಠ್ಯ ಪರಿಷ್ಕರಣೆಗೆ ಮುಂದಾಗಿದೆ. ಈ ಸಂಬಂಧ ಸಾಹಿತಿ ಬರಗೂರು ರಾಮಚಂದ್ರಪ್ಪ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದರು. ಆದರೆ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದಿದ್ದಾರೆ. ಶಾಲಾ ಪಠ್ಯ ಪರಿಷ್ಕರಣೆ ಗೊಂದಲ ನಿವಾರಣೆಗೆ … Continued

ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಅಕ್ರಮದ ಬಗ್ಗೆ ತನಿಖೆಗೆ ಸಿಎಂ ಸೂಚನೆ

ಬೆಂಗಳೂರು : ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ ಕುರಿತು ಮಂಗಳವಾರ ಟಿಪ್ಪಣಿ ಹೊರಡಿಸಿರುವ ಅವರು, “ದಿನಾಂಕ 23-7-2022 ಮತ್ತು 24-7-2022 ರಂದು ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ … Continued

ಬಾಡಿಗೆದಾರರಿಗೂ ಗೃಹ ಬಳಕೆ ವಿದ್ಯುತ್ ಉಚಿತ, ವಾಣಿಜ್ಯ ಬಳಕೆಗೆ ಇಲ್ಲ : ಸಿಎಂ ಸಿದ್ಧರಾಮಯ್ಯ.

ಬೆಂಗಳೂರು: ರಾಜ್ಯಾದ್ಯಂತ ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ 200 ಯುನಿಟ್​ ಒಳಗೆ ಬಳಸಿದರೆ ವಿದ್ಯುತ್‌ ಉಚಿತ. ಆದರೆ ವಾಣಿಜ್ಯ ಉದ್ದೇಶಕ್ಕೆ ವಿದ್ಯುತ್​ ಬಳಸುವವರಿಗೆ ಈ ನಿಯಮ ಅನ್ವಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಪುಣ್ಯಸ್ಮರಣೆ ನಿಮಿತ್ತ ವಿಧಾನಸೌಧ ಆವರಣದಲ್ಲಿ ಅವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ಮಂಗಳವಾರ … Continued