ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬೆನ್ನಲ್ಲೇ ಸಿಎಂ, ಡಿಸಿಎಂಗೆ ಬಾಂಬ್​ ಸ್ಫೋಟಿಸುವ ಬೆದರಿಕೆಯ ಇ-ಮೇಲ್

ಬೆಂಗಳೂರು : ರಾಮೇಶ್ವರಂ ಕೆಫೆ ಮಾದರಿಯಲ್ಲೇ ಮತ್ತೊಮ್ಮೆ ಬಾಂಬ್ ಸ್ಫೋಟ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಬೆಂಗಳೂರು ಪೊಲೀಸ್‌ ಕಮಿಷನರ್‌ ಅವರಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಗೃಹ ಸಚಿವರಿಗೆ ಮೇಲ್ ಮಾಡಿರುವ ದುಷ್ಕರ್ಮಿಗಳು, ಕಳೆದ ಮಾರ್ಚ್‌ 2ರ ಶನಿವಾರ ಮಧ್ಯಾಹ್ನ ಬೆದರಿಕೆ ಇ-ಮೇಲ್‌ ಕಳುಹಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ … Continued

ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ; ವರದಿಯಲ್ಲಿರುವ ಪ್ರಮುಖ ಅಂಶಗಳು

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಗಣತಿ (ಕರ್ನಾಟಕ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಯು ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ತೀವ್ರ ವಿರೋಧದ ನಡುವೆಯೂ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಸಮಿತಿ ದತ್ತಾಂಶದ ಆಧಾರದ ಮೇಲೆ ಸಿದ್ಧಪಡಿಸಲಾದ ವರದಿಯನ್ನು … Continued

ತನಿಖೆಯಲ್ಲಿ ಪಾಕ್ ಪರ ಘೋಷಣೆ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮಂಗಳವಾರ ನೂತನ ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸಿರ್ ಹುಸೇನ್ ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದ್ದು ಬುಧವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ತೀವ್ರ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ವೀಡಿಯೊವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ … Continued

ಸಿಎಂ ನಿಂದನೆ : ಅನಂತಕುಮಾರ​ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

ಕಾರವಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮುಂಡಗೋಡ ತಾಲೂಕಿನ ಪಾಳಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ ಹೆಗಡೆ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು … Continued

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ : ಲಂಚ ಪಡೆದ ಆರೋಪದ ಪ್ರಕರಣದಲ್ಲಿ ಮರು ತನಿಖೆಗೆ ಕೋರ್ಟ್ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಪ್ರಕಣದ ಮುಕ್ತಾಯ ವರದಿ(ಬಿ ರಿಪೋರ್ಟ್‌)ಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಹಾಗೂ ಪ್ರಕರಣವನ್ನು ಮರುತನಿಖೆ ನಡೆಸಿ 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ … Continued

ಕರ್ನಾಟಕ ಬಜೆಟ್ 2024 : ಸಿದ್ದರಾಮಯ್ಯ ಕೃಷಿ ವಲಯಕ್ಕೆ ಕೊಟ್ಟಿದ್ದೇನು..?

ಬೆಂಗಳೂರು : ಕರ್ನಾಟಕ ಬಜೆಟ್ 2024ನಲ್ಲಿ ಕೃಷಿ ಕ್ಷೇತ್ರಕ್ಕೆ 6688 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಇದೇ ವೇಳೆ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಈ ಯೋಜನೆಯಡಿಯಲ್ಲಿ ರೈತರಿಗೆ ಕೃಷಿ, ಪಶುಸಂಗೋಪನೆ, ತೋಟಗಾರಿಕೆಗೆ ಬೆಂಬಲ ನೀಡಲಾಗುತ್ತದೆ. ಅಲ್ಲದೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಗೆ ಬೆಂಬಲ ನೀಡುತ್ತದೆ. ಅಲ್ಲದೆ, … Continued

ಕರ್ನಾಟಕ ಬಜೆಟ್ 2024: ಅನ್ನ ಸುವಿಧಾ, ಕೆಫೆ ಸಂಜೀವಿನಿ ಎಂಬ ಎರಡು ನೂತನ ಯೋಜನೆಗಳು ಪ್ರಕಟ : ಏನಿದು ಯೋಜನೆ..?

ಬೆಂಗಳೂರು: ಕರ್ನಾಟಕ ಬಜೆಟ್ 2024ರಲ್ಲಿ ರಾಜ್ಯ ಸರ್ಕಾರವು ಹೊಸದಾಗಿ ಮತ್ತೊಂದು ಸಾಮಾಜಿಕ ಭದ್ರತಾ ಯೋಜನೆಯನ್ನು ಪ್ರಕಟಿಸಿದೆ. ಈ ನೂತನ ಸಾಮಾಜಿಕ ಭದ್ರತಾ ಯೋಜನೆಗೆ ಅನ್ನ ಸುವಿಧಾ ಯೋಜನೆ ಎಂದು ಹೆಸರಿಸಿದೆ. 80 ವರ್ಷ ಮತ್ತು ಮೇಲ್ಪಟ್ಟ ಫಲಾನುಭವಿಗಳಿಗೆ ಸಹಾಯವನ್ನು ಮಾಡುವ ನಿಟ್ಟಿನಲ್ಲಿ ಸರ್ಕಾರವು ಈ ಯೋಜನೆಯನ್ನು ಆರಂಭ ಮಾಡಿದೆ. ‘ಅನ್ನ ಸುವಿಧ’ ಯೋಜನೆ ಮೂಲಕ ವಯಸ್ಸಾದವರಿಗೆ … Continued

ಕರ್ನಾಟಕ ಬಜೆಟ್ 2024 : ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಸ್ಮಾರ್ಟ್ ಫೋನ್ ; ಮಾಜಿ ದೇವದಾಸಿಯರು- ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾಸಾಶನ ಹೆಚ್ಚಳ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಸವಲತ್ತು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಮಾಜಿ ದೇವದಾಸಿಯರಿಗೆ ಮಾಸಾಶನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ಕಾರ್ಯಕರ್ತೆಯರಿಗೆ ಅಂಗನವಾಡಿ ಚಟವಟಿಕೆಗಳ ಸುಗಮಕ್ಕಾಗಿ 90 ಕೋಟಿ ವೆಚ್ಚದಲ್ಲಿ 75,938 ಸ್ಟಾರ್ಟ್​​​ಫೋನ್​ ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ಸುಮಾರು … Continued

ಕರ್ನಾಟಕ ಬಜೆಟ್ 2024 : ಬೆಂಗಳೂರಿಗೆ ಸಿಕ್ಕಿದ್ದೇನು…?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 2024-25ನೇ ಹಣಕಾಸು ವರ್ಷದ ಆಯವ್ಯಯದಲ್ಲಿ ಬೆಂಗಳೂರಿಗೆ ಭರಪೂರ ಕೊಡುಗೆಗಳನ್ನು ನೀಡಲಾಗಿದೆ. ಬೆಂಗಳೂರು ಅಭಿವೃದ್ಧಿಗೆ, ವಿಶೇಷವಾಗಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಅಲ್ಲದೆ, ಬೆಂಗಳೂರಿನಲ್ಲಿ 6000 ಕೋಟಿ ರೂ. ಗಳಷ್ಟು ತೆರಿಗೆ ಸಂಗ್ರಹದ ಗುರಿಯನ್ನೂ ಇಟ್ಟುಕೊಳ್ಳಲಾಗಿದೆ.  ಬಜೆಟ್‌ನಲ್ಲಿ ಬೆಂಗಳೂರಿಗೆ ಕೊಟ್ಟಿದ್ದೇನು..? • ಬೆಂಗಳೂರಲ್ಲಿ ಹೋಟೆಲ್ ವ್ಯಾಪಾರದ … Continued

ಕರ್ನಾಟಕ ಬಜೆಟ್ 2024 : ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆ, ಮಾಜಿ ಸಿಎಂ ಎಸ್. ಬಂಗಾರಪ್ಪ ಸ್ಮಾರಕ ನಿರ್ಮಾಣದ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲ ಕಚೇರಿಗಳು, ಅಂಗಡಿ – ಮುಂಗಟ್ಟುಗಳು, ವಿವಿಧ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ. ಬಸವಣ್ಣನವರ ಬದುಕು, ಚಿಂತನೆಯನ್ನು ಪ್ರಚಾರ ಮಾಡಲು ಬಸವ ಜಯಂತಿಯಂದು ಸರ್ವ ಧರ್ಮ ಸಂಸತ್ತನ್ನು ಆಯೋಜನೆ ಮಾಡಲಾಗುವುದು … Continued